ರಾಜಕೀಯ ಸಭೆಗಳನ್ನು ಈವರೆಗೂ ಮಾಡಿಲ್ಲ, ನನಗೂ ಜವಾಬ್ದಾರಿ ಇದೆ‌: ಸಚಿವ ಪರಮೇಶ್ವರ್

Date:

ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮ ಸ್ನೇಹಿತರು ಕೇಳಿದಾಗ ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಅನೇಕ ಸಲ ಹೇಳಿದ್ದೇನೆ. ನಿನ್ನೆ ಮೈಸೂರಿನಲ್ಲಿಯೂ ಸಹ ಇದೇ ಮಾತನ್ನು ಹೇಳಿದ್ದೇನೆ. ನಾವು ಯಾರು ಸಹ ಮುಖ್ಯಮಂತ್ರಿಯನ್ನು ಬದಲಾಯಿಸಿ, ಬೇರೆಯವರನ್ನು ಮಾಡಿ ಎಂದು ಮಾತನಾಡಿಲ್ಲ” ಎಂದರು.

“ಇನ್ನು ಮುಂದೆ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿ ವಿಚಾರದಲ್ಲಿ ನೀವು ಕೇಳಿದರು ಪ್ರತಿಕ್ರಿಯಿಸುವುದಿಲ್ಲ. ಕೆಲವು ವಿಚಾರಗಳಲ್ಲಿ ಅಗತ್ಯ ಇದ್ದರೆ ಭೇಟಿ ಮಾಡುತ್ತೇವೆ. ಅನವಶ್ಯಕವಾಗಿ ಡಿನ್ನರ್ ಮೀಟಿಂಗ್, ರಾಜಕೀಯ ಸಭೆಗಳನ್ನು ನಾವು ಈವರೆಗೂ ಮಾಡಿಲ್ಲ, ಮುಂದೆಯೋ ಮಾಡೋದಿಲ್ಲ. ಇದು ನನ್ನ ಸ್ಪಷ್ಟೀಕರಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏನೂ ಇಲ್ಲದೇ ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾವು ಜವಾಬ್ದಾರಿ ಇರುವವರು. ಸುಮ್ಮನೇ ಹುಡುಗಾಟಿಕೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ನನಗೂ ಜವಾಬ್ದಾರಿ ಇದೆ” ಎಂದರು.

ವಿಪಕ್ಷ ನಾಯಕ ಆರ್.ಅಶೋಕ್ ಆರೋಪದ ಕುರಿತು ಪ್ರತಿಕ್ರಿಯಿಸಿ, “ಸಿದ್ಧಗಂಗಾ‌ ಮಠಕ್ಕೂ ನಮಗೂ ಇರುವ ಸಂಬಂಧವೇ ಬೇರೆ. ಇತ್ತೀಚೆಗೆ ನಾನು ಮಠಕ್ಕೆ ಹೋಗೇ ಇಲ್ಲ. ಸಿದ್ಧಗಂಗಾ ಮಠಕ್ಕೆ ಹೋದರೆ ಸ್ವಾಮೀಜಿಯವರ ಗದ್ದುಗೆಗೆ ಮತ್ತು ಸಿದ್ಧಲಿಂಗ ಸ್ವಾಮೀಜಿಯವರಿಗೆ ನಮಸ್ಕರಿಸಿ ಬರುತ್ತೇನೆ. ನನ್ನ ತಂದೆಯವರ ಕಾಲದಿಂದ ದೊಡ್ಡ ಸ್ವಾಮಿಜಿಯವರು ನಮಗೆಲ್ಲ ಆದರ್ಶ. ಮಠಕ್ಕೆ ಹೋಗಿ ರಾಜಕೀಯ ಮಾತಾಡುವುದಿಲ್ಲ. ಸಿದ್ದಗಂಗಾ ಮಠಕ್ಕೂ ನಮ್ಮ ಕುಟುಂಬಕ್ಕು ಅಪಾರವಾದ ಸಂಬಂಧ. ಮಠಕ್ಕೆ ಹೋದಾಗಲೆಲ್ಲ ಮುಖ್ಯಮಂತ್ರಿ ಆಗಬೇಕೆಂದು ಪೂಜೆ ಮಾಡುವುದಿಲ್ಲ” ಎಂದು ಹೇಳಿದರು.

“ಕೋವಿಡ್ ಸಂದರ್ಭದಲ್ಲಿನ ಹಗರಣದ ತನಿಖೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಬೇಕು ಎಂದು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರದಲ್ಲಿ ನಡೆದ ಅಕ್ರಮ ಪ್ರಕರಣಗಳ ತನಿಖೆಯ ಪರಿಶೀಲನೆ ಸಮಿತಿಯ ಸಭೆಯನ್ನು ನಿನ್ನೆ ನಡೆಸಿದ್ದೇನೆ. ಹಲವು ವಿಚಾರಗಳು ಚರ್ಚಿಸಲಾಗಿದೆ. ಕೋವಿಡ್‌ ತನಿಖೆಯ ಪ್ರಕರಣಕ್ಕೆ ಪ್ರತ್ಯೇಕ ಸಮಿತಿ ಮಾಡಿರುವುದರಿಂದ ವಿಷಯ ನಮ್ಮ‌ ಮುಂದೆ ಚರ್ಚೆಗೆ ಬಂದಿಲ್ಲ” ಎಂದರು.

“ಬಿಜೆಪಿ ಆಡಳಿತದಲ್ಲಿ ನಡೆದ ಹಗರಣಗಳ ತನಿಖೆ, ಕೆಲವು ಕೊನೆ ಹಂತದಲ್ಲಿವೆ. ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಬೇಕಾಗುತ್ತದೆ. ಬೇರೆಬೇರೆ ಸಂದರ್ಭದಲ್ಲಿ ಆಗಿರುವ ಪ್ರಕರಣಗಳು ಇವೆ. ಎಲ್ಲ ಪ್ರಕರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ” ಎಂದು ಹೇಳಿದರು‌.

ರತನ್ ಟಾಟಾ ನಿಧನಕ್ಕೆ ಸಂತಾಪ

“ರತನ್ ಟಾಟಾ ಅವರು ದೇಶಕ್ಕೆ ಅತ್ಯಂತ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರು ತೆಗೆದುಕೊಂಡತಹ ಅನೇಕ ನಿರ್ಧಾರಗಳು, ಕೈಗಾರಿಕೆಗಳು ಭಾರತವನ್ನೇ ಪ್ರತಿನಿಧಿಸುವಂತೆ ಕಟ್ಟಿದ್ದಾರೆ. ಅತಿದೊಡ್ಡ ಮಾನವತಾ ವ್ಯಕ್ತಿ. ಅನೇಕ ರೀತಿಯಲ್ಲಿ ಸಮಾಜಕ್ಕೆ ಸೇವೆ ಮಾಡುವುದು, ಅವರಿಗೆ ಬಂದಂತಹ ಲಾಭದಲ್ಲಿ ವಿದ್ಯಾರ್ಥಿಗಳಿಗೆ, ಕಷ್ಟದಲ್ಲಿರುವ ಸಮುದಾಯಗಳಿಗೆ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರೂ. 1500 ಕೋಟಿ ಸಹಾಯವನ್ನು ಸ್ಮರಿಸಬೇಕಿದೆ. ಅವರನ್ನು ದೇಶ, ಸಮಾಜ‌ ಕಳೆದುಕೊಂಡಿದೆ. ಇದು ನಮಗೆ ಅದ ನಷ್ಟ. ನಷ್ಟ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರತನ್ ಟಾಟಾ ಸೇವೆಯನ್ನು ಸೂರ್ಯ ಚಂದ್ರ ಇರುವವರೆಗೂ ದೇಶ ಮರೆಯುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...