ಪ್ರಧಾನಿ ಮೋದಿಗೆ ಕಳ್ಳತನದ ಅಭ್ಯಾಸವಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ

Date:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳ್ಳತನದ ಅಭ್ಯಾಸವಿದೆ. ಮತ ಕಳ್ಳತನ, ಹಣ ಕಳ್ಳತನ, ಬ್ಯಾಂಕ್‌ಗಳನ್ನು ಲೂಟಿ ಮಾಡುವವರನ್ನು ರಕ್ಷಿಸುವುದು ಅವರ ಅಭ್ಯಾಸವಾಗಿದೆ. ಪ್ರಧಾನಿ ಮೋದಿ ಮತ ಕಳ್ಳತನ ಮಾಡುವ ಮೂಲಕ ಬಿಹಾರ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದರು.

ಬಿಹಾರ ಚುನಾವಣೆಗೂ ಮುಂಚಿತವಾಗಿ ರಾಹುಲ್ ಗಾಂಧಿ ಮತ್ತು ಇತರ ಮಹಾಘಟಬಂಧನ ನಾಯಕರ ನೇತೃತ್ವದಲ್ಲಿ ಮತ ಕಳ್ಳತನದ ವಿರುದ್ಧವಾಗಿ ಮತ ಅಧಿಕಾರ ಯಾತ್ರೆ ನಡೆಸಲಾಗುತ್ತಿದ್ದು ಕೊನೆಯ ದಿನ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. “ಈ ಮತದಾರರ ಅಧಿಕಾರ ಯಾತ್ರೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯಿತು. ಅದನ್ನು ಅಡ್ಡಿಪಡಿಸುವ ಪ್ರಯತ್ನಗಳು ನಡೆದವು ಆದರೆ ಬಿಹಾರದ ಜನರು ಮತ್ತು ಮಹಾಘಟಬಂಧನ ಜನರು ಹಿಂದೆ ಸರಿಯಲಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? SIR ಮೂಲಕ ಬಿಹಾರ ಚುನಾವಣೆಯಲ್ಲಿ ಮತ ಕಳವು ನಡೆಸುವ ಪಿತೂರಿ ಯಶಸ್ಸಾಗಲು ಬಿಡಲ್ಲ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ, ಜಾಗರೂಕರಾಗಿರಿ. ನೀವು ಎಚ್ಚರವಾಗಿಲ್ಲದಿದ್ದರೆ, ಮೋದಿ ಮತ್ತು ಶಾ ನಿಮ್ಮನ್ನು ನಿಗ್ರಹಿಸುತ್ತಾರೆ. ಬಡವರು, ಹಿಂದುಳಿದವರು ಮತ್ತು ದಲಿತರ ಹೊಸ ಸರ್ಕಾರ ರಚನೆಯಾಗುವುದರೊಂದಿಗೆ ಎನ್‌ಡಿಎಯ ಡಬಲ್ ಎಂಜಿನ್ ಸರ್ಕಾರ ಶೀಘ್ರದಲ್ಲೇ ಅಧಿಕಾರದಿಂದ ಕೆಳಗಿಳಿಯಲಿದೆ” ಎಂದು ಪ್ರತಿಪಾದಿಸಿದರು.

ಹಾಗೆಯೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡ ಅವರು, “ಒಂದು ಕಾಲದಲ್ಲಿ ಸಮಾಜವಾದದ ಬಗ್ಗೆ ಮಾತನಾಡುತ್ತಿದ್ದರು. ಆದರೆ ಈಗ ಅವರು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಆರ್‌ಎಸ್‌ಎಸ್-ಬಿಜೆಪಿ ಕುಮಾರ್ ಅವರನ್ನು ಕೈಬಿಡುತ್ತದೆ” ಎಂದು ಅಭಿಪ್ರಾಯಿಸಿದರು.

“ಈ ಡಬಲ್ ಎಂಜಿನ್ ಸರ್ಕಾರ ಕೆಲವು ತಿಂಗಳುಗಳ ನಂತರ ಇರುವುದಿಲ್ಲ. ರಚನೆಯಾಗುವ ಹೊಸ ಸರ್ಕಾರ ಬಡವರು, ಮಹಿಳೆಯರು, ದಲಿತರು ಮತ್ತು ಹಿಂದುಳಿದವರದ್ದಾಗಿರುತ್ತದೆ” ಎಂದೂ ಹೇಳಿದರು.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ವಿಕಾಸಶೀಲ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ, ಸಿಪಿಐ (ಎಂಎಲ್) ಲಿಬರೇಶನ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ, ಸಿಪಿಐನ ಆನಿ ರಾಜ, ಟಿಎಂಸಿ ಸಂಸದ ಯೂಸುಫ್ ಪಠಾಣ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮತ್ತು ಇತರ ಇಂಡಿಯಾ ಒಕ್ಕೂಟದ ನಾಯಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...