ಪೆಟ್ರೋಲ್ ದರ ಶತಕದ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್

Date:

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ” ಎಂದು ಪ್ರೆಶ್ನೆ ಮಾಡಿದರು.

“ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 97.68 ಡಾಲರ್ ಇತ್ತು. ಆಗ ಪೆಟ್ರೋಲ್ ಲೀಟರ್ 68.31 ರೂ. ಇತ್ತು. ಈಗ ಕಚ್ಚಾ ತೈಲ ಬೆಲೆ 77.64 ರೂ. ಡಾಲರ್ ಇದ್ದರೂ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಕಡಿಮೆ ಆಗಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ಇವರ ಧ್ವನಿ ಎಲ್ಲಿ ಅಡಗಿತ್ತು. ಅಡುಗೆ ಅನಿಲ ಬೆಲೆ 419 ರೂ. ಇದ್ದದ್ದು 903 ರೂ.ಮಾಡಿದ್ದು ಬಿಜೆಪಿ ಸರ್ಕಾರ. ಇದರ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ” ಎಂದು ಸವಾಲು ಹಾಕಿದರು.

“ರಾಜ್ಯದಲ್ಲಿ ತೆರಿಗೆ ಹೆಚ್ಚಳ ನಂತರ ಪೆಟ್ರೋಲ್ ಲೀಟರ್ ಗೆ 102 ರೂ., ಡೀಸೆಲ್ 88.41 ರೂ. ಆಗಿದೆ. ನೆರೆಯ ತಮಿಳು ನಾಡು, ಆಂಧ್ರ, ಮಹಾರಾಷ್ಟ್ರ ಕ್ಕೆ ಹೋಲಿಸಿದರೆ 5 ರಿಂದ 7 ರೂ. ವರೆಗೆ ಕಡಿಮೆ. ಕೇರಳದಲ್ಲಿ ಪೆಟ್ರೋಲ್ 106.66, ಡೀಸೆಲ್ 95.60,, ಆಂಧ್ರ ದಲ್ಲಿ ಪೆಟ್ರೋಲ್ 109.44, ಡಿಸೇಲ್ 97.28, ಮಹಾರಾಷ್ಟ್ರ ದಲ್ಲಿ ಪೆಟ್ರೋಲ್ 104.46, ಡೀಸೆಲ್ 90.45ರೂ. ಇದೆ. ಇದಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲೇ ಅತಿ ಕಡಿಮೆ. ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು. ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...