ಪೆಟ್ರೋಲ್-ಡೀಸೆಲ್ ದರ ಹೆಚ್ಚಳ | ರಾಜ್ಯದಲ್ಲಿ ಪ್ರತಿ ವಸ್ತುಗಳ ಬೆಲೆ ಗಗನಕ್ಕೇರಲಿದೆ: ವಿಜಯೇಂದ್ರ

Date:

ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್‌ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ” ಎಂದಿದ್ದಾರೆ.

“ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ಬೆಲೆ ಏರಿಕೆಯ ಬಿಸಿ ಪಂಪ್ ಸೆಟ್, ಟ್ರಾಕ್ಟರ್ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಹನವನ್ನು ಆಶ್ರಯಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.

“ರಾಜ್ಯದ ಸಂಪನ್ಮೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನ್ಮೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ, ಈ ಕೂಡಲೇ ಪೆಟ್ರೋಲ್ – ಡೀಸೆಲ್ ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಾಸ್ ಪಡೆಯದಿದ್ದರೆ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ”ಎಂದು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...