ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಎಲ್ಲ ರಾಜ್ಯಗಳಿಗೆ ತೆರಳಿ, ಎನ್‌ಡಿಎ ಪರ ಮತಯಾಚನೆ ನಡೆಸುತ್ತಿದ್ದಾರೆ.

ಇಂದು ರಾಜಸ್ಥಾನದ ಬನ್ಸ್‌ವಾರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಈ ಸಮಾವೇಶದಲ್ಲಿ ಪ್ರಧಾನಿ ಮೋದಿಯೇ ಖುದ್ದು ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದಿದ್ದು, ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅಲ್ಲದೇ, ತಮ್ಮ ಭಾಷಣದಲ್ಲಿ ಧರ್ಮವನ್ನು ಎಳೆದು ತರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾವೇಶದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಮ್ ಸಮುದಾಯವನ್ನು ಎಳೆದು ತಂದ ಮೋದಿ, “ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ” ಎಂದು ಹೇಳಿಕೆ ನೀಡಿದ್ದಾರೆ. ಸುಮಾರು ಒಂದೂವರೆ ನಿಮಿಷದ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವಿವಾದ ಎಬ್ಬಿಸಿದೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ, “ಈ ದೇಶದ ಸಂಪತ್ತಿನ ಮೊದಲ ಅಧಿಕಾರ ಇರುವುದು ಮುಸ್ಲಿಮರಿಗೆ ಎಂದು ಈ ಮೊದಲಿದ್ದ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಇದರ ಅರ್ಥ ಏನೆಂದರೆ, ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಯಾರಿಗೆ ಹೆಚ್ಚು ಮಕ್ಕಳಿದ್ದಾರೋ ಅವರಿಗೆ ನೀಡುವುದಾಗಿದೆ. ನುಸುಳುಕೋರರಿಗೆ ಹಂಚಲಿದೆ. ನೀವು ಕಷ್ಟಪಟ್ಟು ದುಡಿದು ಗಳಿಸಿದ ಸಂಪತ್ತು, ಹಣವನ್ನು ನುಸುಳುಕೋರರಿಗೆ ನೀಡಬೇಕೇ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯೇ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳುತ್ತಿದೆ. ದೇಶದ ಜನರ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅವುಗಳನ್ನು ಕಾಂಗ್ರೆಸ್ ಮುಸ್ಲಿಮರಿಗೆ ನೀಡಲಿದೆ. ಇದು ನಗರ ನಕ್ಸಲರ ಯೋಚನೆಯಾಗಿದೆ. ನಮ್ಮ ಹೆಣ್ಣು ಮಕ್ಕಳ ಮಂಗಳಸೂತ್ರ ಕೂಡ ಉಳಿಯುವುದಿಲ್ಲ. ಅಲ್ಲಿಯವರೆಗೂ ಬೇಕಾದರೆ ಕಾಂಗ್ರೆಸ್ ಹೋಗಬಹುದು ಎಂದು ನಾನು ಹೇಳಬಯಸುತ್ತೇನೆ” ಎಂದು ವಿವಾದಾತ್ಮಕ ಹಾಗೂ ದ್ವೇಷ ಭಾಷಣಗೈದಿದ್ದಾರೆ.

“ಬಿಜೆಪಿಗೆ ಇದು ವಿನಾಶಕಾರಿ. ಮೊದಲ ಹಂತದ ಮತದಾನದ ನಂತರ ನರೇಂದ್ರ ಮೋದಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದ್ದಾರೆ. ಮತ್ತೊಮ್ಮೆ ಧರ್ಮದ ಹೆಸರಿನಲ್ಲಿ ಮತ ಕೇಳಿದ್ದಾರೆ. ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್ ಜನರ ವೈಯಕ್ತಿಕ ಆಸ್ತಿಗಳನ್ನು ಕಸಿದುಕೊಳ್ಳುತ್ತದೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದು 10 ವರ್ಷಗಳ ಕಾಲ ನಮ್ಮ ದೇಶವನ್ನಾಳಿದ ಪ್ರಧಾನಿಯ ಸ್ಥಿತಿ. ಇವರ ಮನಸ್ಥಿತಿ ಊಹಿಸಿ. ಮೋದಿಯವರಿಂದ ಇದು ತೀರಾ ಹತಾಶೆಯ ಮಾತು. ಚುನಾವಣಾ ಆಯೋಗವು ಇನ್ನೂ ನಿದ್ರಿಸುವುದನ್ನು ಮುಂದುವರೆಸಿದರೆ ಬಹಳ ಕಷ್ಟವಿದೆ” ಎಂದು ನೆಟ್ಟಿಗರೊಬ್ಬರು ವಿಡಿಯೋ ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ಈ ವೀಡಿಯೋ ವೈರಲಾಗಿದ್ದು, ಚುನಾವಣಾ ಆಯೋಗವು ನಿದ್ರಿಸುತ್ತಿದೆಯೇ ಎಂದು ನೆಟ್ಟಿಗರು ಹಾಗೂ ವಿಪಕ್ಷಗಳ ಮುಖಂಡರು ಪ್ರಶ್ನಿಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...