ಜನರು ಸ್ವಂತ ಮನೆ ಕಟ್ಟಲು ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎಗೆ ಅಲೆಯಬೇಕಿದೆ: ಆರ್‌ ಅಶೋಕ್‌

Date:

ಸಾರ್ವಜನಿಕರು ತಮ್ಮ ಸ್ವಂತ ನಿವೇಶನದಲ್ಲಿ ತಮ್ಮ ಸ್ವಂತ ದುಡ್ಡಿನಲ್ಲಿ ಮನೆ ಕಟ್ಟಿಸಬೇಕಾದರೂ ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎ ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

“ಕಾಂಗ್ರೆಸ್‌ನ ತುಘಲಕ್ ಸರ್ಕಾರದ ಆಡಳಿತದಲ್ಲಿ ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಂತಾಗಿದೆ” ಎಂದು ಎಕ್ಸ್‌ ತಾಣದಲ್ಲಿ ಬರೆದಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರ ಚದರ ಅಡಿ (50X80) ವಿಸ್ತೀರ್ಣದ ವರೆಗಿನ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಆನ್‌ಲೈನ್‌ ಮೂಲಕ ನಕ್ಷೆ ಮಂಜೂರಾತಿಗೆ ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಬಿಟ್ಟಿ ಪ್ರಚಾರ ಪಡೆದುಕೊಂಡ ಕಾಂಗ್ರೆಸ್‌ ಸರ್ಕಾರ, ಈಗ ಏಕಾಏಕಿ ನಿಯಮ ಬದಲಾವಣೆ ಮಾಡಿ ಬಿಡಿಎ ಬಡಾವಣೆಗಳಲ್ಲಿರುವ ನಿವೇಶನಗಳಿಗೆ ಬಿಡಿಎ ಬಳಿಯೇ ನಕ್ಷೆ ಅನುಮತಿ ಪಡೆಯಬೇಕು ಎಂಬ ಆದೇಶ ಹೊರಡಿಸಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ ತಾವು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡುವಾಗ ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲವೇ? ಬಿಬಿಎಂಪಿ ಮತ್ತು ಬಿಡಿಎ ನಡುವೆ ತಾಳಮೇಳವಿಲ್ಲದೆ ನಿಯಮಗಳನ್ನು ಮನಬಂದಂತೆ ಬದಲಾಯಿಸಿದರೆ ಸಾರ್ವಜನಿಕರಿಗೆ ತೊಂದರೆ ಆಗುವುದಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...