ಮುಡಾ ಪ್ರಕರಣ | ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ರಾಜಕೀಯ ಪಿತೂರಿ: ಸಿಪಿಐ

Date:

ಮೂಡಾ ಪ್ರಕರಣವನ್ನು ಅಸ್ತ್ರವಾಗಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ರಾಜ್ಯ ಮಂಡಳಿ ಭಾವಿಸುತ್ತದೆ. ಗುರುವಾರ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಅವಲೋಕನ ನಡೆಸಲಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಇಡೀ ಮೂಡ ಪ್ರಕರಣವನ್ನು ತನ್ನ ರಾಜಕೀಯ ಲಾಭಕ್ಕಾಗಿಯೇ ಬಳಸಿಕೊಳ್ಳಲು ಪ್ರಯತ್ನಿಸಿದ ಬಿಜೆಪಿ, ಕೇಂದ್ರ ಸರ್ಕಾರದ ಪ್ರಭಾವ ಬಳಸಿ ರಾಜ್ಯಪಾಲರ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿತು. ರಾಜ್ಯಪಾಲರು ನೀಡಿದ ತನಿಖೆಯ ಆದೇಶದಂತೆ ರಾಜ್ಯದ ಹೈಕೋರ್ಟ್ ಸಹ ತನಿಖೆ ನಡೆಸಲು ಆದೇಶಿಸಿದೆ. ಈ ಪ್ರಕರಣದ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತನಿಖೆಗೆ ಸಿದ್ಧವಿದ್ದು ಸಹಕರಿಸುವುದಾಗಿ ಹೇಳಿದ್ದಾರೆ. ಆದುದರಿಂದ ಈ ಪ್ರಕರಣದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆದು ಸತ್ಯಾಸತ್ಯತೆಗಳನ್ನು ರಾಜ್ಯದ ಜನರಿಗೆ ಗೊತ್ತಾಗಬೇಕಾಗಿದೆ ಎಂದು ಸಿಪಿಐ ಸಹ ಬಯಸುತ್ತದೆ.

ಆದರೆ ಬಹುಮತದಿಂದ ಚುನಾಯಿತಗೊಂಡು ಅಧಿಕಾರಕ್ಕೆ ಬಂದಿರುವ ಒಂದು ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ರಾಜಕೀಯ ಪಿತೂರಿಯ ಭಾಗವಾಗಿ ಮುಖ್ಯಮಂತ್ರಿಗಳ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ಬೇಡಿಕೆಯು ರಾಜಕೀಯ ಪ್ರೇರಿತವಾದದ್ದಾಗಿದ್ದು, ಅಪ್ರಾಮಾಣಿಕವಾಗಿದೆ ಎಂದು ಸಿಪಿಐ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...