ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

Date:

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ ಮ್ಯಾನ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ. ಹಾಗೆಯೇ ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಹೇಳಿದರು.

ಎಸ್‌ಟಿ-ಮೀಸಲಾತಿ ವಲ್ಸಾದ್ ಲೋಕಸಭಾ ಸ್ಥಾನದ ಕಾಂಗ್ರೆಸ್ ಅಭ್ಯರ್ಥಿ ಅನಂತ್ ಪಟೇಲ್ ಅವರನ್ನು ಬೆಂಬಲಿಸಿ ಬುಡಕಟ್ಟು ಪ್ರಾಬಲ್ಯದ ವಲ್ಸಾದ್ ಜಿಲ್ಲೆಯ ಧರಮ್‌ಪುರ ಗ್ರಾಮದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಪ್ರಿಯಾಂಕಾ ಗಾಂಧಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರು ಮತ್ತು ಅಭ್ಯರ್ಥಿಗಳು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅದನ್ನು ನಿರಾಕರಿಸುತ್ತಿದ್ದಾರೆ. ಇದು ಅವರ ಚುನಾವಣಾ ತಂತ್ರವಲ್ಲದೇ ಮತ್ತೆ ಏನೂ ಅಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

“ಮೊದಲನೆಯದಾಗಿ, ಅವರು ನಾವು ಯಾವುದನ್ನೂ ಮಾಡುವುದಿಲ್ಲ ಎಂದು ನಿರಂತರವಾಗಿ ನಿರಾಕರಿಸುತ್ತಾ ಇರುತ್ತಾರೋ ಅದನ್ನೇ ತಾವು ಅಧಿಕಾರಕ್ಕೆ ಬಂದ ಬಳಿಕ ಜಾರಿ ಮಾಡುತ್ತಾರೆ. ಸಾಮಾನ್ಯ ಜನರನ್ನು ದುರ್ಬಲಗೊಳಿಸಲು ಮತ್ತು ನಮ್ಮ ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಕಸಿದುಕೊಳ್ಳಲು ಅವರು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಾರೆ” ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದರು.

ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು, “ಪಿಎಂ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಸೂಪರ್ ಮ್ಯಾನ್ ಆಗಿ ವೇದಿಕೆಗೆ ಆಗಮಿಸುತ್ತಾರೆ. ಆದರೆ ನೀವು ಪಿಎಂ ಮೋದಿ ಅವರು ದುಬಾರಿ ಮ್ಯಾನ್ ಅನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಲೇವಡಿ ಮಾಡಿದರು.

“ಬಿಜೆಪಿ ನಾಯಕರು ಪ್ರಧಾನಿಯನ್ನು ಶಕ್ತಿಶಾಲಿ ಎಂದು ಬಿಂಬಿಸುತ್ತಾರೆ ಮತ್ತು ಅವರು ಚಿಟಿಕೆ ಹೊಡೆದು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು ಎಂದು ಹೇಳುತ್ತಾರೆ. ಹಾಗಿರುವಾಗ ಬಡತನವನ್ನು ಹೋಗಲಾಡಿಸಲು ಮೋದಿ ಅವರಿಂದ ಏಕೆ ಸಾಧ್ಯವಾಗುತ್ತಿಲ್ಲ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?  Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

“ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಮತ್ತು ದೇಶದಲ್ಲಿ ಬುಡಕಟ್ಟು ಜನರು ಹಣದುಬ್ಬರ, ನಿರುದ್ಯೋಗ ಏರುತ್ತಿದೆ. ಸಂಭಾವನೆ ಕಡಿಮೆಯಾಗುತ್ತಿದೆ, ಬುಡಕಟ್ಟು ಜನರ ಭೂಮಿ ನಷ್ಟವಾಗುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಇತರ ದೌರ್ಜನ್ಯಗಳಂತಹ ಸಮಸ್ಯೆಗಳಿಂದ ಬುಡಕಟ್ಟು ಜನರ ಬಳಲುತ್ತಿದೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಇನ್ನು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಪ್ರಸ್ತಾಪಿಸಿ ಮಾತನಾಡಿದ ಅವರು, “ಇದು ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುತ್ತದೆ. ನಮ್ಮ ಪಕ್ಷವು ನಗರ ಪ್ರದೇಶಗಳಿಗೆ ಎಂಜಿಎನ್‌ಆರ್‌ಇಜಿಎ ತರಹದ ಯೋಜನೆಯನ್ನು ತರುತ್ತದೆ. ಕುಟುಂಬಸ್ಥರಿಗೆ 100 ದಿನಗಳ ಖಾತರಿಯ ಕೆಲಸ ಸಿಗುತ್ತದೆ” ಎಂದರು.

ವಲ್ಸಾದ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನಂತ್ ಪಟೇಲ್ ವಿರುದ್ಧ ಬಿಜೆಪಿ ಧವಲ್ ಪಟೇಲ್ ಅವರನ್ನು ಕಣಕ್ಕಿಳಿಸಿದೆ. ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. 2014 ಮತ್ತು 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಗದ್ದುಗೆಯನ್ನು ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...