ಪಿಎಸ್ಐ ಪರೀಕ್ಷೆ ಮುಂದೂಡಿಕೆ | ಕೆಇಎ, ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ: ಪರಮೇಶ್ವರ್

Date:

ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವ‌ತ್ಥನಾರಾಯಣ, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ‌ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗಧಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ‌ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಯುಪಿಎಸ್‌ಸಿ ಮುಖ್ಯವಲ್ಲ. ಇಲಾಖೆಯಲ್ಲಿ ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್‌ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು‌ ಹೇಗೆ” ಎಂದು ಪ್ರಶ್ನಿಸಿದರು.

“ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವಾದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್‌ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ‌. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್‌ಗೆ ಹೋಗಿದ್ದು, ಅಂತಿಮ‌ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ” ಎಂದು ತಿಳಿಸಿದರು.

“ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲು‌ಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್‌ಐ ಹುದ್ದೆಗಳಿಗೆ ಆದಾಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ” ಎಂದು ಹೇಳಿದರು‌.

“ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ‌ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ” ಎಂದು ತಿಳಿಸಿದರು.

ಭಾಸ್ಕರ್ ರಾವ್‌ಗೆ ತಿರುಗೇಟು

“ಭಾಸ್ಕರ್ ರಾವ್ ಹೇಳಿಕೆಗೆ ಪ್ರತಿಕ್ರಿಯಿಸುವುದು ಅಷ್ಟು ಸಮಂಜಸವಲ್ಲ. ಅವರು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದವರು. ಆಗ ಸಿಸಿಬಿ ಇತ್ತಲ್ಲವೇ. ಆಗ ಭಾಸ್ಕರ್ ರಾವ್ ವಸೂಲಿ ಮಾಡಲು ಇಟ್ಟಿಕೊಂಡಿದ್ದರೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...