ರಾಜ್ಯದಲ್ಲಿ ಮಂಗಳವಾರ 2ನೇ ಹಂತದ ಮತದಾನ; ಬಹಿರಂಗ ಪ್ರಚಾರಕ್ಕೆ ಇಂದು ತೆರೆ; 14 ಕ್ಷೇತ್ರಗಳಲ್ಲಿ ಗೆಲ್ಲೋದ್ಯಾರು?

Date:

ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು, ಸಚಿವರ ಮಕ್ಕಳು, ಘಟಾನುಘಟಿ ನಾಯಕರು ಕಣದಲ್ಲಿದ್ದು, ಮತದಾರರು ಯಾರಿಗೆ ಮತಹಾಕುತ್ತಾರೆ ಎಂಬುದು ಕೌತುಕ ಮೂಡಿಸಿದೆ.

ಇಂದು ಸಂಜೆವರೆಗಷ್ಟೇ ಬಹಿರಂಗ ಪ್ರಚಾರಕ್ಕೆ ಅವಕಾಶವಿದ್ದು, ಎಲ್ಲ ಅಭ್ಯರ್ಥಿಗಳು ಅಂತಿಮ ಸುತ್ತಿನ ಪ್ರಚಾರದ ಭರಾಟೆಯಲ್ಲಿದ್ದಾರೆ. ಸಂಜೆ 6ಗಂಟೆಯ ನಂತರ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು ಕ್ಷೇತ್ರಗಳನ್ನು ತೊರೆಯಬೇಕೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ರಾಜ್ಯದ ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ  14 ಲೋಕಸಭಾ ಕ್ಷೇತ್ರಗಳಲ್ಲಿ 21 ಮಂದಿ ಮಹಿಳೆಯರು, 206 ಮಂದಿ ಪುರುಷರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 14 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳಾಗಿ ಬಿಜೆಪಿಯವರೇ ಸ್ಪರ್ಧಿಸಿದ್ದಾರೆ.

ಈ ನಡುವೆ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ರಾಷ್ಟ್ರಾಧ್ಯಕ್ಷ ಆಕ್ರೋಶಕ್ಕೆ ಕಾರಣವಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ನೂರಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಹಗರಣವು ಚುನಾವಣೆಯಲ್ಲಿ ಬಿಜೆಪಿ ಹೊಡೆತ ನೀಡಲಿದೆ ಎಂದೂ ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...