ದುಷ್ಟ ಶಕ್ತಿಗಳು ಯಾರು ಎಂಬುದನ್ನು ಜನರು ತೀರ್ಮಾನಿಸುತ್ತಾರೆ: ಶೋಭಾ ಕರಂದ್ಲಾಜೆ

Date:

ದುಷ್ಟ ಶಕ್ತಿಗಳು ಯಾರು ಎಂಬುದನ್ನು ಸರ್ಕಾರ ತೀರ್ಮಾನ ಮಾಡಲ್ಲ, ಜನರು ತೀರ್ಮಾನ ಮಾಡುತ್ತಾರೆ. ಯಾರು ಸರ್ಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

‘ದುಷ್ಟ ಶಕ್ತಿಗಳ ಎದುರು ಸತ್ಯದ ಜಯ’ ಎಂಬ ಸರ್ಕಾರದ ಪತ್ರಿಕಾ ಜಾಹೀರಾತು ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, “ಯಾರು ಭಷ್ಟಾಚಾರವನ್ನೇ ಉದ್ಯಮ ಮಾಡಿಕೊಂಡಿದ್ದಾರೆ? ವರ್ಗಾವಣೆಗೂ ದುಡ್ಡು, ಕೆಲಸ ಕೊಡಿಸಲಿಕ್ಕೂ ದುಡ್ಡು. ಎಲ್ಲದರಲ್ಲೂ ದುಡ್ಡು ತೆಗೆದುಕೊಳ್ಳುತ್ತಾರೆ. ಅಂತವರು ಯಾವ ದೃಷ್ಟರ ಬಗ್ಗೆ ಮಾತನಾಡುತ್ತಾರೆ” ಎಂದು ಕಿಡಿಕಾರಿದರು.

“ಇಂತಹ ಜಾಹೀರಾತಿಗೆ ಸರ್ಕಾರದ ಹಣ ಬಳಕೆ ಮಾಡಿಕೊಂಡು ಅವರ ಮುಖಕ್ಕೆ ಅವರೇ ಮಸಿ ಬಳಿದುಕೊಳ್ಳುವ ಕೆಲಸ ಮಾಡಿದ್ದಾರೆ. ಅವರೇನು ಬೇಕಿದ್ದರೂ ಜಾಹೀರಾತು ನೀಡಬಹುದು. ಏನು ಬೇಕಾದರೂ ಭಾಷಣ ಮಾಡಬಹುದು. ಸರ್ಕಾರ ಅವರ ಕೈಯಲ್ಲಿದೆ. ಯಾರು ದುಷ್ಟರು, ಯಾರೂ ಶಿಷ್ಟರು ಎಂಬುದನ್ನು ಜನರು ಗಮನಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಸೂರಿನ ಮುಡಾ ಹಗರಣದಲ್ಲಿ ಸ್ವತಃ ಸಿಎಂ ಧರ್ಮಪತ್ನಿ ಸೈಟ್ ವಾಪಸ್ ಮಾಡಿದರು. ಯಾಕೆ ವಾಪಸ್ ಮಾಡಿದರು? ತಪ್ಪು ಮಾಡಿದ್ದಾರೆ ಅದಕ್ಕೆ ವಾಪಾಸ್ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿರೋದರ ಬಗ್ಗೆ ಇ.ಡಿ ವರದಿ ನೀಡಿದೆ. ಪರಿಶಿಷ್ಟ ಪಂಗಡದ ಹಣವನ್ನು ಆಂಧ್ರ ಪ್ರದೇಶ, ಬಳ್ಳಾರಿ ಚುನಾವಣೆಗೆ ನೀಡಿರುವುದರ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ” ಎಂದು ಹೇಳಿದರು.

ಜಾತಿ ಗಣತಿ ಬಗ್ಗೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿ, “ಜಾತಿ ಗಣತಿ ಒಡೆದು ಆಳುವ ನೀತಿ‌. ಹಿಂದೆ ಬ್ರಿಟಿಷರು ಮಾಡಿದ ಕೆಲಸವನ್ನು ಇವರು ಮಾಡುತ್ತಿದ್ದಾರೆ. ರಾಜ್ಯದ ಬಹು ಸಂಖ್ಯಾತರು ಜಾತಿಗಣತಿ ವರದಿಯನ್ನು ವಿರೋಧ ಮಾಡಿದ್ದಾರೆ. ಬಹುಸಂಖ್ಯಾತರಿಗೆ ಅಪಮಾನ ಮಾಡಲು, ಜಾತಿ ಜಾತಿ ನಡುವೆ ಬೆಂಕಿ ಹಚ್ಚಲು, ಬಹು ಸಂಖ್ಯಾತರ‌ನ್ನು ಒಡೆದು ಹಾಕಲು ಯೋಚನೆ ಮಾಡುತ್ತಿದ್ದಾರೆ. ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ. ಇದು ಜಾರಿಯಾದರೆ ಸಿದ್ದರಾಮಯ್ಯರಿಗೆ ತಿರುಗುಬಾಣವಾಗುತ್ತದೆ” ಎಂದು ಎಚ್ಚರಿಸಿದರು.

ದಸರಾ ಗಜಪಡೆಯ ಮಾವುತರ ಕುಟುಂಬಕ್ಕೆ ಉಪಹಾರ ಕೂಟದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿಯಾದರು. ಪ್ರತಿ ವರ್ಷ ಗಜಪಡೆಯ ಕಾವಾಡಿಗಳು, ಮಾವುತರ ಕುಟುಂಬಸ್ಥರಿಗೆ ಸಚಿವೆ ಶೋಭಾಕರಂದ್ಲಾಜೆ ಉಪಹಾರ ಕೂಟ ಏರ್ಪಡಿಸುತ್ತಾ ಬಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...