ಪ್ರಜ್ವಲ್ ಪ್ರಕರಣ | ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ದೇವರಾಜೇಗೌಡ ಹೊಸ ಆರೋಪ

Date:

ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. “ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವೇಳೆಯಲ್ಲಿಯೇ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ದು, “ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜೊತೆಗೆ ಮಾತನಾಡಿಲ್ಲ” ಎಂದು ಹೇಳಿದರು.

“ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಹೇಳು. ಪೆನ್‌ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ದರು ಅಂತ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತೀನಿ ಅಂತ ಭರವಸೆ ನೀಡಿದ್ದರು” ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೊಡ್ಡಮಟ್ಟದ ಹಣದ ಆಫರ್ ಕೊಟ್ಟರು. ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ದರು. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್‌ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ನೋಡಿಕೊಳ್ಳಲೆಂದು ಬಿಟ್ಟಿದ್ದರು” ಎಂದು ದೂರಿದ್ದಾರೆ.

“ನಾನು ಒಪ್ಪದೇ ಇದ್ದಾಗ, ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಮಾಡಿದ್ರು. ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನು ಬೌರಿಂಗ್ ಕ್ಲಬ್‌ನ 110 ರೂಂಗೆ ಕಳಿಸಿದ್ದರು” ಎಂದು ತಿಳಿಸಿದ್ದಾರೆ.

“ಚನ್ನರಾಯಪಟ್ಟಣದ ಗೋಪಾಲಸ್ವಾಮಿ ಅವರನ್ನು ಸಂಧಾನಕ್ಕೆ ಕಳುಹಿಸಿದ್ದರು. ಐದು ಕೋಟಿ ಕ್ಯಾಶ್ ಕೊಟ್ಟು ಡಿಕೆಶಿ ಕಳಿಸಿದ್ದರು. ದೇಶದಲ್ಲಿ ಮೋದಿಯವರಿಗೆ ಕಳಂಕ ತರಬೇಕು. ರಾಸಲೀಲೆ ಹಗರಣದಲ್ಲಿ ಮೋದಿಯವರನ್ನು ಬಿಂಬಿಸಿ ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಅಂತ ಮಾಡಿದರು. ಡಿ.ಕೆ.ಶಿವಕುಮಾರ್ ಮುಖ್ಯ ಉದ್ದೇಶ ಎಚ್.ಡಿ.ಕುಮಾರಸ್ವಾಮಿ ನಾಯಕತ್ವವನ್ನು ರಾಜ್ಯದಲ್ಲಿ ಹಾಳು ಮಾಡಬೇಕು ಎನ್ನುವುದು. ಇದು ಸತ್ಯ. ನಾನು ಹೊರಗಡೆ ಬಂದರೆ ಸರ್ಕಾರ ಪತನವಾಗಲಿದೆ” ಎಂದು ದೇವರಾಜೇಗೌಡ ಪೊಲೀಸ್ ವ್ಯಾನ್‌ನೊಳಗಿನಿಂದಲೇ ಕುಳಿತುಕೊಂಡು ಸುಮಾರು ಮೂರು ನಿಮಿಷ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ಟ್ವೀಟ್ ಮಾಡಿರುವ ಜೆಡಿಎಸ್ ಐಟಿ ಸೆಲ್, , “CD ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...