ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸಲು ಬಿಜೆಪಿ ನಾಯಕರಿಗೆ ಮೋದಿ ಕರೆ

Date:

ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಿಗೆ ಸುರಕ್ಷತಾ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.

2024ರ ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರ(ಆಗಸ್ಟ್ 02) ರಾತ್ರಿ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರ ಸಭೆಯಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ.

ಸಮಾಜದ ಪ್ರತಿಯೊಂದು ವರ್ಗದವರೊಂದಿಗೆ ಸಂಪರ್ಕ ಸಾಧಿಸುವುದು ಅತ್ಯಗತ್ಯ. ಮುಸ್ಲಿಂ ಪುರುಷರು ತಮ್ಮ ಪತ್ನಿಯರಿಗೆ ತ್ವರಿತವಾಗಿ ನೀಡುವ ವಿಚ್ಛೇದನದ ಪದ್ಧತಿಯನ್ನು ಈ ಸರ್ಕಾರ ಅಪರಾಧ ಎಂದು ಪರಿಗಣಿಸಿದೆ. ನಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚಿನ ಧೈರ್ಯ ತುಂಬಿದೆ. ಆಗಸ್ಟ್‌ 30 ರಂದು ಆಚರಿಸಲಾಗುವ ಈ ಬಾರಿಯ ರಕ್ಷಾ ಬಂಧನ ಹಬ್ಬ ಅಲ್ಪಸಂಖ್ಯಾತ ಮಹಿಳೆಯರಿಗೆ ತಲುಪಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆಯನ್ನು 2019 ರಲ್ಲಿ ಸಂಸತ್ತು ಅಂಗೀಕರಿಸಿತು. ತ್ವರಿತ ತ್ರಿವಳಿ ತಲಾಖ್ ಆಚರಣೆಯನ್ನು ಕಾನೂನುಬಾಹಿರ ಮತ್ತು ಪತಿಗೆ ಜೈಲು ಶಿಕ್ಷೆ ವಿಧಿಸುವ ಅಪರಾಧ ಎಂದು ಘೋಷಿಸಲಾಯಿತು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಬಿಜೆಪಿಯು ಎನ್‌ಡಿಎ ಸಂಸದರನ್ನು ಪ್ರದೇಶವಾರು ಒಂದಕ್ಕೆ 40 ಸದಸ್ಯರಂತೆ ಹಲವು ಗುಂಪುಗಳಾಗಿ ವಿಂಗಡಿಸಿದೆ. ಸದ್ಯ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಧಾನಮಂತ್ರಿ ಈ ಕುರಿತು ಪ್ರತ್ಯೇಕವಾಗಿ ಮಾತನಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮೊದಲ ಎರಡು ಸಭೆಗಳು ಸೋಮವಾರ ನಡೆದವು. ಉತ್ತರ ಪ್ರದೇಶದ ಪಶ್ಚಿಮ ಭಾಗದಿಂದ ಕಾನ್ಪುರ-ಬುಂದೇಲ್‌ಖಂಡ್ ಪ್ರದೇಶದವರೆಗೆ ಸುಮಾರು 45 ಎನ್‌ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...