ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ:‌ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ವಿಧಾನಸೌಧದಲ್ಲಿ ಗುರುವಾರ ನಡೆಯಿತು.

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ. ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚಿಸಿದರು.

“ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ  ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು. ತಾಲ್ಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ವಿಕೇಂದ್ರೀಕರಣದ ಪರ, ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಸಂವಿಧಾನದ (73)(74) ರನ್ವಯ ಗ್ರಾಮ , ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಿರಂಗಾ ಯಾತ್ರೆ, ಸೈನಿಕರ ನಿಂದನೆ ಮತ್ತು ದೇಶಭಕ್ತಿ

“ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ ಅವರು ವರದಿಯನ್ನು ನೀಡಿದ್ದು ಅದರ ಜಾರಿಗೆ ಕ್ರಮ ವಹಿಸಲಾಗುವುದು. ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ
ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ.  ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ” ಎಂದರು.

2ನೇ ಹಂತದಲ್ಲಿ  ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣಗೊಳಿಸಬೇಕು. ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು  ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು
ಪುನರ್ ಸಮೀಕ್ಷೆ  ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು ಲ್ಯಾಂಡ್ ಬ್ಯಾಂಕ್ ಸ್ಥಾಪನೆ , ಗ್ರಾಮ ನಕ್ಷೆ ಹೊಂದಿರದ ಗ್ರಾಮಗಳಿಗೆ ಗ್ರಾಮ ನಕ್ಷೆ ರಚನೆ ಕುರಿತಂತೆಯೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...