ಕತಾರ್‌ನಲ್ಲಿ ಬಂಧಿತರಾಗಿದ್ದವರ ಬಿಡುಗಡೆಗೆ ನಟ ಶಾರೂಖ್ ಖಾನ್ ಕಾರಣ: ಚರ್ಚೆಗೆ ಗ್ರಾಸವಾದ ಸುಬ್ರಮಣಿಯನ್ ಸ್ವಾಮಿ ಟ್ವೀಟ್

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕತಾರ್ ದೇಶಗಳ ಪ್ರವಾಸಕ್ಕೆ ತೆರಳಿರುವ ಮಧ್ಯೆಯೇ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಟ್ವೀಟ್‌ವೊಂದು, ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಮ್ಮ ಎರಡು ದಿನದ ಭೇಟಿಯ ಬಗ್ಗೆ ಇಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದರು. ಈ ಟ್ವೀಟ್‌ನಲ್ಲಿ ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ. ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧವನ್ನು ಸದೃಢಗೊಳಿಸಲಿದೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಯುಎಇಗೆ ಇದು ನನ್ನ 7ನೇ ಭೇಟಿಯಾಗಿದೆ. ಕತಾರ್‌ನ ಅಮೀರ್ ತಮೀಮ್ ಬಿನ್ ಹಮದ್ ಅವರನ್ನೂ ಕೂಡ ಭೇಟಿ ಮಾಡಲಿದ್ದೇನೆ” ಎಂದು ಎಲ್ಲ ವಿವರಗಳನ್ನು ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಟ್ವೀಟ್‌ಗೆ ಉತ್ತರಿಸಿರುವ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, “ಪ್ರಧಾನಿ ಮೋದಿಯವರು ಕತಾರ್‌ನ ಅಮೀರ್ ಅವರ ಭೇಟಿ ಮಾಡುವ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಕೂಡ ಜೊತೆಗೆ ಕರೆದುಕೊಂಡು ಹೋಗಬೇಕು” ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಕಾರಣ ವಿವರಿಸಿರುವ ಸುಬ್ರಮಣಿಯನ್ ಸ್ವಾಮಿ, “ಕತಾರ್‌ನಲ್ಲಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಸಂಸ್ಥೆಯ ಅಧಿಕಾರಿಗಳು ಕತಾರ್‌ ಶೇಖ್‌ಗಳ ಮನವೊಪ್ಪಿಸುವಲ್ಲಿ ವಿಫಲರಾಗಿದ್ದರು. ಆ ಬಳಿಕ ಕತಾರ್‌ ಶೇಖ್‌ಗಳ ಜೊತೆಗೆ ಮಾತುಕತೆ ನಡೆಸುವಂತೆ ಮೋದಿಯವರು ಶಾರೂಖ್ ಖಾನ್ ಅವರಲ್ಲಿ ಕೇಳಿಕೊಂಡಿದ್ದರು. ಶಾರೂಖ್ ಖಾನ್ ಅವರ ಮಾತುಕತೆಯ ಫಲವಾಗಿ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಹಾಗಾಗಿ, ಕತಾರ್‌ ಅಮೀರ್‌ ಅವರ ಭೇಟಿಯ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಕೂಡ ಜೊತೆಗೆ ಕರೆದುಕೊಂಡು ಹೋಗಿ” ಎಂದು ಆಗ್ರಹಿಸಿದ್ದಾರೆ.

ಈ ಟ್ವೀಟ್ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಬಗ್ಗೆ ನಟ ಶಾರೂಖ್ ಖಾನ್ ಆಗಲೀ, ವಿದೇಶಾಂಗ ವ್ಯವಹಾರಗಳ ಸಚಿವಾಲಯವಾಗಲೀ ಯಾವುದೇ ಹೇಳಿಕೆ ನೀಡಿಲ್ಲ.

ಸುಬ್ರಮಣಿಯನ್ ಸ್ವಾಮಿಯವರು ನೀಡಿದ ಈ ಹೇಳಿಕೆಯ ಬೆನ್ನಲ್ಲೇ ನಟ ಶಾರೂಖ್ ಖಾನ್ ಕತಾರ್ ಶೇಖ್‌ಗಳ ಜೊತೆಗೆ ಓಡಾಡಿರುವ ಫೋಟೋಗಳು ಕೂಡ ಹರಿದಾಡಿದ್ದು, ವೈರಲ್ ಆಗಿದೆ.

ಮೋದಿ ಧನ್ಯವಾದ ತಿಳಿಸಿದ್ದ ಬಿಡುಗಡೆಗೊಂಡಿದ್ದ ಅಧಿಕಾರಿಗಳು

ಕತಾರ್‌ನಲ್ಲಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದ ಬೆನ್ನಲ್ಲೇ, ಈ ಪೈಕಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದರು.

ದೆಹಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೇಳೆ, ತಮ್ಮನ್ನು ಬಿಡುಗಡೆಗೊಳಿಸುವುದಕ್ಕೆ ರಾಜತಾಂತ್ರಿಕವಾಗಿ ಹಾಗೂ ವೈಯಕ್ತಿಕವಾಗಿಯೂ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದರು. ವಿಮಾನ ನಿಲ್ದಾಣದ ಆವರಣದಲ್ಲಿ ಖುಷಿಯಿಂದ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದರು.

ಏನಿದು ಪ್ರಕರಣ?
ಕತಾರ್‍‌ನ ಸಬ್‌ಮರೈನ್ ಯೋಜನೆಯ ಬಗ್ಗೆ ಇಸ್ರೇಲ್‌ಗೆ ಗೂಢಚರ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಎಂಟು ಮಂದಿ ನಿವೃತ್ತ ಅಧಿಕಾರಿಗಳಾದ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬಿರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಠ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಕರ್ ಪಕಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ಸೈಲರ್ ರಾಗೇಶ್ ಎಂಬುವವರನ್ನು 2022ರ ಅಕ್ಟೋಬರ್ ವೇಳೆ ಕತಾರ್‌ ನಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು.

ಇದು ದೊಡ್ಡ ಚರ್ಚೆಗೆ ಕಾರಣವಾದ ಕಾರಣವಾದ ಬೆನ್ನಲ್ಲೇ ಭಾರತ ಸರ್ಕಾರ ಮಧ್ಯಪ್ರವೇಶಿಸಿತ್ತು. ಆ ಬಳಿಕ ಕೊನೆಗೆ ಇದನ್ನು ಸುದೀರ್ಘ ಅವಧಿಯ ಜೈಲು ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...