ರಾಜ್‌ಗಢ| 400 ಮಂದಿ ನಾಮಪತ್ರ ಸಲ್ಲಿಸಿದರೆ ಮತಪತ್ರಗಳ ಮೂಲಕ ಚುನಾವಣೆ: ದಿಗ್ವಿಜಯ್ ಸಿಂಗ್

Date:

“ರಾಜ್‌ಗಢದಲ್ಲಿ 400 ಮಂದಿ ನಾಮಪತ್ರ ಸಲ್ಲಿಸಿದರೆ ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ಚುನಾವಣೆ ನಡೆಯಲಿದೆ” ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್‌ ಸಿಂಗ್ ಹೇಳಿದರು. ದಿಗ್ವಿಜಯ್‌ ಸಿಂಗ್ ಮಧ್ಯಪ್ರದೇಶದ ರಾಜ್‌ಗಢ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ತಾನು ಮತಪತ್ರದ ಮೂಲಕ ಚುನಾವಣೆ ನಡೆಸುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದರು.

ಸುಸ್ನರ್‌ನ ಕಚ್ನಾರಿಯಾ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ದಿಗ್ವಿಜಯ್‌ ಸಿಂಗ್ ಜನರು ಇವಿಎಂ ಅಥವಾ ಬ್ಯಾಲೆಟ್ ಪೇಪರ್‌ ಪೈಕಿ ಯಾವುದನ್ನು ಆಯ್ಕೆ ಮಾಡುವುದಾಗಿ ಪ್ರಶ್ನಿಸಿದರು. ಬ್ಯಾಲೆಟ್ ಪೇಪರ್ ಎಂದು ಕೂಗಿದ ಜನರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ, “ಇದಕ್ಕೆ ಒಂದೇ ಒಂದು ಮಾರ್ಗವಿದೆ (ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ) 400 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ಮಾತ್ರ ಅದು ಸಾಧ್ಯ. ನಾನು ಇದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?   ಇವಿಎಂ ಹ್ಯಾಕ್ ಮಾಡಬಹುದೇ?; ಚುನಾವಣಾ ಪ್ರಕ್ರಿಯೆಯ ನಿಜವಾದ ಸಮಸ್ಯೆಯೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾನ್ಯ ವರ್ಗದ ಅಭ್ಯರ್ಥಿಗಳು ಭದ್ರತಾ ಠೇವಣಿಯಾಗಿ 25,000 ರೂಪಾಯಿ ನೀಡಬೇಕಾಗುತ್ತದೆ. ಇನ್ನು ಕಾದಿರಿಸಲಾದ ವರ್ಗದವರಾದರೆ 12,500 ರೂಪಾಯಿ ಭದ್ರತಾ ಠೇವಣಿ ಪಾವತಿ ಜಮೆ ಮಾಡಬೇಕಾಗುತ್ತದೆ. ಇದರಿಂದಾಗಿ ಮಾತ್ರ ರಾಜ್‌ಗಢದಲ್ಲಿ ಬ್ಯಾಲೆಟ್ ಪೇಪರ್‌ಗಳ ಮೂಲಕ ಚುನಾವಣೆ ನಡೆಸಬಹುದು. ಏನಾಗುತ್ತದೋ ನೋಡೋಣ” ಎಂದರು.

ಪ್ರತಿ ಇವಿಎಂನಲ್ಲಿ ಪ್ರತಿ ಕ್ಷೇತ್ರಕ್ಕೆ ನೋಟಾ ಸೇರಿದಂತೆ ಗರಿಷ್ಠ 384 ಅಭ್ಯರ್ಥಿಗಳನ್ನು ಹೊಂದಬಹುದು. ನೋಟಾ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ಒಂದು ಬ್ಯಾಲೆಟ್ ಯೂನಿಟ್‌ನಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಅಂತಹ 24 ಘಟಕಗಳನ್ನು ಏಕಕಾಲದಲ್ಲಿ ನಿಯಂತ್ರಣ ಘಟಕಕ್ಕೆ ಸಂಪರ್ಕಿಸಬಹುದು.

ಇನ್ನು ‘ವೈದ ನಿಭೋ ಯಾತ್ರೆ’ಯಲ್ಲಿ ಮಾತನಾಡಿದ್ದ ಸಿಂಗ್, ಚುನಾವಣೆಗೆ ಇವಿಎಂಗಳ ಬಳಕೆಯನ್ನು ವಿರೋಧಿಸಿದ್ದರು. ಬಿಜೆಪಿ ಗೆಲುವಿಗೆ ಅದೇ ಕಾರಣವೆಂದು ದೂರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...