ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

Date:

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯನ್, ಎಚ್.ಡಿ. ದೇವೇಗೌಡ ಅವರ ಹೇಳಿಕೆಯು ನಿರಾಧಾರ’ಮತ್ತು ‘ಅಸಂಬದ್ಧ’ ಎಂದು ಹೇಳಿದ್ದಾರೆ.

ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಜೆಡಿಎಸ್‌ನ ಎಲ್ಲ ರಾಜ್ಯ ಘಟಕಗಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಒಪ್ಪಿಗೆ ನೀಡಿವೆ ಎಂದು ಮಾಜಿ ಪ್ರಧಾನಿ ಗುರುವಾರ(ಅಕ್ಟೋಬರ್ 19) ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ಜೆಡಿಎಸ್ ಘಟಕವು ಯಾವಾಗಲೂ ಎಡ ರಂಗದ ಜತೆ ಗುರುತಿಸಿಕೊಂಡಿದೆ. ಇದೇ ರೀತಿಯ ಬೆಳವಣಿಗೆ 2006ರಲ್ಲಿ ನಡೆದಾಗಲೂ ಇಲ್ಲಿನ ಜೆಡಿಎಸ್ ನಾಯಕರು ನಿಲುವು ಬದಲಿಸಿರಲಿಲ್ಲ. ಈ ಬಾರಿಯೂ ಕೇರಳದ ಜೆಡಿಎಸ್ ನಾಯಕರು ಬಿಜೆಪಿ ಮೈತ್ರಿಯನ್ನು ವಿರೋಧಿಸಿದ್ದಾರೆ ಮತ್ತು ಎಡರಂಗದ ಜತೆ ನಿಂತಿದ್ದಾರೆ. ಆದರೆ, ಸಿಪಿಐ(ಎಂ) ಆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾವತ್ತೂ ಅಭಿಪ್ರಾಯ ವ್ಯಕ್ತಪಡಿಸಲು ಪ್ರಯತ್ನಿಸಿಲ್ಲ.ಮುಖ್ಯಮಂತ್ರಿಯಾಗಿ ನಾನಂತೂ ಅವರ ಪಕ್ಷದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಿಲ್ಲ.ಇದು ನಮ್ಮ ಕಾರ್ಯವೈಖರಿಗೆ ಸಂಪೂರ್ಣ ವಿರುದ್ಧವಾಗಿದೆ. ಅವರ ಅಚಾತುರ್ಯಕ್ಕೆ ನಾವು ಜವಾಬ್ದಾರರಲ್ಲ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಹಂತಕರು ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು

“ಜೆಡಿಎಸ್ ಕೇರಳ ಘಟಕವು ಬಿಜೆಪಿಯನ್ನು ವಿರೋಧಿಸುತ್ತದೆ ಮತ್ತು ಹೀಗಾಗಿ ನಾವು ಈ ಬಗ್ಗೆ ದೇವೇಗೌಡರ ಹೇಳಿಕೆಯನ್ನು ವಿರೋಧಿಸುತ್ತೇವೆ ಎಂದು ಇಲ್ಲಿನ ನಾಯಕರು ಸ್ಪಷ್ಟಪಡಿಸಿದ್ದಾರೆ. ಕೇರಳ ಜೆಡಿಎಸ್ ರಾಜ್ಯಾಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಮತ್ತು ಕೇರಳ ಸರ್ಕಾರದಲ್ಲಿ ಜೆಡಿಎಸ್‌ ಸಚಿವ ಕೆ ಕೃಷ್ಣನ್‌ಕುಟ್ಟಿ ದೇವೇಗೌಡರು ನೀಡಿರುವ ಹೇಳಿಕೆ ಸುಳ್ಳು ಎಂದು ಖಡಾಖಂಡಿತವಾಗಿ ಹೇಳಿದ್ದಾರೆ” ಎಂದು ವಿಜಯನ್ ತಿಳಿಸಿದ್ದಾರೆ.

‘ದೇವೇಗೌಡರು ತಮ್ಮ ಬದಲಾಗುತ್ತಿರುವ ರಾಜಕೀಯ ನಿಲುವುಗಳನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ’ಎಂದು ಕಟು ಶಬ್ದಗಳಲ್ಲಿ ಟೀಕಿಸಿರುವ ವಿಜಯನ್ ಅವರು, ದೇವೇಗೌಡರು ಈ ಹಿಂದೆಯೂ ತಮ್ಮ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಪಕ್ಷದ ಸಿದ್ಧಾಂತಕ್ಕೆ ದ್ರೋಹವೆಸಗಿದ್ದರು’ ಎಂದು ಆರೋಪಿಸಿದ್ದಾರೆ.

ಎಡ ರಂಗದ ಜತೆ ಉಳಿಯಲು ಕೇರಳದ ಜೆಡಿಎಸ್ ಘಟಕ ನಿರ್ಧಸಿದೆಯಾದರೂ, ಮುಂದಿನ ದಿನಗಳಲ್ಲಿ ಹೊಸ ಪಕ್ಷ ರಚನೆ ಮಾಡಬೇಕೆ ಅಥವಾ ಇತರ ಸ್ಥಳೀಯ ಪಕ್ಷಗಳ ಜತೆ ವಿಲೀನವಾಗಬೇಕೊ ಎಂಬುದರ ಕುರಿತು ನಾಯಕರಲ್ಲಿ ಒಮ್ಮತಮೂಡಿಲ್ಲ. ಈ ಕುರಿತು ಮುಂದಿನ ಯೋಜನೆಗಳನ್ನು ನಿರ್ಧರಿಸಲು ಪಕ್ಷದ ನಾಲ್ವರು ಹಿರಿಯ ನಾಯಕರ ಸಮಿತಿಯನ್ನು ರಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...