ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

Date:

“ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಲೂ ಹೆದರುತ್ತಿದ್ದಾರೆ. ಏಕೆಂದರೆ ಕೇಜ್ರಿವಾಲ್‌ ಬಂಧನದ ನಂತರ ಕೂಡ ಹೆಚ್ಚು ಅಪಾಯಕಾರಿಯಾಗಿದ್ದಾರೆ” ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ವಶದಲ್ಲಿದ್ದುಕೊಂಡೇ ಸರ್ಕಾರವನ್ನು ನಡೆಸುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರವನ್ನು ಬೆಂಬಲಿಸಿದ್ದು, ಕೇಜ್ರಿವಾಲ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿಗೆ ಹೋದ ನಾಯಕರು ಬಲಶಾಲಿಯಾಗಿದ್ದರು. ಅಂತೆಯೇ ಈಗ ಈಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್‌ ಅವರು, ಜೈಲಿನಿಂದಲೇ ಆಡಳಿತ ನಡೆಸಲು ಮುಂದಾಗಿರುವುದು ಶ್ಲಾಘನೀಯ” ಎಂದರು.

“ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟವು ಪ್ರತಿಭಟನಾ ಮೆರವಣಿಗೆ ಆಯೋಜಿಸುತ್ತಿದೆ. ನಾವೆಲ್ಲರೂ ಆ ಮೆರವಣಿಗೆಯಲ್ಲಿ ಭಾಗವಹಿಸುತ್ತೇವೆ” ಎಂದು ಹೇಳಿದರು.

“ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಕಂಡರೆ ಭಯವಿದೆ. ಹಾಗಾಗಿ ಅವರನ್ನು ಬಂಧಿಸಿಟ್ಟಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ತನಗೆ ನೆಮ್ಮದಿ ಸಿಗಬಹುದೆಂದು ಮೋದಿ ಬಯಸಿದ್ದರು. ಆದರೆ, ಅರವಿಂದ್ ಕೇಜ್ರಿವಾಲ್ ಈಗ ಇನ್ನೂ ಹೆಚ್ಚು ಅಪಾಯಕಾರಿಯಾಗಿದ್ದಾರೆ. ಸಿಎಂ ಆಗಿದ್ದುಕೊಂಡೇ ಅವರು ಜೈಲಿನಿಂದಲೇ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ, ಜನರು ಅವರ ಮಾತನ್ನು ಕೇಳುತ್ತಾರೆ. ಜತೆಗೆ ಅವರ ಬೆಂಬಲಕ್ಕೆ ಬರುತ್ತಾರೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಂಧಿತರಾಗಿದ್ದ ನಾಯಕರು ಇದೇ ರೀತಿ ಕೆಲಸ ಮಾಡಿದ್ದರು. ಜೈಲಿನಿಂದ ಹೊರಬಂದಾಗ ಅವರು ಜನಬೆಂಬಲ ಪಡೆಯುವ ಮೂಲಕ ಇನ್ನಷ್ಟು ಬಲಶಾಲಿಯಾಗಿದ್ದರು” ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹಾಡಿ, ಹೊಗಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ; 20 ಸ್ಥಾನ ಗೆಲ್ತೇವೆ: ಸಿಎಂ ಸಿದ್ದರಾಮಯ್ಯ

ಸೀಟು ಹಂಚಿಕೆಯ ಬಗ್ಗೆ ಕೇಳಿದಾಗ, “ಶಿವಸೇನೆಯ ಉದ್ಧವ್ ಠಾಕ್ರೆ ಬಣದ 15 ರಿಂದ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗುವುದು” ಎಂದು ರಾವತ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...