ಪ್ರಜ್ವಲ್‌ ಪ್ರಕರಣ | ಸತ್ಯ ಹರಿಶ್ಚಂದ್ರ ಪಾತ್ರಕ್ಕೆ ಬಣ್ಣ ಬಳಿದುಕೊಂಡ ಕುಮಾರಸ್ವಾಮಿ: ಕಾಂಗ್ರೆಸ್‌ ಲೇವಡಿ

Date:

ಸಿಡಿ ಮಾಡಿದವರನ್ನು ಎಸ್‌ಐಟಿ ಮುಂದೆ ನಿಲ್ಲಿಸಲು ಆಗದ ಬ್ರದರ್ ಸ್ವಾಮಿ ತನಿಖೆಯ ದಾರಿ ತಪ್ಪಿಸಲು ಅಧಿಕಾರಿಗಳ ಜರಿಯುತ್ತಿದ್ದಾರೆ. ಬ್ರದರ್ ಸ್ವಾಮಿ ನಿಮ್ಮ ಬಳಿ ಅಷ್ಟೊಂದು ದಾಖಲೆ ಇದ್ದರೆ ನೀವೇ ಎಸ್‌ಐಟಿಗೆ ಪ್ರಮಾಣ ಪತ್ರ ನೀಡಿ ಸಾಕ್ಷಿ ಹೇಳಿ? ನೊಂದವರಿಗೆ ಸಾಂತ್ವನ ಹೇಳಿ. ಮನಃಸಾಕ್ಷಿ ಇದ್ದರೆ ನೊಂದವರ ಕ್ಷಮೆ ಕೇಳಿ ಎಂದು ಕಾಂಗ್ರೆಸ್‌ ಕುಟುಕಿದೆ.

ಎಚ್‌ ಡಿ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ಕರ್ನಾಟಕದಲ್ಲಿ ಸಿಡಿ ಜನಕ ಬ್ರದರ್ ಸ್ವಾಮಿ! ಮಗನ ಪಟ್ಟಾಭಿಷೇಕದ ಆಸೆಗಾಗಿ ಆರು ತಿಂಗಳು ಮುಂಚೆನೇ ಡೀಲ್ ವಕೀಲನ ಬಳಸಿಕೊಂಡು ಸಿಡಿ ಬ್ಲಾಕ್ಮೇಲ್ ಮಾಡಿದ ಕೀರ್ತಿ ಬ್ರದರ್ ಸ್ವಾಮಿಗೆ ಸೇರುತ್ತದೆ” ಎಂದು ಟೀಕಿಸಿದೆ.

“ತನ್ನ ಕುಟುಂಬದ ಅವಾಂತರ ತಡೆದು ಹೆಣ್ಣುಮಕ್ಕಳ ರಕ್ಷಣೆ ಮಾಡದ ಬ್ರದರ್ ಸ್ವಾಮಿ ತನ್ನ ಪಟಾಲಂ ಬಳಸಿ ಸಿಡಿ ಹಂಚಿಸಿ ಈಗ ಪತಿವ್ರತೆ ನಾಟಕ ಆಡುತ್ತಿದ್ದಾರೆ” ಎಂದು ಲೇವಡಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಸನದ ಟಿಕೆಟ್ ಹಂಚಿಕೆ ಇಂದ ಚುನಾವಣೆವರೆಗೆ ಒಳ ಆಟ ಆಡಿ ಈಗ ಮಾನ ಹರಾಜು ಆದ ಮೇಲೆ ಸತ್ಯ ಹರೀಶ್ಚಂದ್ರ ಪಾತ್ರಕ್ಕೆ ಬಣ್ಣ ಬಳಿದುಕೊಳ್ಳುತ್ತಿದ್ದಾರೆ! ಅಸೆಂಬ್ಲಿಯ ಫಲಿತಾಂಶಕ್ಕೆ ಮೊದಲೇ ಸಿಂಗಾಪುರದಲ್ಲಿ ಕುಳಿತು ಮುಖ್ಯಮಂತ್ರಿ ಕನಸು ಕಂಡ ಬ್ರದರ್ ಸ್ವಾಮಿ ಸಿಗದ ಕುರ್ಚಿಗಾಗಿ ಹತಾಶೆಗೊಂಡು ಏನೆಲ್ಲಾ ಮಾಡಿ ತನ್ನ ಅಣ್ಣನ ಮಗನಂತೆ ಬಯಲಾಗುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದೆ.

“ಪಲಾಯನ ಬಿಟ್ಟು ರಾಜ್ಯದ ಗೌರವ ಮಣ್ಣು ಪಾಲು ಮಾಡಿ ಹೆಣ್ಣುಮಕ್ಕಳ ಬಾಳಿಗೆ ಕಂಠಕವಾದ ನಿಮ್ಮ ಅಣ್ಣನ ಮಗನಿಗೆ ಬುದ್ದಿ ಕಲಿಸಿ ಮರ್ಯಾದೆ ಉಳಿಸಿಕೊಳ್ಳಿ. ನಿಮ್ಮ ಕುಟುಂಬದ ಒಳ ಜಗಳಕ್ಕೆ ರಾಜ್ಯದ ಹೆಣ್ಣುಮಕ್ಕಳ ಬದುಕಿನೊಂದಿಗೆ ಆಟವಾಡಿ ಈಗ ಪೆನ್ ಡ್ರೈವ್ ಹಂಚಿಕೆ ಹೆಸರಲ್ಲಿ ರಕ್ಷಣೆ ಪಡೆಯುವ ನಾಟಕ ಕೊನೆಗೊಳಿಸಿ ಮಹಾನ್ ಚಿತ್ರ ನಿರ್ಮಾಪಕ ಬ್ರದರ್ ಸ್ವಾಮಿ ಅವರೇ” ಎಂದು ವ್ಯಂಗ್ಯವಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...