ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ | ಏಕಾಏಕಿ ಯಾರನ್ನೂ ಬಂಧಿಸಲು ಆಗುವುದಿಲ್ಲ: ಸಚಿವ ಪರಮೇಶ್ವರ್‌

Date:

ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ ಪ್ರಕರಣದಲ್ಲಿ ಯಾರನ್ನೇ ಆದರೂ ಏಕಾಏಕಿ ಬಂಧಿಸಲು ಆಗುವುದಿಲ್ಲ. ಅದಕ್ಕೆ ಪುರಾವೆಗಳು ಬೇಕು. ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್ ​ಡಿ ರೇವಣ್ಣರನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂಬ ಅಮಿತ್‌ ಶಾ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದರು.

“ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ. ಅಪರಾಧ ದಂಡಸಂಹಿತೆಯ ಸೆಕ್ಷನ್ 41a ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಇದರಲ್ಲಿ ಬಹಳ ಜನರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡಲು ಆಗುವುದಿಲ್ಲ” ಎಂದರು.

“ಹೆಚ್ ​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವಣ ಆರೋಪ ಪ್ರತ್ಯಾರೋಪಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಬಹಳ ಜನ ಅದರ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ. ಅದಕ್ಕೆಲ್ಲ ನಾನು ಉತ್ತರ ಕೊಡಲು ಸಾಧ್ಯವಿಲ್ಲ. ತನಿಖಾ ವರದಿ ಬಂದ ಮೇಲೆ ಏನು ಸತ್ಯಾಸತ್ಯತೆ ಇದೆ ಎಂಬುದರ ಮೇಲೆ ಕ್ರಮ ಆಗುತ್ತದೆ‌” ಎಂದು ಹೇಳಿದರು.

“ಎಸ್​​ಐಟಿ ಈಗಾಗಲೇ ನೊಟೀಸ್ ಜಾರಿ ಮಾಡಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆ ಎಲ್ಲ ಮಾಹಿತಿ ಇದೆ. ವಾಪಸ್ ಕರೆದುಕೊಂಡು ಬರಲು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಎಸ್​ಐಟಿ ಮಾಡಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರವೂ ಬೇಕಾಗಬಹುದು ಅಥವಾ ಎಸ್​ಐಟಿ ತಂಡದವರೇ ಕರೆದುಕೊಂಡು ಬರಬಹುದು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...