ಪ್ರಜ್ವಲ್ ಲೈಂಗಿಕ ಹಗರಣ | ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಹಾನಿ: ರಮೇಶ್‌ ಬಾಬು

Date:

“ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಮತ್ತು ಬಿಜೆಪಿಯ ಎಲ್ಲ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು” ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, “ಕುಮಾರಸ್ವಾಮಿ ಅವರು ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರ ಮೇಲೆ ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

“ಬಿಜೆಪಿಗೆ ಜೆಡಿಎಸ್‌ ಮೇಲೆ ಇರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಳ್ಳುವ ಕೆಲಸ ನಡೆದಿದೆ. ಹುಣಸೂರಿನಿಂದ ಪ್ರಜ್ವಲ್‌ ಅವರು ಸ್ಪರ್ಧಿಸಬೇಕು ಎನ್ನುವ ಚರ್ಚೆ ಬಂದಾಗ, ನಮ್ಮ ಪಕ್ಷದಲ್ಲಿ ಸೂಟ್‌ ಕೇಸ್‌ ಸಂಸ್ಕೃತಿ ಇದೆ. ಅದು ಹೋಗುವ ತನಕ ಇದೆಲ್ಲಾ ನಿಲ್ಲುವುದಿಲ್ಲ ಎಂದಿದ್ದರು. ಈ ಕಾರಣಕ್ಕೆ ರೇವಣ್ಣ ಮತ್ತು ಕುಮಾರಸ್ವಾಮಿ ಕುಟುಂಬದ ನಡುವೆ ಅಸಮಾಧಾನ ಹೊತ್ತಿಕೊಂಡಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭವಾನಿ ರೇವಣ್ಣ ಅವರು ಸಹ ಕೆ.ಆರ್‌.ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದಾಗ ಕುಮಾರಸ್ವಾಮಿ ಅವರು ಅವಕಾಶ ಕೊಡಲಿಲ್ಲ. ಮತ್ತೆ ಭವಾನಿ ರೇವಣ್ಣ ಅವರು ಹಾಸನದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಾಗ ಕುಮಾರಸ್ವಾಮಿ ಎಂಥೆಂತಾ ಮಾತುಗಳನ್ನು ಆಡಿದರು. ಆರ್‌. ಆರ್ ನಗರದಿಂದಲೂ ಪ್ರಜ್ವಲ್‌ ಸ್ಪರ್ಧೆ ಮಾಡುತ್ತೇನೆ ಎಂದಾಗಲೂ ಅಸಮಾಧಾನ ಹೆಚ್ಚಾಗಿತ್ತು. ಇದು ಕುಟುಂಬಗಳ ಮಧ್ಯದ ಪೈಪೋಟಿ” ಎಂದು ವಿಶ್ಲೇಷಿಸಿದರು..

“ಕುಮಾರಸ್ವಾಮಿ ಅವರು ಪೆನ್‌ ಡ್ರೈವ್‌ ಹಂಚಿಕೆ ಹಿಂದೆ ಡಿ.ಕೆ.ಶಿವಕುಮಾರ್‌ ಅವರು ಇದ್ದಾರೆ ಎನ್ನುವ ಹತಾಶೆಯ ಹೇಳಿಕೆ ಕೊಟ್ಟಿದ್ದಾರೆ. ಏಕೆಂದರೆ ಮಂಗಳವಾರ ಬೆಳಿಗ್ಗೆ ಅಮಿತ್‌ ಶಾ ಅವರು ಕುಮಾರಸ್ವಾಮಿ  ಹಾಗೂ ಯಡಿಯೂರಪ್ಪ ಅವರ ಜೊತೆ ಮಾತನಾಡಿದಾಗ, ಈ ಘಟನೆಯಿಂದ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಹಾನಿಯಾಗಿದೆ. ಈ ಪ್ರಕರಣವನ್ನು ನೀವೇಕೆ ಮೊದಲೇ ಸರಿ ಪಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದು ಕುಮಾರಸ್ವಾಮಿ ಕೋಪಕ್ಕೆ ಕಾರಣವಾಗಿದೆ” ಎಂದರು.

“2023 ಡಿಸೆಂಬರ್‌ 8 ರಂದು ದೇವರಾಜೇಗೌಡರು ಪ್ರಜ್ವಲ್‌ ರೇವಣ್ಣ ಅವರ ಸಿಡಿ ಬಗ್ಗೆ ರಾಷ್ಟ್ರೀಯ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದರು. ಹಾಸನದಲ್ಲಿ ಮಾಧ್ಯಮಗೋಷ್ಠಿ ನಡೆಸಿ, ನನ್ನ ಬಳಿ ಸಿಡಿ ಇದೆ ಯಾವಾಗ ಬೇಕಾದರೂ ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದರು. ಎಲ್ಲಾ ವಿಚಾರಗಳು ಗೊತ್ತಿದ್ದ ಬಿಜೆಪಿ ನಾಯಕರು ಏಕೆ ಈ ವಿಚಾರದಲ್ಲಿ ಮೌನವಾಗಿದ್ದಾರೆ” ಎಂದು ಪ್ರಶ್ನಿಸಿದರು.

“ಮಹಿಳೆಯರ ಜೀವದ ಪ್ರಶ್ನೆ ಇಲ್ಲಿದೆ. ಇದರಿಂದ ಸಾವಿರಾರು ಮಹಿಳೆಯರ ಘನತೆಗೆ ಪೆಟ್ಟಾಗಿದೆ. ಕುಮಾರಸ್ವಾಮಿ ಅವರೇ ಈ ಪ್ರಕರಣದ ಬಗ್ಗೆ ಪಶ್ಚಾತ್ತಾಪ ಪಡಬೇಕು. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುತ್ತೇನೆ ಎಂದ ಹಾಸನ ಜಿಲ್ಲಾಧಿಕಾರಿ ಮಾತಿಗೂ ಕುಮಾರಸ್ವಾಮಿ ಹತಾಶೆಯಿಂದ ಉತ್ತರಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...