ಪ್ರಜ್ವಲ್‌ ಪ್ರಕರಣ | ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ ರೇಪ್‌ ಪ್ರಕರಣ ಇದು, ಪ್ರಪಂಚದಲ್ಲೇ ನಡೆದಿಲ್ಲ: ಕೃಷ್ಣ ಬೈರೇಗೌಡ

Date:

ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ. ಇದನ್ನು ಸೆಕ್ಸ್ ಸ್ಕ್ಯಾಮ್ ಎಂದು ಕರೆಯಬೇಡಿ, ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ ಪ್ರಕರಣ ಇದು” ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿ, “ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ? ಹಿಂದೂ ಮಹಿಳೆಯರ ತಾಳಿ ಬಗ್ಗೆ ಮಾತಾಡ್ತಾರೆ. ಹಿಂದು ಮನೆಯ ಮಾಂಗಲ್ಯಸೂತ್ರದ ಬಗ್ಗೆ ಮಾತಾಡ್ತಾರೆ. ನೂರಾರು ಮಹಿಳೆಯರ ಜೀವನ ಹಾಳು ಮಾಡಿರುವ ಪ್ರಜ್ವಲ್ ಬಗ್ಗೆ ಮಾತೇ ಆಡಲ್ಲ” ಎಂದರು.

“ಹಾಸನದ ಬಿಜೆಪಿ ಲೀಡರ್ ಡಿಸೆಂಬರ್ ತಿಂಗಳಲ್ಲಿ ಈ ಬಗ್ಗೆ ಪತ್ರ ಬರೆದಿದ್ದರು. ನೂರಾರು ಮಹಿಳೆಯರ ಜೀವನ ಹಾಳು ಮಾಡಿದ್ದಾನೆ ಪ್ರಜ್ವಲ್ ಎಂದು ಉಲ್ಲೇಖಿಸಿದ್ದರು. ಪತ್ರ ಬರೆದು ಟಿಕೆಟ್ ಕೊಡಬಾರದು ಎಂದು ಹೇಳಿದರೂ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಪ್ರಧಾನಮಂತ್ರಿಗಳು ಹಿಂದೂ ಮಹಿಳೆಯರ ಬಗ್ಗೆ ಮಾತನಾಡುವವರು, ಇಲ್ಲಿ ಇಷ್ಟೊಂದು ಹಿಂದೂ ಮಹಿಳೆಯರ ಮಾನಭಂಗವಾಗಿದೆ. ಮನೆಗಳನ್ನ ಒಡೆದಿದ್ದಾರೆ, ಮಾಂಗಲ್ಯ ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಲು ಆಗಲ್ವಾ?” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ರೆವಣ್ಣಗೆ ಕೊಡುವ ಒಂದೊಂದು ಮತ ಮೋದಿಗೆ ಕೊಡುವ ಮತ ಎಂದು ಭಾಷಣ ಮಾಡಿದ್ದಾರೆ.
ಪ್ರಜ್ವಲ್ ಗೆ ಮೋದಿಯವರು ನೇರವಾಗಿ ಬೆಂಬಲ ಕೊಟ್ಟಿದ್ದಾರೆ. ಇಲ್ಲಿಯವರೆಗೆ ಬಿಜೆಪಿ ನಾಯಕರು ಈ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಅವರಿಗೆ ನಾಚಿಕೆ ಮಾನ ಮರ್ಯಾದೆ ಎಂಬುದೇ ಗೊತ್ತಿಲ್ಲ” ಎಂದು ಹರಿಹಾಯ್ದರು.

ಮೋದಿ ಸಹಕಾರ ಇಲ್ಲದೆ ದೇಶ‌ ಬಿಟ್ಟು ಹೋಗಲು ಸಾಧ್ಯವಾ?

“ಎಸ್‌ಐಟಿ ಮಾಡಿದ್ದು ರಾಜಕೀಯ ಪ್ರೇರಿತ ಅಂತಾರೆ. ಹಾಗಾದ್ರೆ ಈ ಪ್ರಕರಣ ಮುಚ್ಚಿ ಹಾಕಬೇಕಾ? ಇದು ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ. ನಾನು ಚಾಲೆಂಜ್ ಮಾಡ್ತಿನಿ, ಪ್ರಪಂಚದಲ್ಲಿ ಇಷ್ಡು ದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿಲ್ಲ. ಇದರ ಬಗ್ಗೆ ಯಾಕೆ ಮೋದಿಯವರಿಗೆ ಕಣ್ಣು ಕಾಣುತ್ತಿಲ್ಲ.
ಮೋದಿಯವರ ಹತ್ರ ಸಿಬಿಐ , ಇಡಿ ಇದೆ ದೇಶ ಬಿಟ್ಟು ಹೋಗಲು ಇವರನ್ಮ ಹೇಗೆ ಬಿಟ್ರು? ಮೋದಿಯವರ ಸಹಕಾರ ಇಲ್ಲದೆ ದೇಶ‌ ಬಿಟ್ಟು ತಪ್ಪಿಸಿಕೊಂಡು ಹೋಗಲು ಸಾಧ್ಯವಾ” ಎಂದು ಪ್ರಶ್ನಿಸಿದರು.

“ಲೈಂಗಿಕ ದೌರ್ಜನ್ಯ ಮಾಡಿ ದೇಶ ಬಿಟ್ಟು ಹೋದವರಿಗೆ ರಕ್ಷಣೆ ಕೊಡುತ್ತಿರುವವರು ಯಾರು? ನೀರವ್ ಮೋದಿ, ಲಲಿತ ಮೋದಿ, ಮಲ್ಯ ಹೊರಗಡೆ ಹೋಗಿದ್ದಾರೆ. ಇವರ ಹಾಗೆ ಇವರನ್ನ ಹೊರಗಡೆ ಕಳಸಿ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ದೇಶಕ್ಕೆ ಅವಮಾನ ಮಾಡುವ ಕೇಲಸ ಬಿಜೆಪಿ ಜೆಡಿಎಸ್ ನವರು ಮಾಡಿದ್ದಾರೆ” ಎಂದು ಟೀಕಿಸಿದರು.

“ಬಿಜೆಪಿ ಅಧಿಕಾರದಲ್ಲಿರುವುದು ಸಾಕು ಎನ್ನುವ ಅಭಿಪ್ರಾಯಕ್ಕೆ ಜನ ಬಂದಿದ್ದಾರೆ. ರೈತರು ಬೆಸತ್ತು ಕಾಂಗ್ರೆಸ್ ಕಡೆಗೆ ಮುಖ ಮಾಡಿದ್ದಾರೆ, ಬದಲಾವಣೆ ಗಾಳಿ ಬೀಸಿದೆ. ಹಾವೇರಿ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಹಾವೇರಿ ಕ್ಷೇತ್ರದ ಉಸ್ತುವಾರಿ ನನಗೆ ಕೊಟ್ಟಿದ್ದಾರೆ. ನಮ್ಮ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಕೇಲಸ ಮಾಡಲು ಬಂದಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...