ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟು ಪ್ರಧಾನಿಗೆ ಬೇರೆ ಅಜೆಂಡಾ ಉಳಿದಿಲ್ಲ: ಕಾಂಗ್ರೆಸ್

Date:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಉಳಿದಿಲ್ಲ, ಸೋಲಿನ ಭಯದಿಂದಾಗಿ ಈಗ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಹಿಂದೂ ಮುಸ್ಲಿಂ ರಾಜಕಾರಣವನ್ನು ನಾನು ಎಂದಿಗೂ ಮಾಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರು ಪ್ರಧಾನಿ ಹೇಳಿಕೆಯನ್ನು ಗೇಲಿ ಮಾಡಿದ್ದಾರೆ.

“ಕಳೆದ 10 ವರ್ಷಗಳಿಂದ ಅವರು (ಮೋದಿ) ತಮ್ಮ ರಾಜಕೀಯವನ್ನು ಕೇವಲ ಧರ್ಮದ ಆಧಾರದ ಮೇಲೆ ಮಾಡುತ್ತಿದ್ದಾರೆ. ಆದರೆ ತಾನು ಹಿಂದೂ-ಮುಸ್ಲಿಂ ರಾಜಕಾರಣ ಮಾಡಿಲ್ಲ, ತಾನು ಆ ರೀತಿಯ ರಾಜಕಾರಣ ಮಾಡಿದ್ದರೆ ಈ ಹುದ್ದೆಯಲ್ಲಿ ಉಳಿದುಕೊಳ್ಳಲೂ ಯೋಗ್ಯರಲ್ಲ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪುನರುಚ್ಛರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಹಾಗೆಯೇ, “ಪ್ರಧಾನಿ ಮೋದಿ ಹಿಂದೂ-ಮುಸ್ಲಿಂ ರಾಜಕಾರಣ ಮಾಡಿಲ್ಲ ಎಂದು ಹೇಳುವುದಾದರೆ ಅವರು ಕಳೆದ 10 ವರ್ಷಗಳಿಂದ ಮಾಡುತ್ತಿರುವುದೇನು” ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, “ಒಂದೋ ನೀವು ಮೊದಲು ಸುಳ್ಳು ಹೇಳುತ್ತಿದ್ದೀರಿ ಅಥವಾ ನೀವು ಈಗ ಸುಳ್ಳು ಹೇಳುತ್ತಿದ್ದೀರಿ. ಇಡೀ ದೇಶವೇ ನೋಡುತ್ತಿದೆ. ಪ್ರಧಾನಿ ಬರೀ ಸುಳ್ಳು ಮಾತನಾಡುತ್ತಾರೆ, ಸುಳ್ಳನ್ನು ಹರಡುತ್ತಾರೆ” ಎಂದು ಟೀಕಿಸಿದರು.

ಇನ್ನು ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಸೆಲ್ವಪೆರುಂತಗೈ ಮಾತನಾಡಿ, “ಬಿಜೆಪಿ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಸೋಲಿನ ಅರಿವಾಗಿದೆ. ಹಾಗಾಗಿ ಈಗ ಮುಸ್ಲಿಮರ ವಿರುದ್ಧ ಮಾತನಾಡಿರುವುದನ್ನು ನಿರಾಕರಿಸುತ್ತಿದ್ದಾರೆ” ಎಂದರು.

ಇದನ್ನು ಓದಿದ್ದೀರಾ? ನಿರ್ಗಮಿಸುವ ಪ್ರಧಾನಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ: ಕಾಂಗ್ರೆಸ್ ವಾಗ್ದಾಳಿ

“ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡಿದ್ದಾರೆ. ಇತ್ತೀಚಿನ ಗುಪ್ತಚರ ವರದಿಗಳ ಪ್ರಕಾರ ಬಿಜೆಪಿ ಇದುವರೆಗೆ ಸ್ಪರ್ಧಿಸಿರುವ 329 ಸ್ಥಾನಗಳಲ್ಲಿ 100ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ. ಈ ಪ್ರತಿಕೂಲ ಪರಿಸ್ಥಿತಿ ಮತ್ತು ಮುಂಬರುವ ಹಂತಗಳಲ್ಲಿ ಮತ ಹೆಚ್ಚಿಸಲು ಮೋದಿ ಈಗ ಮುಸ್ಲಿಮರು ಅಥವಾ ಇಸ್ಲಾಂ ಧರ್ಮದ ವಿರುದ್ಧ ಮಾತನಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...