ಪ್ರಜ್ವಲ್‌ ಪ್ರಕರಣ | ಮೊಬೈಲ್ ಮಾನದಂಡದಲ್ಲಿ ತನಿಖೆ ಮಾಡಿದರೆ 15 ಲಕ್ಷ ಬಳಕೆದಾರರೂ ತಪ್ಪಿತಸ್ಥರಾಗುತ್ತಾರೆ: ಪ್ರೀತಂ ಗೌಡ

Date:

ಪೆನ್​ ಡ್ರೈವ್ ಪ್ರಕರಣದಲ್ಲಿ ಬಂಧನ ಆಗಿರುವ ಆರೋಪಿಗಳು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.

ಹಾಸನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ಕಚೇರಿಯಲ್ಲಿ 40-50ಕ್ಕಿಂತ ಹೆಚ್ಚು ಜನ ಕೆಲಸ ಮಾಡುತ್ತಾರೆ. ಒಬ್ಬ ಪೆನ್ ​ಡ್ರೈವ್​ನಲ್ಲಿ ಹಾಕಿ ನೋಡಿದರೆ ಅಪರಾಧ ಅಂದರೆ ಹೇಗೆ” ಎಂದು ಪ್ರಶ್ನಿಸಿದರು.

“ಹಾಸನದಲ್ಲಿ 2 ಲಕ್ಷ ಮೊಬೈಲ್ ಇದ್ದರೆ ಎಲ್ಲ ಮೊಬೈಲ್​ನಲ್ಲೂ ಇರುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಯಾಕೆಂದರೆ ಯಾರು ಬೇಕು ಅಂತಾ ತರಿಸಿಕೊಂಡಿರುವುದಿಲ್ಲ. ಎಸ್​ಐಟಿ ಇದೇ ಮಾನದಂಡದಲ್ಲಿ ತನಿಖೆ ಮಾಡುತ್ತದೆ ಅಂತಾದರೆ ಜಿಲ್ಲೆಯಲ್ಲಿ 15 ಲಕ್ಷ ಮೊಬೈಲ್ ಬಳಕೆದಾರರು ತಪ್ಪಿತಸ್ಥರಾಗುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಕಚೇರಿಯಲ್ಲಿ ಸಂಬಳಕ್ಕೆ ಕೆಲಸ ಮಾಡುವವರು ಇದ್ದಾರೆ. ವಾಲಂಟರಿಯಾಗಿ ಕೆಲಸ ಮಾಡುವವರೂ ಇದ್ದಾರೆ. ಏಪ್ರಿಲ್ 23ರಂದು ಲಾಯರ್ ಪೆನ್ ಡ್ರೈವ್ ತಂದು ಕೊಟ್ಟಿದ್ದಾರೆ. ಹಾಗಂತ ಲಾಯರ್ ಮೇಲೆ ಕೇಸ್ ದಾಖಲಿಸಲು ಆಗುತ್ತಾ? ನಾನು ಯಾರಿಗೂ ವಕ್ತಾರ ಆಗಲು ರೆಡಿ ಇಲ್ಲ. ಸಂತ್ರಸ್ತರ ವಿಡಿಯೋ ಹರಿಬಿಡಬಾರದು ಎಂಬುದು ನನ್ನ ನಿಲುವು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್‌ ಪೆನ್‌ ಡ್ರೈವ್ ಪ್ರಕರಣ | ಎಸ್‌ಐಟಿ ಬಲೆಗೆ ಬೀಳುತ್ತಿರುವ ಬಿಜೆಪಿ ನಾಯಕರ ಆಪ್ತರು

“ತನಿಖೆ ನಡೆಯುತ್ತಿರುವಾಗ ಆರೋಪಿಗಳ ಬಗ್ಗೆ ಮಾತಾಡುವುದು ಸರಿಯಲ್ಲ. ಯಾರು ಏನು ಮಾಡಿದ್ದಾರೆ ಅಂತಾ ತನಿಖೆ ಮೂಲಕ ಗೊತ್ತಾಗುತ್ತದೆ. ಯಾವುದೇ ಕಾರಣಕ್ಕೂ ಅಶ್ಲೀಲ ವೀಡಿಯೋಗಳನ್ನು ಇಟ್ಟುಕೊಳ್ಳಬೇಡಿ. ಫಾರ್ವರ್ಡ್ ಮಾಡಬೇಡಿ ಅಂತಾ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...