ರಾಹುಲ್ ಗಾಂಧಿಯವರ ರಾಜಕೀಯದಲ್ಲಿ ಬದಲಾವಣೆ ಬಂದಿದೆ: ವಿಪಕ್ಷ ನಾಯಕನನ್ನು ಶ್ಲಾಘಿಸಿದ ಸ್ಮೃತಿ ಇರಾನಿ!

Date:

“ರಾಹುಲ್ ಗಾಂಧಿಯವರ ರಾಜಕೀಯದಲ್ಲಿ ಬದಲಾವಣೆ ಬಂದಿದೆ. ಯಶಸ್ಸಿನ ರುಚಿ ನೋಡುತ್ತಿದ್ದಾರೆ….” ಹೀಗಂತ ಹೇಳಿರುವುದು ಕಾಂಗ್ರೆಸ್‌ನ ನಾಯಕರಲ್ಲ..ಬದಲಾಗಿ ಬದ್ಧ ರಾಜಕೀಯ ಎದುರಾಳಿಯಾಗಿ ಗುರುತಿಸಿಕೊಂಡಿರುವ ಮಾಜಿ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ.

ಪತ್ರಕರ್ತ ಸುಶಾಂತ್ ಸಿನ್ಹಾ ಅವರೊಂದಿಗೆ ನಡೆಸಿದ ಪಾಡ್‌ಕಾಸ್ಟ್‌ನಲ್ಲಿ ಸ್ಮೃತಿ ಇರಾನಿ ಈ ಹೇಳಿಕೆ ನೀಡಿದ್ದಾರೆ. ತಮ್ಮ ಬದ್ಧ ಎದುರಾಳಿ ರಾಹುಲ್ ಗಾಂಧಿಯವರ ಬಗ್ಗೆ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಈ ರೀತಿಯ ಹೇಳಿಕೆ ನೀಡಿರುವುದು ಸ್ವತಃ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ಸಿಗರಿಗೂ ಅಚ್ಚರಿ ಮೂಡಿಸಿದೆ.

ಈ ಸಂದರ್ಶನದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ರಾಹುಲ್ ಗಾಂಧಿಯವರು ಯಶಸ್ಸಿನ ರುಚಿ ನೋಡುತ್ತಿದ್ದಾರೆ. ಈಗ ವಿಭಿನ್ನ ಶೈಲಿಯ ರಾಜಕೀಯ ತಂತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಜಾತಿಯ ಬಗ್ಗೆ ಮಾತನಾಡುವಾಗ, ಸಂಸತ್ತಿನಲ್ಲಿ ಬಿಳಿ ಟಿ-ಶರ್ಟ್ ಧರಿಸಿದಾಗ, ಅದು ಯುವಕರಿಗೆ ಯಾವ ರೀತಿಯ ಸಂದೇಶವನ್ನು ಕಳುಹಿಸುತ್ತದೆ ಎಂಬುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ” ಎಂದು ಇರಾನಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್ ಗಾಂಧಿ ಅವರು ತಮ್ಮ ದೇವಾಲಯ ಭೇಟಿಗಳಿಂದ ಯಾವುದೇ ಗಮನ ಸೆಳೆಯಲಿಲ್ಲ. ಅದು ಜೋಕ್‌ಗಳ ಸರಮಾಲೆಯಾಯಿತು. ಆದ್ದರಿಂದ ಈ ತಂತ್ರವು ಕೆಲಸ ಮಾಡದಿದ್ದಾಗ, ಅವರು ಜಾತಿ ವಿಷಯಗಳತ್ತ ತಿರುಗಿದರು” ಎಂದು ಇರಾನಿ ಹೇಳಿಕೆ ನೀಡಿದ್ದು, ‘ರಾಹುಲ್ ಗಾಂಧಿಯವರ ಈ ನಡೆಗಳು ದೇಶದ ರಾಜಕೀಯದಲ್ಲಿ ಪ್ರಸ್ತುತತೆಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿರುವ ವಿಶಾಲ ಕಾರ್ಯತಂತ್ರದ ಭಾಗ’ ಎಂದೂ ಕೂಡ ಉಲ್ಲೇಖಿಸಿದ್ದಾರೆ.

ಮಿಸ್ ಇಂಡಿಯಾದಲ್ಲಿ ದಲಿತ ಅಥವಾ ಆದಿವಾಸಿ ಸ್ಪರ್ಧಿಗಳ ಕೊರತೆಯ ಬಗ್ಗೆ ರಾಹುಲ್ ಗಾಂಧಿ ಇತ್ತೀಚೆಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿರುವ ಇರಾನಿ, ಸಾರ್ವಜನಿಕರ ದೃಷ್ಟಿಯಲ್ಲಿ ಉಳಿಯಲು ರಾಹುಲ್ ಗಾಂಧಿ ಪ್ರಚೋದನಕಾರಿ ಹೇಳಿಕೆಗಳನ್ನು ಬಳಸುತ್ತಿದ್ದಾರೆ ಎಂದು ಇದೇ ವೇಳೆ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ: ನಿಟ್ಟುಸಿರು ಬಿಟ್ಟ ರೈತರು

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರನ್ನು, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ರಾಹುಲ್ ಗಾಂಧಿಯವರ ಆಪ್ತರಾಗಿರುವ ಕಿಶೋರಿ ಲಾಲ್ ಶರ್ಮಾ ಸೋಲಿಸಿದ್ದರು. ಈ ಸಂದರ್ಶನದಲ್ಲಿ ಅಮೇಠಿ ಸೋಲಿನ ಬಗ್ಗೆಯೂ ಸ್ಮೃತಿ ಇರಾನಿ ಮಾತನಾಡಿದ್ದಾರೆ.

‘ರಾಹುಲ್ ಗಾಂಧಿ ವಿರೋಧಿಗಳೆಲ್ಲ ಮಿತ್ರರಾಗುತ್ತಿದ್ದಾರೆ’ ಎಂದ ನೆಟ್ಟಿಗರು!

ಸ್ಮೃತಿ ಇರಾನಿ ನೀಡಿರುವ ಈ ಹೇಳಿಕೆಯು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ‘ರಾಹುಲ್ ಗಾಂಧಿಯವರ ವಿರೋಧಿಗಳೆಲ್ಲ ಮಿತ್ರರಾಗುತ್ತಿದ್ದಾರೆ’ ಎಂದ ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನು ಕೆಲವರು, “ರಾಹುಲ್ ಗಾಂಧಿಯವರ ಬಗ್ಗೆ ಸ್ಮೃತಿ ಇರಾನಿಯವರ ಮಾತುಗಳು ಇಷ್ಟೊಂದು ಮೃದುವಾದದ್ದು ಹೇಗೆ ಎಂದು ಯಾರಾದರೂ ಹೇಳಬಹುದೇ? ಇದಕ್ಕೆ ಕಾರಣ ಅಧಿಕಾರದ ನಷ್ಟವೋ ಅಥವಾ ಇನ್ನೇನಾದರೂ ಇದೆಯೋ?” ಎಂದು ಕೇಳಿದರೆ, ಮತ್ತೆ ಕೆಲವರು, “ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಫಲ ಈಗ ಕಾಣುತ್ತಿದೆ. ದ್ವೇಷ ಹರಡುತ್ತಿದ್ದವರೆಲ್ಲ ಪ್ರೀತಿಯ ಮಾತುಗಳನ್ನಾಡುತ್ತಿದ್ದಾರೆ. ದ್ವೇಷ ಮಾರುಕಟ್ಟೆಯಲ್ಲಿ ರಾಹುಲ್ ಗಾಂಧಿ ತೆರೆದಿರುವ ಪ್ರೀತಿಯ ಅಂಗಡಿಗೆ ಜನರು ಬರುತ್ತಿದ್ದಾರೆ ಎಂಬುದಕ್ಕೆ ಸ್ಮೃತಿ ಇರಾನಿಯವರ ಮಾತುಗಳು ಉದಾಹರಣೆ” ಎಂದು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...