ಮೊದಲ ಬಾರಿಗೆ 23 ಮಂದಿಗೆ ‘ನ್ಯಾಷನಲ್ ಕ್ರಿಯೇಟರ್ಸ್‌ ಪ್ರಶಸ್ತಿ’ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

Date:

ಯೂಟ್ಯೂಬ್‌, ಇನ್ಸ್‌ಟಾಗ್ರಾಮ್‌ ಸೇರಿದಂತೆ ಹಲವು ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಕಟೆಂಟ್ ಕ್ರಿಯೇಟ್ ಮಾಡಿ, ಹೆಸರು ಗಳಿಸಿಕೊಂಡಿರುವ 23 ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊಟ್ಟಮೊದಲ ಬಾರಿಗೆ  ನ್ಯಾಷನಲ್ ಕ್ರಿಯೇಟರ್ಸ್‌ ಪ್ರಶಸ್ತಿ 2024′ ಅನ್ನು ವಿತರಿಸಿದರು.

ರಾಷ್ಟ್ರ ರಾಜಧಾನಿಯಲ್ಲಿರುವ ಭಾರತ್ ಮಂಟಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ಹೆಸರು ಮಾಡಿರುವವರಿಗೆ ಈ ಪ್ರಶಸ್ತಿಯನ್ನು ವಿತರಿಸಲಾಯಿತು.

ಆರ್‌ಜೆ ಹಾಗೂ ಕಂಟೆಂಟ್‌ ಕ್ರಿಯೇಟರ್‌ ಆಗಿರುವ ಕರ್ನಾಟಕದ ‘ಅಯ್ಯೋ ಶ್ರದ್ಧಾ’ ಎಂದೇ ಹೆಸರು ಮಾಡಿರುವ ಶ್ರದ್ಧಾ ಜೈನ್‌ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್‌ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದರು. ಉಳಿದಂತೆ ಜಾಹ್ನ್ವಿ ಸಿಂಗ್ ಅವರಿಗೆ ಹೆರಿಟೇಜ್ ಫ್ಯಾಷನ್ ಐಕಾನ್ ಪ್ರಶಸ್ತಿ, ಕಬಿತಾ ಸಿಂಗ್ (ಕಬಿತಾಸ್ ಕಿಚನ್) ಅವರಿಗೆ ಆಹಾರ ವಿಭಾಗದಲ್ಲಿ ಅತ್ಯುತ್ತಮ ಕಂಟೆಂಟ್‌ ಕ್ರಿಯೇಟರ್‌ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮೂವರು ಅಂತಾರಾಷ್ಟ್ರೀಯ ಕಂಟೆಂಟ್ ಕ್ರಿಯೇಟರ್ಸ್‌ ಸೇರಿದಂತೆ ಒಟ್ಟು 23 ವಿಜೇತರಿಗೆ ಮೊದಲ ವರ್ಷದ ಈ ಪ್ರಶಸ್ತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಸ್ತಿ ನೀಡಿ ಮಾತನಾಡಿದ ಪ್ರಧಾನಿ ಮೋದಿ, “ಮುಂದಿನ ಲೋಕಸಭೆ ಚುನಾವಣೆ ಇದೆ ಎನ್ನುವ ಕಾರಣಕ್ಕಾಗಿ ನಾನು ಈ ಪ್ರಶಸ್ತಿಯನ್ನು ನೀಡುತ್ತಿದ್ದೇನೆ ಎಂದು ಕೆಲವರು ಹೇಳುತ್ತಾರೆ. ಆದರೆ, ಮುಂದಿನ ವರ್ಷ ಶಿವರಾತ್ರಿಗೂ ನಾನೇ ಈ ಪ್ರಶಸ್ತಿ ಪ್ರದಾನ ಮಾಡಲಿದ್ದೇನೆ. ಇದು ಮೋದಿ ಗ್ಯಾರಂಟಿ” ಎನ್ನುವ ಮೂಲಕ ಮತ್ತೊಮ್ಮೆ ಕೇಂದ್ರದಲಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಶಸ್ತಿ ಪಡೆದವರ ಪಟ್ಟಿ ಹೀಗಿದೆ:

  1. ಅತ್ಯುತ್ತಮ ಕಥೆಗಾರ್ತಿ ಪ್ರಶಸ್ತಿ: ಕೀರ್ತಿಕಾ ಗೋವಿಂದಸಾಮಿ
  2. ದಿ ಡಿಸ್ಟ್ರಪ್ಟರ್ ಆಫ್ ದಿ ಇಯರ್: ರಣವೀರ್ ಅಲಹಾಬಾದಿಯಾ
  3. ವರ್ಷದ ಸೆಲೆಬ್ರಿಟಿ ಕ್ರಿಯೇಟರ್: ಅಮನ್ ಗುಪ್ತಾ
  4. ಗ್ರೀನ್ ಚಾಂಪಿಯನ್ ಪ್ರಶಸ್ತಿ: ಪಂಕ್ತಿ ಪಾಂಡೆ
  5. ಸಾಮಾಜಿಕ ಬದಲಾವಣೆಗಾಗಿ ಅತ್ಯುತ್ತಮ ಸೃಷ್ಟಿಕರ್ತ: ಜಯ ಕಿಶೋರಿ
  6. ಅತ್ಯಂತ ಪ್ರಭಾವಶಾಲಿ ಕೃಷಿ ಸೃಷ್ಟಿಕರ್ತ: ಲಕ್ಷಯ್ ದಾಬಸ್
  7. ವರ್ಷದ ಸಾಂಸ್ಕೃತಿಕ ರಾಯಭಾರಿ: ಮೈಥಿಲಿ ಠಾಕೂರ್
  8. ಅಂತಾರಾಷ್ಟ್ರೀಯ ಸೃಷ್ಟಿಕರ್ತ ಪ್ರಶಸ್ತಿ: ಡ್ರೂ ಹಿಕ್ಸ್
  9. ಅತ್ಯುತ್ತಮ ಟ್ರಾವೆಲ್ ಕ್ರಿಯೇಟರ್ ಪ್ರಶಸ್ತಿ: ಕಾಮಿಯಾ ಜಾನಿ
  10. ಸ್ವಚ್ಛತಾ ರಾಯಭಾರಿ ಪ್ರಶಸ್ತಿ: ಮಲ್ಹಾರ ಕಾಳಂಬೆ
  11. ದಿ ನ್ಯೂ ಇಂಡಿಯಾ ಚಾಂಪಿಯನ್ ಪ್ರಶಸ್ತಿ: ಅಭಿ ಮತ್ತು ನಿಯು
  12. ಟೆಕ್ ಕ್ರಿಯೇಟರ್ ಪ್ರಶಸ್ತಿ: ಗೌರವ್ ಚೌಧರಿ
  13. ಹೆರಿಟೇಜ್ ಫ್ಯಾಷನ್ ಐಕಾನ್ ಪ್ರಶಸ್ತಿ: ಜಾಹ್ನ್ವಿ ಸಿಂಗ್
  14. ಅತ್ಯಂತ ಸೃಜನಶೀಲ ಸೃಷ್ಟಿಕರ್ತ (ಪುರುಷರ ವಿಭಾಗ): RJ ರೌನಾಕ್
  15. ಅತ್ಯಂತ ಸೃಜನಶೀಲ ಸೃಷ್ಟಿಕರ್ತ (ಮಹಿಳೆಯರ ವಿಭಾಗ) : ಅಯ್ಯೋ ಶ್ರದ್ಧಾ ಜೈನ್
  16. ಆಹಾರ ವಿಭಾಗದಲ್ಲಿ ಅತ್ಯುತ್ತಮ ಸೃಷ್ಟಿಕರ್ತ: ಕಬಿತಾ ಸಿಂಗ್ (ಕಬಿತಾಸ್ ಕಿಚನ್)
  17. ಶಿಕ್ಷಣ ವಿಭಾಗದಲ್ಲಿ ಅತ್ಯುತ್ತಮ ಸೃಷ್ಟಿಕರ್ತ: ನಮನ್ ದೇಶಮುಖ್
  18. ಗೇಮಿಂಗ್ ವಿಭಾಗದಲ್ಲಿ ಅತ್ಯುತ್ತಮ ರಚನೆಕಾರ: ನಿಶ್ಚಯ್
  19. ಅತ್ಯುತ್ತಮ ಮೈಕ್ರೋ ಕ್ರಿಯೇಟರ್: ಅರಿದಮನ್
  20. ಅತ್ಯುತ್ತಮ ನ್ಯಾನೋ ಸೃಷ್ಟಿಕರ್ತ: ಪಿಯೂಷ್ ಪುರೋಹಿತ್
  21. ಅತ್ಯುತ್ತಮ ಆರೋಗ್ಯ ಮತ್ತು ಫಿಟ್‌ನೆಸ್ ಸೃಷ್ಟಿಕರ್ತ: ಅಂಕಿತ್ ಬೈಯಾನ್‌ಪುರಿಯಾ
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...