ತೆಲಂಗಾಣದ ಬಗ್ಗೆ ಮೋದಿ ಅವಹೇಳನ: ರಾಹುಲ್ ಗಾಂಧಿ ಆಕ್ರೋಶ

Date:

ತೆಲಂಗಾಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವಹೇಳನ ಮಾಡಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ರಾಹುಲ್‌ ಗಾಂಧಿ, “ತೆಲಂಗಾಣದ ಹುತಾತ್ಮರು ಮತ್ತು ಅವರ ತ್ಯಾಗದ ಬಗ್ಗೆ ಪ್ರಧಾನಿ ಮೋದಿಯವರ ಅಗೌರವದ ಭಾಷಣವು ತೆಲಂಗಾಣದ ಅಸ್ತಿತ್ವ ಮತ್ತು ಸ್ವಾಭಿಮಾನಕ್ಕೆ ಅವಮಾನವಾಗಿದೆ” ಎಂದು ಹೇಳಿದ್ದಾರೆ.

ಸೋಮವಾರ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ, ಆಂಧ್ರಪ್ರದೇಶದಿಂದ ತೆಲಂಗಾಣವನ್ನು ಅವೈಜ್ಞಾನಿಕವಾಗಿ ವಿಭಜನೆ ಮಾಡಿದ್ದರಿಂದ ಎರಡೂ ರಾಜ್ಯಗಳಲ್ಲಿ ನೋವು ಮತ್ತು ರಕ್ತಪಾತಕ್ಕೆ ಕಾರಣವಾಯಿತು ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ಮಂತ್ರಿಯವರ ಹೇಳಿಕೆಯನ್ನು ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ ಟಿ ರಾಮರಾವ್ ಅವರು ‘ಅವಹೇಳನಕಾರಿ’ ಎಂದು ಹೇಳಿದ್ದು, ಈ ಮಾತುಗಳು ಐತಿಹಾಸಿಕ ಸಂಗತಿಗಳ ಬಗ್ಗೆ ಪ್ರಧಾನಿಯವರ ಸಂಪೂರ್ಣ ‘ಅಲಕ್ಷ್ಯ’ವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ್ದರು.

ಈ ಸುದ್ದಿಯನ್ನು ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆಗೆ ಸೋನಿಯಾ, ರಾಹುಲ್ ಬೆಂಬಲ

“ತೆಲಂಗಾಣ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಿಂದ ನಾನು ತೀವ್ರ ಅಸಮಾಧಾನಗೊಂಡಿದ್ದೇನೆ. ತೆಲಂಗಾಣ ರಚನೆಯ ಬಗ್ಗೆ ಪ್ರಧಾನಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಇದೇ ಮೊದಲಲ್ಲ. ಇದು ಐತಿಹಾಸಿಕ ಸಂಗತಿಗಳ ಬಗ್ಗೆ ಅವರ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸುತ್ತದೆ. ತೆಲಂಗಾಣದ ಜನರು ರಾಜ್ಯತ್ವವನ್ನು ಪಡೆಯಲು ಆರು ದಶಕಗಳ ಕಾಲ ಅವಿರತವಾಗಿ ಹೋರಾಡಲಾಗಿದೆ. ಅಂತಿಮವಾಗಿ ಜೂನ್ 2, 2014 ರಂದು ಮಹತ್ವದ ಸಾಧನೆಯನ್ನು ಸಾಧಿಸಲಾಯಿತು. ರಾಜ್ಯತ್ವದ ಪ್ರಯಾಣವು ವಿಶೇಷವಾಗಿ ತೆಲಂಗಾಣದ ಯುವಕರಿಂದ ಲೆಕ್ಕವಿಲ್ಲದಷ್ಟು ತ್ಯಾಗಗಳಿಂದ ಗುರುತಿಸಲ್ಪಟ್ಟಿದೆ” ಎಂದು ಹೇಳಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ಅಟಲ್ ಬಿಹಾರಿ ವಾಜಪೇಯಿ ಆಡಳಿತಾವಧಿಯಲ್ಲಿ ಅತ್ಯಂತ ಯೋಜಿತ ರೀತಿಯಲ್ಲಿ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಿಂದ ವಿಭಜಸಲಾದ ಜಾರ್ಖಂಡ್, ಉತ್ತರಾಖಂಡ ಮತ್ತು ಛತ್ತೀಸ್‌ಗಢವನ್ನು ಉಲ್ಲೇಖಿಸಿದ ಮೋದಿ, ಆಂಧ್ರಪ್ರದೇಶದ ವಿಭಜನೆಯನ್ನು ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗಿದೆ ಎಂದು ಹೇಳಿದ್ದರು.

ಆ ಮೂರು ರಾಜ್ಯಗಳು ರಚನೆಯಾದಾಗ ಎರಡೂ ಕಡೆ ಸಂಭ್ರಮಾಚರಣೆಗಳು ನಡೆದಾಗ, ಅಖಂಡ ಆಂಧ್ರಪ್ರದೇಶದ ವಿಭಜನೆಯು ಎರಡೂ ರಾಜ್ಯಗಳಲ್ಲಿ ಕಹಿ ಮತ್ತು ರಕ್ತಪಾತಕ್ಕೆ ಕಾರಣವಾಯಿತು ಎಂದು ಮೋದಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...