ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಎಸ್‌ಐಟಿ ತಂಡದ ವಿರುದ್ಧವೇ ದೂರು ದಾಖಲಿಸುವೆ: ವಕೀಲ ದೇವರಾಜೇಗೌಡ

Date:

ಸಂಸದ ಪ್ರಜ್ವಲ್‌ ಮತ್ತು ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರ ಕಣ್ಣೀರು ಒರೆಸುವ ಬದಲು ರಾಜಕೀಯ ತೆವಲಿಗಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ಜನಪ್ರತಿನಿಧಿಗಳು ಮತ್ತು ಈ ಪ್ರಕರಣದಲ್ಲಿ ಸಾಕ್ಷಿಗಳಾಗಿರುವವರು ನೀಡುತ್ತಿದ್ದಾರೆ.

ಪ್ರಜ್ವಲ್‌ ಪೆನ್‌ ಡ್ರೈವ್‌ ಪ್ರಕರಣ ಬಗ್ಗೆ ಮೊದಲು ರಾಜ್ಯದ ಗಮನಕ್ಕೆ ತಂದಿದ್ದ ಹಾಗೂ ಬಿಜೆಪಿ ಹೈಕಮಾಂಡ್‌ಗೆ ಪತ್ರ ಬರೆದು ಮನವರಿಕೆ ಮಾಡಿದ್ದ ಬಿಜೆಪಿ ನಾಯಕ ಮತ್ತು ವಕೀಲ ದೇವರಾಜೇಗೌಡ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಬುಧವಾರ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ವಕೀಲ ದೇವರಾಜೇಗೌಡ, “ಪ್ರಜ್ವಲ್‌ ಪೆನ್‌ ಡ್ರೈವ್‌ ಪ್ರಕರಣ ಇನ್ನೂ ಎಸ್‌ಐಟಿಗೆ ಹಸ್ತಾಂತರವೇ ಆಗಿಲ್ಲ. ಕಿಡ್ನಾಪ್‌ ಮತ್ತು ಅತ್ಯಾಚಾರ ಆರೋಪವಾಗಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ತನಿಖೆ ಏಕಮುಖವಾಗಿ ಮಾತ್ರ ನಡೆಯುತ್ತಿದ್ದು, ಪೆನ್‌ ಡ್ರೈವ್‌ ಹಂಚಿಕೆ ಮಾಡಿದವರನ್ನು ಈವರೆಗೂ ಬಂಧಿಸಿಲ್ಲ. ಹೀಗಾಗಿ ಗುರುವಾರ ಎಸ್‌ಐಟಿ ತನಿಖಾ ತಂಡದ ವಿರುದ್ಧವೇ ಪ್ರಕರಣ ದಾಖಲಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ನಾಯಕರಿಗಾಗಲಿ, ರಾಜ್ಯ ಸರ್ಕಾರಕ್ಕಾಗಲಿ ನಾನು ಹೆದರುವುದಿಲ್ಲ. ರೇವಣ್ಣವರ ಬಂಧನದಿಂದ ರಾಷ್ಟ್ರೀಯ ಮಟ್ಟದಲ್ಲಿ ಒಕ್ಕಲಿಗ ಸಮುದಾಯ ತಲೆತಗ್ಗಿಸುವಂತಾಗಿದೆ. ಐದಾರು ಸಚಿವರು ತಮ್ಮ ನಾಯಕನ ರಕ್ಷಣೆಗೆ ರಾಜ್ಯದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದರು.

“ಪೆನ್‌ಡ್ರೈವ್‌ ಹಂಚಿದ ಕಾರ್ತಿಕ್‌ ಪರವಾಗಿ ಈ ಹಿಂದೆ ನಾನು ವಕಾಲತ್ತು ವಹಿಸಿದ್ದೆ. ಅದು ಅವನ ಪತ್ನಿಗೆ ಅನ್ಯಾಯವಾಗಿರುವ ಪ್ರಕರಣ. ಆಗ ನನಗೆ ಕಾರ್ತಿಕ ಪೆನ್‌ ಡ್ರೈವ್‌ ಕೊಟ್ಟಿದ್ದ. ಅದನ್ನು ನಾನು ಈವರಗೂ ತೆಗೆದು ನೋಡಿಲ್ಲ” ಎಂದು ಹೇಳಿದರು.

“ಹಾಸನದ ಗಡಿ ಭಾಗದಲ್ಲಿ ಸಂತ್ರಸ್ತೆ ಮಹಿಳೆಯರಿಗೆ ಪೆನ್‌ ಡ್ರೈವ್‌ ಸಿಕ್ಕವರು ಕಾಲ್‌ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಇಬ್ಬರು ಸಂತ್ರಸ್ತೆಯರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯರ ಪರವಾಗಿ ಇಡೀ ವಕೀಲ ಸಮೂಹ ಇದೆ. ಯಾರೂ ಎದೆಗುಂದಬೇಡಿ” ಎಂದರು.

“ನನ್ನ ಮೇಲೆಯೂ ಹನಿ ಟ್ರ್ಯಾಪ್ ಪ್ರಯತ್ನ ನಡೆದಿತ್ತು. ಆದರೆ ಅದು ವಿಫಲವಾಗಿದೆ. ಪೆನ್‌ ಡ್ರೈವ್‌ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಎದ್ದು ಕಾಣುತ್ತಿದೆ. ನನ್ನ ಹೋರಾಟ ಸರ್ಕಾರದ ವಿರುದ್ಧ ಅಲ್ಲ. ಯಾವುದೇ ನಾಯಕರ ವಿರುದ್ಧವಲ್ಲ. ವಕೀಲನಾಗಿ ನ್ಯಾಯದ ಪರವಾಗಿ ಹೋರಾಟ ಮಾಡುತ್ತಿರುವೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...