ಸುಪ್ರೀಂ ‘ಅಸಾಂವಿಧಾನಿಕ’ವೆಂದ ಚುನಾವಣಾ ಬಾಂಡ್ ಅನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ!

Date:

ಕಳೆದ ತಿಂಗಳು ಸುಪ್ರೀಂ ಕೋರ್ಟ್‌ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಅದನ್ನು “ಅಸಾಂವಿಧಾನಿಕ” ಎಂದು ಕರೆದಿದೆ. ಈ ಯೋಜನೆಯನ್ನೇ ಪ್ರಧಾನಿ ನರೇಂದ್ರ ಮೋದಿ ಈಗ ಸಮರ್ಥಿಸಿಕೊಂಡಿದ್ದಾರೆ. ಹಾಗೆಯೇ “ನಮ್ಮ ಸರ್ಕಾರ ತಂದ ಯೋಜನೆಯಿಂದಾಗಿ ರಾಜಕೀಯ ನಿಧಿಯ ಮೂಲ ಜನರಿಗೆ ತಿಳಿಯಲು ಸಾಧ್ಯವಾಯಿತು” ಎಂದು ಹೇಳಿಕೊಂಡಿದ್ದಾರೆ.

ತಮಿಳು ಸುದ್ದಿ ವಾಹಿನಿ ತಂತಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಚುನಾವಣಾ ಬಾಂಡ್‌ನಿಂದ ಬಿಜೆಪಿ ಸರ್ಕಾರಕ್ಕೆ ಹಿನ್ನೆಡೆಯಾಗಲಿದೆ ಎಂಬ ಅಭಿಪ್ರಾಯವನ್ನು ಅಲ್ಲಗಳೆದ ಪ್ರಧಾನಿ, “ಹಿನ್ನಡೆ ಉಂಟುಮಾಡಲು ನಾನೇನು ಮಾಡಿದೆ ಹೇಳಿ? ಇಂದು ಸಂತೋಷಪಡುವವರು ನಾಳೆ ಪಶ್ಚಾತ್ತಾಪ ಪಡುತ್ತಾರೆ. 2014 ರ ಮೊದಲು ಎಷ್ಟು ಚುನಾವಣೆ ನಡೆದಿದೆ ಎಂದು ನಾನು ಈ ತಜ್ಞರನ್ನು ಕೇಳುತ್ತೇನೆ. ಆ ಚುನಾವಣೆಗಳಲ್ಲಿ ಖರ್ಚು ಎಷ್ಟಾಗಿದೆ? ಹಣ ಎಲ್ಲಿಂದ ಬಂತು ಎಂದು ಹೇಳಲಾಗುತ್ತದೆಯೇ? ಆದರೆ ಈಗ ಆ ಎಲ್ಲ ಮಾಹಿತಿ ನಮಗೆ ಸಿಗುತ್ತದೆ” ಎಂದು ಚುನಾವಣಾ ಬಾಂಡ್‌ ಬೆಂಬಲಿಸಿ ಮಾತನಾಡಿದರು.

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ- ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಮೋದಿ ಚುನಾವಣಾ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ನೀವು ಎಲ್ಲ ಮಾಹಿತಿಯನ್ನು ಈ ದಾಖಲೆಯಲ್ಲಿ ಪಡೆಯಬಹುದು. ಹಣ ಕೊಟ್ಟವರು ಯಾರು, ಪಡೆದವರು ಯಾರು ಎಂಬುದನ್ನು ಪತ್ತೆ ಹಚ್ಚಬಹುದು. ಇಲ್ಲದಿದ್ದರೆ, ಹಣ ಎಲ್ಲಿಂದ ಬಂತು ಎಂದು ಯಾರಿಗೂ ತಿಳಿಯುತ್ತಿರಲಿಲ್ಲ. ಪ್ರತಿಯೊಂದರಲ್ಲೂ ಕೆಲವು ನ್ಯೂನತೆಗಳು ಇರಬಹುದು. ಆದರೆ ಈ ನ್ಯೂನತೆಗಳನ್ನು ಸರಿಪಡಿಸಿದರೆ ಎಲ್ಲವೂ ಸರಿಯಾಗುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು.

2017-18ರ ಕೇಂದ್ರ ಬಜೆಟ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು 2017 ರ ಹಣಕಾಸು ಮಸೂದೆಯಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಮಂಡಿಸಿದರು. “ಚುನಾವಣಾ ಬಾಂಡ್‌ಗಳು ಅನಾಮಧೇಯವಾಗಿರುತ್ತದೆ. ದೇಣಿಗೆ ನೀಡಿದವರು ಮತ್ತು ದೇಣಿಗೆ ಪಡೆದ ಪಕ್ಷದ ಮಾಹಿತಿ ಎಲ್ಲಿಯೂ ಬಹಿರಂಗವಾಗುವುದಿಲ್ಲ. ಈ ಮಾಹಿತಿ ಗೌಪ್ಯವಾಗಿರುತ್ತದೆ” ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿತ್ತು.

ಇದನ್ನು ಓದಿದ್ದೀರಾ?   ಬಾಂಡ್ ದಂಧೆ | ಬಿಜೆಪಿಗೆ 12,930 ಕೋಟಿ ರೂ ದೇಣಿಗೆ, ಕೇಸರಿ ಪಕ್ಷದ ಚಂದಾ ಅಭಿಯಾನಗಳ ಪಟ್ಟಿ!

ಆದರೆ “ದಾನಿಗಳ ಗುರುತು ಅನಾಮಧೇಯ ಆಗಿರುವುದರಿಂದ ಕಪ್ಪು ಹಣದ ಒಳಹರಿವಿಗೆ ಕಾರಣವಾಗಬಹುದು” ಎಂದು ಎಡಪಕ್ಷಗಳು ವಾದಿಸಿತ್ತು. “ಚುನಾವಣಾ ಬಾಂಡ್‌ಗಳ ಮೂಲಕ ನೀಡಲಾಗುವ ದೇಣಿಗೆಗಳು ಅಕ್ರಮ ಹಣ ವರ್ಗಾವಣೆಗೆ ಸಮ” ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಆದರೆ ಈಗ ಪ್ರಧಾನಿ ಮೋದಿ, “ಮೋದಿ ಸರ್ಕಾರ ಚುನಾವಣಾ ದಾಖಲೆಗಳನ್ನು ಸೃಷ್ಟಿಸಿದೆ” ಎಂದು ಹೇಳಿರುವುದು ನಗೆಪಾಟಲಿಗೀಡಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...