ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಅವರು, “ನಮ್ಮ ಪ್ರಧಾನಿ ಭಯಗೊಂಡಿದ್ದು ವೇದಿಕೆಯಲ್ಲೇ ಕಣ್ಣೀರು ಹಾಕಬಹುದು” ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನೀವು ಪ್ರಧಾನಿಯವರ ಭಾಷಣಗಳನ್ನು ಕೇಳಿರಬಹುದು, ಅವರು ಭಯ ಪಡುತ್ತಾರೆ. ಅವರು ವೇದಿಕೆಯ ಮೇಲೆ ಕಣ್ಣೀರು ಹಾಕುವ ಸಾಧ್ಯತೆಯಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಪ್ರಧಾನಿ ಮೋದಿ ಮಂಗಲಸೂತ್ರ, ಸಂಪತ್ತಿನ ಮರುಹಂಚಿಕೆ, ಪಿತ್ರಾರ್ಜಿತ ತೆರಿಗೆ ಸೇರಿದಂತೆ ಹಲವು ವಿಚಾರಗಳಲ್ಲಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಭಾಷಣ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ “ಮೋದಿ ವಿವಿಧ ವಿಧಾನಗಳ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

“ಮೋದಿ ನಿಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಚೀನಾ ಮತ್ತು ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ, ಮತ್ತು ಕೆಲವೊಮ್ಮೆ ಅವರು ನಿಮ್ಮಲ್ಲಿ ತಟ್ಟೆಗಳನ್ನು ಬಾರಿಸಲು ಹೇಳುತ್ತಾರೆ. ನಿಮ್ಮ ಮೊಬೈಲ್ ಫೋನ್‌ಗಳ ಟಾರ್ಚ್ ಲೈಟ್ ಅನ್ನು ಆನ್ ಮಾಡಲು ಹೇಳುತ್ತಾರೆ” ಎಂದು ಗಾಂಧಿ ಟೀಕಿಸಿದರು.

“ಬಡತನ, ನಿರುದ್ಯೋಗ ಮತ್ತು ಬೆಲೆ ಏರಿಕೆ ಸೇರಿದಂತೆ ಭಾರತದಲ್ಲಿ ಮೂರ್ನಾಲ್ಕು ಪ್ರಮುಖ ಸಮಸ್ಯೆಗಳಿವೆ. ಕಾಂಗ್ರೆಸ್ ಮಾತ್ರ ನಿರುದ್ಯೋಗವನ್ನು ತೊಡೆದುಹಾಕಲು, ಬೆಲೆ ಏರಿಕೆಯನ್ನು ನಿಯಂತ್ರಿಸಲು ಮತ್ತು ಜನರಿಗೆ ಅವರ ಪಾಲನ್ನು ನೀಡಲು ಸಾಧ್ಯ” ಎಂದು ಗಾಂಧಿ ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ?  ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

“ಮೋದಿ ಬಡವರ ಹಣವನ್ನು ಮಾತ್ರ ಕಿತ್ತುಕೊಂಡಿದ್ದಾರೆ. ಅವರು ಕೆಲವು ಕೋಟ್ಯಾಧಿಪತಿಗಳನ್ನು ಸೃಷ್ಟಿಸಿದ್ದಾರೆ. ದೇಶದ 70 ಕೋಟಿ ಜನರ ಸಂಪತ್ತಿಗೆ ಸಮನಾದ ಸಂಪತ್ತನ್ನು 22 ಮಂದಿ ಹೊಂದಿದ್ದಾರೆ. ಕೇವಲ ಒಂದು ಶೇಕಡ ಜನರು ರಾಷ್ಟ್ರದ ಶೇಕಡ 40ರಷ್ಟು ಸಂಪತ್ತನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...