ಬಜೆಟ್ ಮಂಡನೆ ವೇಳೆ ಶಾಸಕಿಯ ಸೀಟಿನಲ್ಲಿ ಬಂದು ಕುಳಿತ ಹೊರಗಿನ ವ್ಯಕ್ತಿ : ಪೊಲೀಸ್ ವಶಕ್ಕೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಶಾಸಕಿಯೋರ್ವರ ಸೀಟಿನಲ್ಲಿ ವ್ಯಕ್ತಿಯೊಬ್ಬ ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದ ಘಟನೆ ವರದಿಯಾಗಿದೆ.

ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು, ಸಿಎಂ ಐತಿಹಾಸಿಕ ಬಜೆಟ್ ಆರಂಭಿಸಿ ಕೆಲ ನಿಮಿಷಗಳ ನಂತರ ಖಾಸಗಿ ವ್ಯಕ್ತಿಯೋರ್ವ ಬಂದು ದೇವದುರ್ಗ ಶಾಸಕಿ ಕರೆಮ್ಮ ಜಾಗದಲ್ಲಿ ಕೂತಿದ್ದರು. ಬಳಿಕ ಅವರನ್ನು ಪ್ರಶ್ನಿಸಿದಾಗ ಮೊಳಕಾಲ್ಮೂರು ಶಾಸಕ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.

ವ್ಯಕ್ತಿಯ ಬಗ್ಗೆ ಅನುಮಾನ ಬಂದು ಪಕ್ಕದಲ್ಲಿದ್ದ ಕೆಲ ಶಾಸಕರಲ್ಲಿ ಕೇಳಿದಾಗ ಅವರು ನಮಗೆ ಗೊತ್ತಿಲ್ಲ ಅಂದರು. ಈ ನಡುವೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬಳಿಗೂ ತೆರಳಿ ಕೈ ಕುಲುಕಿದರು. ಕೂಡಲೇ ಈ ವ್ಯಕ್ತಿಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದೆ. ಅಷ್ಟೊತ್ತಿಗೆ ಆತ ನಾಪತ್ತೆಯಾಗಿದ್ದ. ಸುಮಾರು 70ರ ಆಸುಪಾಸಿನ ವ್ಯಕ್ತಿ, ಕೈಯಲ್ಲೊಂದು ಸಣ್ಣ ಬ್ಯಾಗ್‌ ಕೂಡ ಇತ್ತು. ಇದು ಭದ್ರತಾ ವೈಫಲ್ಯವೋ ಏನೋ ನನಗೆ ಗೊತ್ತಿಲ್ಲ. ಕೂಡಲೇ ಸ್ಪೀಕರ್ ಗಮನಕ್ಕೂ ತಂದಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
arrested vidhana soudha

ಇದು ಮಾಧ್ಯಮಗಳಲ್ಲಿ ಸುದ್ದಿಯಾದ ಕೂಡಲೇ ಎಚ್ಚೆತ್ತುಕೊಂಡ ವಿಧಾನಸಭೆಯ ಪೊಲೀಸರು, ಸದನದ ಒಳಗಡೆ ಪ್ರವೇಶಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ವ್ಯಕ್ತಿಯನ್ನು ತಿಪ್ಪೆರುದ್ರಸ್ವಾಮಿ ಎಂದು ಗುರುತು ಹಿಡಿಯಲಾಗಿದೆ. ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಾಕಾಗಿ ಒಳಪ್ರವೇಶಿಸಿದ್ದರು, ಅವರ ಹಿನ್ನೆಲೆ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ವಿಧಾನಸೌಧದ ಮಾರ್ಷಲ್‌ಗಳು ಈ ಬಗ್ಗೆ ದೂರು ಕೊಟ್ಟಿದ್ದಾರೆ. ಎಲ್ಲವನ್ನೂ ತನಿಖೆ ನಡೆಸುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್‌ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...