ಕೇಂದ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ: ಖರ್ಗೆ

Date:

ಜನರು ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಬಯಸುತ್ತಿದ್ದಾರೆ. ನಾನು ಎಲ್ಲಿಗೆ ಹೋದರೂ ಜನರು ಸರ್ಕಾರ ಬದಲಾವಣೆಯ ಬಗ್ಗೆ ಆಸಕ್ತಿ ಹೊಂದಿರುವುದು ಕಂಡುಬರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಅಂಶಗಳಲ್ಲಿಯೂ ವಿಫಲವಾಗಿದೆ. ಹಣದುಬ್ಬರ ನಿಯಂತ್ರಿಣ ಮತ್ತು ಉದ್ಯೋಗ ಸೃಷ್ಟಿಯಲ್ಲೂ ವಿಫಲವಾಗಿದೆ. ಹೀಗಾಗಿಯೇ, ಕಳೆದ 10 ವರ್ಷಗಳಲ್ಲಿ ಜನರಿಗೆ ತಾವೇನು ಕೊಟ್ಟಿದ್ದೇವೆ ಎಂಬ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ಆದರೆ, ಬೇರೆ ವಿಷಯಗಳ ಬಗ್ಗೆ ಹೆಚ್ಚು ಮಾತನಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಮೋದಿ ಸರ್ಕಾರ ಜನರನ್ನು ಬಡತನದಿಂದ ಮೇಲೆತ್ತಲು ವಿಫಲವಾಗಿದೆ. ಬಡತನವನ್ನು ಪರಿಹರಿಸಲು ಯಾವುದೇ ನೀತಿಯನ್ನು ಜಾರಿಗೊಳಿಸಿಲ್ಲ. ಮೋದಿ ಯಾವತ್ತೂ ಬಡವರ ಉದ್ಧಾರ ಮಾಡುವ ಕೆಲಸ ಮಾಡಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ನಂಟು ಹೊಂದಿದೆ ಎಂಬ ಮೋದಿ ಆರೋಪದ ವಿರುದ್ಧ ಕಿಡಿಕಾರಿದ ಖರ್ಗೆ, “ನಾವು ಆಹ್ವಾನವಿಲ್ಲದೆ ಪಾಕಿಸ್ತಾನಕ್ಕೆ ಭೇಟಿ ನೀಡುವವರಲ್ಲ ಅಥವಾ ಪಾಕಿಸ್ತಾನದಿಂದ ಯಾವುದೇ ಉಡುಗೊರೆಯನ್ನು ತರುವುದಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಬಲ್ಲವರು ಕಾಂಗ್ರೆಸ್‌ ಜೊತೆ ಸಂಬಂಧ ಹೊಂದಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

“ಮೋದಿ ಆಡಳಿತದಲ್ಲಿ ಕಾರ್ಮಿಕ ಕಾನೂನುಗಳನ್ನು ಹಲವು ಬಾರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ಕಿರುಕುಳ ಅನುಭವಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಎಲ್ಲ ಕಾನೂನುಗಳಲ್ಲಿ ಕಾರ್ಮಿಕರ ಪರವಾದ ಬದಲಾವಣೆಗಳನ್ನು ತರುತ್ತದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...