ಮಂಡ್ಯ ಬಂದ್‌ಗೆ ಜನರೇ ತಿರುಗಿ ಬಿದ್ದಿದ್ದಾರೆ, ಯಾವ ಪುರುಷಾರ್ಥಕ್ಕೆ ಬಿಜೆಪಿ, ಜೆಡಿಎಸ್‌ ಹೋರಾಟ?: ಚಲುವರಾಯಸ್ವಾಮಿ ಗುಡುಗು

Date:

ಮಂಡ್ಯವನ್ನು ಮತ್ತೊಂದು ಮಂಗಳೂರು ಮಾಡುವುದಕ್ಕೆ ಜೆಡಿಎಸ್‌–ಬಿಜೆಪಿಯವರು ಸತತ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಮೈಸೂರಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, “ಧ್ವಜದ ವಿಚಾರದಲ್ಲಿ ಕರೆ ಕೊಟ್ಟಿರುವ ಮಂಡ್ಯ ಬಂದ್‌ಗೆ ಜನರೇ ತಿರುಗಿ ಬಿದ್ದಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನವರು ಹಾಗೂ ಬಿಜೆಪಿಯವರು ಮಂಡ್ಯದಲ್ಲಿ ಯಾವ ಪುರುಷಾರ್ಥಕ್ಕೆ ಹೋರಾಟ ಅಥವಾ ಬಂದ್ ಮಾಡುತ್ತಿದ್ದಾರೋ” ಎಂದು ಕುಟುಕಿದರು.

“ರೈತರಿಗಾಗಿ, ಕಾವೇರಿ ನೀರಿಗಾಗಿ ಹೋರಾಟ ಅಥವಾ ಬಂದ್ ಮಾಡಿದರೆ ನಾವೂ ಬೆಂಬಲಿಸುತ್ತೇವೆ. ಆದರೆ, ಧ್ವಜದ ವಿಚಾರದಲ್ಲಿ ಬಂದ್‌ಗೆ ಕರೆ ನೀಡಿರುವುದಕ್ಕೆ ಬಿಜೆಪಿ–ಜೆಡಿಎಸ್‌ನವರಿಗೆ ನಾಚಿಕೆಯಾಗಬೇಕು. ರಾಷ್ಟ್ರಧ್ವಜ ತೆಗೆಯಿರಿ ಎನ್ನುವುದು ಅವರ ಹೋರಾಟವೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿಯಿಂದ ವಿನಯದ ಬಗ್ಗೆ ನಾನು ಕಲಿಯಬೇಕಿಲ್ಲ. ನಾನು ಅವರಿಂದ ನಾಯಕನಾದವನಲ್ಲ. ದೇವೇಗೌಡರ ಮೇಲಿನ ಗೌರವದಿಂದಾಗಿ ಎಲ್ಲ ಸಹಿಸಿಕೊಂಡು ಸುಮ್ಮನಿದ್ದೇನೆ. ಇಲ್ಲದಿದ್ದರೆ ದೊಡ್ಡ ಪ್ರಮಾಣದಲ್ಲೇ ಉತ್ತರಿಸುತ್ತಿದ್ದೆ” ಎಂದು ಗುಡುಗಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

“ನಾನೇನು ಕುಮಾರಸ್ವಾಮಿ ಮನೆಯ ಋಣದಲ್ಲಿದ್ದೇನೆಯೇ? ಅವರ ಆಸ್ತಿ ತಿಂದಿದ್ದೇನೆಯೇ? ಅವರೇನು ನನ್ನ ಹಣೆಬರಹ ಬರೆಯುತ್ತಾರೆ? ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್, ಭೈರೇಗೌಡ ಅವರನ್ನು ಜೆಡಿಎಸ್‌ನಿಂದ ಹೊರ ಕಳುಹಿಸಿದ್ದು ಯಾರೆಂದು ಕುಮಾರಸ್ವಾಮಿ ಹೇಳಲಿ” ಎಂದು ಸವಾಲು ಹಾಕಿದರು.

ಮಂಡ್ಯದ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲೆಂಬ ಜೆಡಿಎಸ್‌ ಆಹ್ವಾನದ ಬಗ್ಗೆ ಪ್ರತಿಕ್ರಿಯಿಸಿ, “ನಾಚಿಕೆ ಆಗಬೇಕು ಅವರಿಗೆ. ಒಂದು ಅಂಗನವಾಡಿ ಕಟ್ಟಡ ಕಟ್ಟಲೂ ಆಗದವರು ಏನು ಚರ್ಚಿಸುತ್ತಾರೆ? ಅವರದ್ದು ಕೇವಲ ಹಿಟ್ ಅಂಡ್ ರನ್ ಕೇಸ್. ಚರ್ಚೆ ಮಾಡುವುದಿದ್ದರೆ ಮಂಡ್ಯಕ್ಕೆ ಬರಲಿ ಅಥವಾ ವಿಧಾನಮಂಡಲ ಅಧಿವೇಶನದಲ್ಲೇ ನಡೆಸಲು ಸಿದ್ಧವಿದ್ದೇನೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...