ಗಂಭೀರ ಕ್ರಿಮಿನಲ್ ಹಿನ್ನೆಲೆ ಇರುವವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗುತ್ತಿದೆ: ಸಂಜಯ್ ರಾವತ್

Date:

ಮಹಾರಾಷ್ಟ್ರ ವಿಧಾನ ಭವನದಲ್ಲಿ ನಡೆದ ಘರ್ಷಣೆ ವಿಚಾರದಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಶುಕ್ರವಾರ ಬಿಜೆಪಿಯನ್ನು ಟೀಕಿಸಿದ್ದಾರೆ. ಗಂಭೀರ ಕ್ರಿಮಿನಲ್ ಹಿನ್ನೆಲೆಯ ಜನರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ.

ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಂಕೀರ್ಣದೊಳಗೆ ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಮತ್ತು ಎನ್‌ಸಿಪಿ(ಎಸ್‌ಪಿ) ಶಾಸಕ ಜಿತೇಂದ್ರ ಅವಾದ್ ಅವರ ಬೆಂಬಲಿಗರು ಘರ್ಷಣೆ ನಡೆಸಿದ್ದರು. ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡ ಬಳಿಕ ಭದ್ರತಾ ಸಿಬ್ಬಂದಿಗಳು ತಡೆದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಇದು ಜನರ ತೀರ್ಪಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ: ಸಂಜಯ್ ರಾವತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಾವತ್, “ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಸರ್ಕಾರವನ್ನು ವಿಸರ್ಜಿಸಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು” ಎಂದೂ ರಾವತ್ ಆಗ್ರಹಿಸಿದ್ದಾರೆ.

“ವಿಧಾನ ಭವನದಲ್ಲಿ ಒಂದು ಗ್ಯಾಂಗ್ ವಾರ್ ಆಗಿದೆ. ಕೊಲೆ, ದರೋಡೆ ಅಥವಾ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿರುವಂತಹ, ಗಂಭೀರ ಕ್ರಿಮಿನಲ್ ಅಪರಾಧಗಳನ್ನು ಹೊಂದಿರುವವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ” ಎಂದು ರಾವತ್ ಆರೋಪಿಸಿದರು.

“ಅಪರಾಧ ಹಿನ್ನೆಲೆಯ ಜನರನ್ನು ಪ್ರತಿದಿನ ಬಿಜೆಪಿಗೆ ಸೇರಿಸಿಕೊಳ್ಳಲಾಗುತ್ತಿದೆ. ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಂಸ್ಕೃತಿಯೇ? ಅಪರಾಧ ಹಿನ್ನೆಲೆಯ ಜನರನ್ನು ಸೇರಿಸಿಕೊಳ್ಳುವುದು ಬಿಜೆಪಿಯ ಸಂಸ್ಕೃತಿಗೆ ಸರಿಹೊಂದುತ್ತದೆಯೇ” ಎಂದು ಶಿವಸೇನೆ(ಯುಬಿಟಿ) ನಾಯಕ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ : ಮಹಾ ವಿಕಾಸ್ ಅಘಾಡಿಯ ಐಕಾನ್ ಉದ್ಧವ್ ಠಾಕ್ರೆ!

“ಇದು ದುರದೃಷ್ಟಕರ, ನೋವಿನ ಅಥವಾ ಆಘಾತಕಾರಿ ಘಟನೆ ಮಾತ್ರವಲ್ಲ. ಮಹಾರಾಷ್ಟ್ರದ ರಾಜಕೀಯ ಸಂಸ್ಕೃತಿಗೆ ನಾಚಿಕೆಗೇಡಿನ ಸಂಗತಿ. ಹಾಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಶಿವಸೇನೆ (ಯುಬಿಟಿ) ಭಾವಿಸುತ್ತದೆ. ಮಹಾರಾಷ್ಟ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಫಡ್ನವೀಸ್ ರಾಜ್ಯ ಸರ್ಕಾರವನ್ನು ವಿಸರ್ಜಿಸುವಂತೆ ಒತ್ತಾಯಿಸುತ್ತಿದ್ದರು. ಅವರು ಆತ್ಮಾವಲೋಕನ ಮಾಡಿಕೊಂಡರೆ, ಅವರ ಸರ್ಕಾರವನ್ನು ವಿಸರ್ಜಿಸಬೇಕು ಎಂಬ ಮನವರಿಕೆ ಅವರಿಗೆ ಆಗುತ್ತದೆ” ಎಂದಿದ್ದಾರೆ.

“ಪ್ರತಿದಿನ, ಮಹಾರಾಷ್ಟ್ರದ ಪ್ರತಿಷ್ಠೆಗೆ ಹೊಸ ಮಸಿ ಬರುತ್ತಿದೆ. ಅದು ಭ್ರಷ್ಟಾಚಾರ, ಅನೈತಿಕ ನಡವಳಿಕೆ ಅಥವಾ ಹನಿಟ್ರ್ಯಾಪ್, ಶಾಸಕರಿಂದ ಹಲ್ಲೆ ಅಥವಾ ಸಚಿವರ ವಿಡಿಯೋಗಳು ಆಗಿರಬಹುದು. ರಾಜ್ಯಪಾಲರು ನಿಜವಾಗಿಯೂ ಕಾನೂನಿನ ಪಾಲಕರಾಗಿದ್ದರೆ, ಗೃಹ ಇಲಾಖೆಯಿಂದ ವರದಿ ಪಡೆದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...