ಅವಿಶ್ವಾಸ ನಿರ್ಣಯ | ಕೇಂದ್ರ ಸರ್ಕಾರಕ್ಕೆ ಗೆಲುವು; ಪ್ರಶ್ನೆಗಳು ಹಾಗೆಯೇ ಉಳಿದಿವೆ ಎಂದ ಕಾಂಗ್ರೆಸ್

Date:

ಲೋಕಸಭೆಯಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೆಲುವು ಸಾಧಿಸಿದೆ.

ಧ್ವನಿಮತದ ಮೂಲಕ ನಡೆದ ಅವಿಶ್ವಾಸ ಮತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ.

ಅವಿಶ್ವಾಸ ನಿರ್ಣಯ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2 ಗಂಟೆ 13 ನಿಮಿಷಗಳ ಕಾಲ ಮಾತನಾಡಿದರು.

ಚರ್ಚೆ ಶುರುವಾದ ಒಂದೂವರೆ ಗಂಟೆ ನಂತರ ವಿಪಕ್ಷಗಳು ಸಭಾತ್ಯಾಗ ಮಾಡಿದ ಸಂದರ್ಭದಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಕೆಲ ನಿಮಿಷ ಮಾತನಾಡಿದ ನರೇಂದ್ರ ಮೋದಿ, “ಮಣಿಪುರದಲ್ಲಿ ಹಿಂಸೆಯಾಗಿದೆ. ಮಹಿಳೆಯರ ಮೇಲೆ ಗಂಭೀರ ಅಪರಾಧವಾಗಿದೆ. ಅಪರಾಧಿಗಳಿಗೆ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ದೊಡ್ಡ ಪ್ರಯತ್ನ ಮಾಡುತ್ತಿದೆ. ದೇಶದ ನಾಗರೀಕರಿಗೆ ನಾನು ವಿಶ್ವಾಸದಿಂದ ಹೇಳುತ್ತಿದ್ದೇನೆ. ನಮ್ಮ ಪ್ರಯತ್ನ ಯಾವ ರೀತಿ ಸಾಗುತ್ತಿದೆ ಎಂದರೆ ಮಣಿಪುರದಲ್ಲಿ ಖಂಡಿತವಾಗಿ ಶಾಂತಿ ಮರಳುತ್ತದೆ. ಮಣಿಪುರದ ಜನರಿಗೂ ನಾನು ಇಲ್ಲಿಂದಲೇ ಮನವಿ ಮಾಡಲು ಹೇಳುತ್ತಿದ್ದೇನೆ. ಮಣಿಪುರದ ಜನರೊಂದಿಗೆ ಈ ದೇಶವಿದೆ. ಈ ಸದನ ಅವರೊಂದಿಗೆ ಇದೆ. ನಾವೆಲ್ಲರೂ ಸೇರಿಕೊಂಡು ಅಲ್ಲಿ ಪರಿಹಾರ ಹುಡುಕಬೇಕಿದೆ. ಮಣಿಪುರದ ಮತ್ತೆ ವಿಕಾಸದ ಗತಿಗೆ ಮರಳುತ್ತದೆ. ಅದರಲ್ಲಿ ಯಾವುದೇ ಅನುಮಾನ ಯಾರಿಗೂ ಬೇಡ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ಇದನ್ನು ಹೊರತುಪಡಿಸಿದರೆ ವಿಪಕ್ಷವನ್ನು ಟೀಕಿಸಲು ಮಣಿಪುರ ಹಾಗೂ ಈಶಾನ್ಯ ರಾಜ್ಯದ ವಿಷಯವನ್ನು ಆಗಾಗ ಪ್ರಸ್ತಾಪಿಸಿದರು. ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಬೇಕೆಂದು ಒತ್ತಾಯಿಸಿ ವಿಪಕ್ಷಗಳ ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಪ್ರಶ್ನೆಗಳು ಹಾಗೆಯೇ ಉಳಿದಿವೆ ಎಂದ ಕಾಂಗ್ರೆಸ್

ಮಣಿಪುರ ಹಿಂಸಾಚಾರದ ಬಗ್ಗೆ ಹೆಚ್ಚು ಪ್ರಸ್ತಾಪಿಸದ ಪ್ರಧಾನಿ ನರೇಂದ್ರ ಮೋದಿ ಮನಸ್ಥಿತಿಯನ್ನು ಕಾಂಗ್ರೆಸ್ ಟೀಕಿಸಿದೆ.

ಪ್ರಶ್ನೆಗಳು ಈಗಲೂ ಹಾಗೆಯೇ ಉಳಿದಿವೆ ಎಂದಿರುವ ಕಾಂಗ್ರೆಸ್, ಮಣಿಪುರ ಹಿಂಸಾಚಾರ 100 ದಿನಗಳನ್ನು ಪೂರೈಸಿದೆ, ಪ್ರಧಾನಿ ಮೋದಿ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ? ಮಣಿಪುರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿ ಸುಮಾರು 80 ದಿನಗಳನ್ನು ಏಕೆ ತೆಗೆದುಕೊಂಡರು? ಪ್ರಧಾನಿ ಮೋದಿ ಅವರು ಮಣಿಪುರದ ಸಿಎಂ ಅನ್ನು ಇಲ್ಲಿಯವರೆಗೆ ಏಕೆ ವಜಾ ಮಾಡಿಲ್ಲ? ಎಂದು ಟ್ವಿಟರ್‌ನಲ್ಲಿ ತಿಳಿಸಿದೆ.

ಮಣಿಪುರಕ್ಕೆ ಸಂಬಂಧಿಸಿದ ವಿಪಕ್ಷಗಳ ಯಾವುದೇ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ. ಅದಕ್ಕಾಗಿಯೇ ‘ಇಂಡಿಯಾ’ ಮೈತ್ರಿಕೂಟವು ಮಣಿಪುರದ ಜನರಿಗೆ ತನ್ನ ಹೊಣೆಗಾರಿಕೆಯನ್ನು ಮನವರಿಕೆ ಮಾಡುವ ಸಲುವಾಗಿಯೇ ಸದನದಿಂದ ಹೊರನಡೆದಿದೆ ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...