ಪ್ರಜ್ವಲ್‌ ಪೆನ್‌ ಡ್ರೈವ್ ಪ್ರಕರಣ | ಎಸ್‌ಐಟಿ ಬಲೆಗೆ ಬೀಳುತ್ತಿರುವ ಬಿಜೆಪಿ ನಾಯಕರ ಆಪ್ತರು

Date:

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್​ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣ ದಿನೇ ದಿನೆ ಹೊಸ ತಿರುವು ಪಡೆಯುತ್ತಿದ್ದು, ಪ್ರಕರಣದಲ್ಲಿ ಬಿಜೆಪಿಯ ಪ್ರಭಾವಿ ನಾಯಕರ ಆಪ್ತರೇ ಬಂಧನವಾಗುತ್ತಿದ್ದಾರೆ.

ಪೆನ್‌ ಡ್ರೈವ್ ಪ್ರಕರಣ ಬೆಳಕಿಗೆ ಬರುವ ಮುನ್ನವೇ ಏಪ್ರಿಲ್ 21 ರಂದು ಪ್ರೀತಂಗೌಡ ಆಪ್ತ ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್​ ನಾಯಕರು ದೂರು ನೀಡಿದ್ದರು.‌ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಯಿತು.

ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚಿಸಿದ ಮೇಲೆ ಪೆನ್‌ ಡ್ರೈವ್‌ ಪ್ರಕರಣ ನಿಧಾನವಾಗಿ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ಕೈಗೆತ್ತಿಕೊಂಡಿದೆ. ತನಿಖೆಯ ಆರಂಭಿಕವಾಗಿಯೇ ಪ್ರೀತಂಗೌಡರ ಕೆಲ ಆಪ್ತರನ್ನು ಬಂಧಿಸಿದೆ. ಪೆನ್‌ ಡ್ರೈವ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಎಸ್​ಐಟಿ ಭಾನುವಾರ (ಮೇ 12) ರಂದು ಪ್ರೀತಂಗೌಡರ ಮತ್ತಿಬ್ಬರು ಆಪ್ತರನ್ನು ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧನಕ್ಕೊಳಗಾಗಿರುವ ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿಯ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಪೆನ್‌ ಡ್ರೈವ್‌ ಪ್ರಕರಣವನ್ನು ರಾಜಕೀಯಗೊಳಿಸಿ ಮಾತನಾಡುತ್ತಿದ್ದ ಬಿಜೆಪಿ ನಾಯಕರಿಗೆ ಈಗ ಪದೇ ಪದೆ ಮುಜುಗರವಾಗುತ್ತಿದೆ. ಇದು ಕಮಲ ನಾಯಕರಿಗೆ ಆಘಾತ ತಂದಿದ್ದು, ಇನ್ನಷ್ಟು ನಿದ್ದೆಗೆಡುವಂತೆ ಮಾಡಿದೆ.

ಬಿಜೆಪಿಯ ದೇವರಾಜೇಗೌಡರಿಗೆ ತಪ್ಪಿಲ್ಲ ಸಂಕಷ್ಟ

ಪೆನ್‌ ಡ್ರೈವ್‌ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಹಿರಂಗವಾಗಿ ಸುದ್ದಿಗೋಷ್ಠಿ ನಡೆಸಿ, ರಾಜ್ಯ ಸರ್ಕಾರ ಮತ್ತು ಎಸ್‌ಐಟಿ ಮೇಲೆ ಗೂಬೆ ಕೂರಿಸುವ ಕೆಲಸಕ್ಕೆ ಮುಂದಾಗಿದ್ದ ಬಿಜೆಪಿ ನಾಯಕ ಮತ್ತು ವಕೀಲ ದೇವರಾಜೇಗೌಡರಿಗೆ ಪೆನ್‌ ಡ್ರೈವ್‌ ಪ್ರಕರಣ ಉರುಳಾಗುವ ಸಾಧ್ಯತೆ ಇದೆ.

ಲೈಂಗಿಕ ದೌರ್ಜನ್ಯ ಆರೋಪ ಕೇಳಿಬರುತ್ತಿದ್ದಂತೆ ವಿಚಾರಣೆಗೆ ಹಾಜರಾಗದೆ ಕರ್ನಾಟಕ ಬಿಟ್ಟು ಹೊರಟಿದ್ದ ದೇವರಾಜೇಗೌಡರನ್ನು ಹೊಳೆನರಸೀಪುರ ಪೊಲೀಸರು ಆರೆಸ್ಟ್ ಮಾಡಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜ್ವಲ್ ಕೇಸ್ ಸಂಬಂಧ ತನಿಖೆಗೆ ವಕೀಲ ದೇವರಾಜೇಗೌಡರನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಎಸ್ಐಟಿ ಕೇಳುವ ಸಾಧ್ಯತೆ ಇದ್ದು, ಇದಕ್ಕಾಗಿ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಕೇಳಬಹುದು. ತನಿಖೆ ವೇಳೆ ಒಂದು ಮೊಬೈಲ್, ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ದೇವರಾಜೇಗೌಡರ ವಿಚಾರಣೆ ಅಗತ್ಯವಿದೆ.

ನವೀನ್ ಗೌಡ, ಪುಟ್ಟರಾಜುಗಾಗಿ ಹುಡುಕಾಟ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದ್ದು, ನವೀನ್ ಗೌಡ ಹಾಗೂ ಪುಟ್ಟರಾಜುಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...