ಕರ್ನಾಟಕದ ಬಂಧಿತ ರೈತರನ್ನು ಮಧ್ಯಪ್ರದೇಶ ಗಡಿಯಲ್ಲಿ ಬಿಟ್ಟುಹೋದ ಪೊಲೀಸರು

Date:

ರೈತ ಸಂಘಟನೆಗಳು ಕರೆಕೊಟ್ಟಿದ್ದ ‘ದೆಹಲಿ ಚಲೋ’ ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಭೋಪಾನ್‌ನಲ್ಲಿ ಬಂಧಿಸಿದ್ದ ಪೊಲೀಸರು, ಇದೀಗ, ಅವರನ್ನು ಮಧ್ಯಪ್ರದೇಶ ಗಡಿಯಲ್ಲಿ ಬಿಟ್ಟು ಹೋಗಿದ್ದಾರೆ. ಗುರುವಾರ ಮುಂಜಾನೆ ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿ ಯಾವುದೇ ಮಾಹಿತಿ ನೀಡದೆ ರೈತರನ್ನು ರೈಲು ಹತ್ತಿಸಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ದೆಹಲಿ ಹೊರಟಿದ್ದ ರೈತರನ್ನು ಸೋಮವಾರ ಮುಂಜಾನೆ ಭೋಪಾಲ್‌ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರದೇಶ ಸರ್ಕಾರಕ್ಕೆ ಪತ್ರ ಬರೆದು, ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು. ದೆಹಲಿ ಪ್ರತಿಭಟನೆಗೆ ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದರು.

ಈ ಬೆನ್ನಲ್ಲೇ, ನಾಲ್ಕು ದಿನಗಳ ಕಾಲ ತಮ್ಮ ವಶದಟ್ಟಿಕೊಂಡಿದ್ದ ರೈತರನ್ನು ಭೋಪಾಲ್‌ನಲ್ಲಿ ರೈಲು ಹತ್ತಿಸಿಕೊಂಡು ಕರೆದೊಯ್ದ ಪೊಲೀಸರು ಮಧ್ಯಪ್ರದೇಶ ಗಡಿಯಲ್ಲಿ ಇಳಿದು ಹೋಗಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದ ಕಾರಣ, ರೈತರಿಗೆ ಮುಂದೇನು ಮಾಡುವುದು ಎಂಬುದು ತಿಳಿಯದೆ, ಆತಂಕ ಎದುರಾಗಿದೆ. ಸದ್ಯ, ಆ ಎಲ್ಲ ರೈತರು ಅಯೋಧ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೋಪಾಲ್‌ ಪೊಲೀಸರು ನಮ್ಮನ್ನು ಮಧ್ಯಪ್ರದೇಶ ಗಡಿಯಲ್ಲಿದ್ದ ಕೊನೆಯ ರೈಲು ನಿಲ್ದಾಣದಲ್ಲಿ ಇಳಿಸಿದರು. ಆದರೆ, ಅವರು ನಮ್ಮನ್ನು ಕರೆದೊಯ್ಯುವಾಗ ಮತ್ತು ಇಳಿಸುವಾಗ ಯಾವುದೇ ಮಾಹಿತಿ ನೀಡಲಿಲ್ಲ. ಅಲ್ಲದೆ, ಪ್ರಯಾಣದ ವೇಳೆ ಸಂಜೆ ಮತ್ತು ರಾತ್ರಿ ಯಾವುದೇ ಆಹಾರವನ್ನೂ ನೀಡಲಿಲ್ಲ. ಅತ್ಯಂತ ತುಚ್ಛವಾಗಿ ನಮ್ಮನ್ನು ನಡೆಸಿಕೊಂಡರು” ಎಂದು ಬಂಧಿತ ರೈತರಲ್ಲಿ ಒಬ್ಬರಾದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ಮತ್ತು ಚಾಮರಾಜನಗರ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ನಾಗರಾಜ್ ಆರೋಪಿಸಿದ್ದಾರೆ.

“ಅವರು ನಮ್ಮನ್ನು ವಾರಣಾಸಿ ರೈಲಿಗೆ ಹತ್ತಿಸಿ ಕರೆದೊಯ್ದರು. ಗಡಿಯಲ್ಲಿ ಅವರೆಲ್ಲರೂ ಇಳಿದು, ನಮ್ಮನ್ನು ರೈಲಿನಲ್ಲಿಯೇ ಬಿಟ್ಟುಹೋದರು. ಆದರೂ, ನಾವು ಅಯೋಧ್ಯೆಯಲ್ಲಿ ಇಳಿದೆವು” ಎಂದು ನಾಗರಾಜ್ ವಿವರಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರು ರೈತರನ್ನು ತಮ್ಮೊಂದಿಗೆ ಬರುವಂತೆ ಕೇಳಿದ್ದಾರೆ. ಆದರೆ, ಪೊಲೀಸರೊಂದಿಗೆ ಹೋಗಲು ರೈತರು ನಿರಾಕರಿಸಿದ್ದು, ಖಾಸಗಿ ಹೋಟೆಲ್‌ನಲ್ಲಿ ಕೊಠಡಿಗಳನ್ನು ಬುಕ್‌ ಮಾಡಿಕೊಂಡಿದ್ದಾರೆ.

“ನಮ್ಮ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಇನ್ನೂ ದೆಹಲಿಯಲ್ಲಿದ್ದಾರೆ. ಕೇಂದ್ರ ಸರ್ಕಾರ ಗುರುವಾರ ಚಂಡೀಗಢದಲ್ಲಿ ರೈತರೊಂದಿಗೆ ಸಭೆ ನಡೆಸುತ್ತಿದೆ. ಸಭೆಯ ಫಲಿತಾಂಶದ ಆಧಾರದ ಮೇಲೆ ನಾವು ಕರ್ನಾಟಕಕ್ಕೆ ಹಿಂತಿರುಗಬೇಕೆ ಅಥವಾ ದೆಹಲಿಗೆ ಹೋಗಬೇಕೆ ಎಂಬ ಬಗ್ಗೆ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಅಯೋಧ್ಯೆಯಲ್ಲಿಯೇ ಇರುತ್ತೇವೆ” ಎಂದು ನಾಗರಾಜ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರೈತ ಹೋರಾಟ | ಎಂಎಸ್‌ಪಿಗೆ ಕಾನೂನು ಖಾತರಿ ನೀಡದೆ ಮೋದಿ ಸರ್ಕಾರ ಯಾಕೆ ಓಡಿಹೋಗುತ್ತಿದೆ?

“ನಾಲ್ಕು ದಿನಗಳ ಬಂಧನದ ನಂತರವೂ ಕರ್ನಾಟಕದ ಯಾವುದೇ ಚುನಾಯಿತ ಸದಸ್ಯರು ಅಥವಾ ಅಧಿಕಾರಿಗಳು ಬುಧವಾರ ರಾತ್ರಿಯವರೆಗೂ ತಮ್ಮನ್ನು ಸಂಪರ್ಕಿಸಿಲ್ಲ. ಗುರುವಾರ, ಅಧಿಕಾರಿಗಳು ನಮಗೆ ಕರೆ ಮಾಡಿ, ವಿಚಾರಿಸಿದ್ದಾರೆ” ಎಂದು ಅಯೋಧ್ಯೆಯಲ್ಲಿರುವ ರೈತರು ತಿಳಿಸಿದ್ದಾರೆ.

ಉತ್ತರ ಪ್ರದೇಶದಿಂದ ರೈತರನ್ನು ವಾಪಸ್ ಕರೆತರಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫೆಬ್ರವರಿ 12ರ ಸೋಮವಾರ ದೆಹಲಿಗೆ ತೆರಳುತ್ತಿದ್ದ 30 ಮಹಿಳೆಯರು ಸೇರಿದಂತೆ ಸುಮಾರು 100 ರೈತರು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬುಧವಾರ ರಾತ್ರಿ ಅವರನ್ನು ರೈಲಿನಲ್ಲಿ ಕರೆದೊಯ್ದು, ಮಧ್ಯಪ್ರದೇಶ ಗಡಿಯಲ್ಲಿ ಬಿಟ್ಟುಬಂದಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...