ಪ್ರಜ್ವಲ್‌ ಪೆನ್‌ ಡ್ರೈವ್‌ ಪ್ರಕರಣ | ಎಸ್‌ಐಟಿ ತನಿಖೆಯ ಇಷ್ಟು ದಿನದ ಸಾಧನೆ ಏನು: ಕುಮಾರಸ್ವಾಮಿ ಪ್ರಶ್ನೆ

Date:

“ಪೆನ್‌ಡ್ರೈವ್‌ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿಯ ಇಷ್ಟು ದಿನದ ಸಾಧನೆ ಏನು? ಈ ಬಗ್ಗೆ ರಾಜ್ಯಪಾಲರಿಗೆ ಇಂದು ಮಧ್ಯಾಹ್ನ (ಏ.9) ದೂರು ಕೊಡುತ್ತಿರುವೆ. ಎಸ್‌ಐಟಿ ತನಿಖೆ ಹೇಗೆ ನಡೆಯುತ್ತಿದೆ ಎಂಬುದು ರಾಜ್ಯಪಾಲರ ಎದುರು ವಿವರಿಸುವೆ” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಯಾರಿಗೆ ನಿಜವಾಗಿಯೂ ಶಿಕ್ಷೆಯಾಗಬೇಕು? ಈ ಬಗ್ಗೆ ಮೊದಲನೇ ದಿನದಿಂದಲೂ ಹೇಳುತ್ತ ಬಂದಿರುವೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಅನುಭವಿಸಲಿ. ಆದರೆ ಇಲ್ಲಿ ನಡೆಯುತ್ತಿರುವ ವಾತಾವರಣ ನೋಡಿದ್ರೆ, ಸರ್ಕಾರಕ್ಕೆ ಯಾರಿಗೂ ಶಿಕ್ಷೆ ಕೊಡಿಸುವುದು ಬೇಕಿಲ್ಲ, ಪ್ರಚಾರ ಬೇಕು. ಅದಕ್ಕಾಗಿ ಇದೆಲ್ಲ ನಡೆಯುತ್ತಿದೆ” ಎಂದು ಆರೋಪಿಸಿದರು.

“ಈಗ ಮಹಾನ್‌ ಕೃಷ್ಣ ಬೈರೇಗೌಡರು ಬೇರೆ ಪ್ರವೇಶಿಸಿದ್ದಾರೆ. ಮಂಡ್ಯ ಲೀಡರ್‌, (ಚಲುವರಾಯಸ್ವಾಮಿ) ರಾಮಲಿಂಗಾರೆಡ್ಡಿ ಹಾಗೂ ಸುಧಾಕರ್‌ ಅವರು ಒಕ್ಕಲಿಗ ಸಮುದಾಯದ ಮಂತ್ರಿಗಳು ಸೇರಿ ನನ್ನ ಮೇಲೆ ಅಟ್ಯಾಕ್‌ ಮಾಡುತ್ತಿದ್ದಾರೆ. ನಾನು ಈ ಹಿಂದೆ ಭ್ರಷ್ಟಾಚಾರದ ಹೋರಾಟ ಮಾಡಲು ಹೋದಾಗ ಆಗಲೂ ಒಕ್ಕಲಿಗ ನಾಯಕರನ್ನೇ ಮುಂದೆಬಿಟ್ಟು ನನ್ನ ಮೇಲೆ ಅಟ್ಯಾಕ್‌ ಮಾಡಿಸಿದರು. ಈಗ ಅದೇ ತಂತ್ರ ಇಲ್ಲಿ ಮುಂದುವರಿಸಿದ್ದಾರೆ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಿಡ್ನಾಪ್‌ ಆದ ಮಹಿಳೆಯ ಕುಟುಂಬಸ್ಥರನ್ನು ಎಲ್ಲೋ ಕೂಡಿಹಾಕಿದ್ದಾರೆ ಎಂಬ ಮಾಹಿತಿ ಇದೆ. ಕಿಡ್ನಾಪ್‌ ಆದ ಮಹಿಳೆಯನ್ನು ಕರ್ಕೊಂಡು ಬಂದು ಎಷ್ಟು ದಿನ ಆಯ್ತು? 164 ಹೇಳಿಕೆ ತೆಗೆದುಕೊಂಡಿದ್ದರಾ? ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರಾ? ಐದು ದಿನ ಆದ್ರೂ ಯಾಕೆ ಕೋರ್ಟ್‌ ಮುಂದೆ ಹಾಜರು ಪಡಿಸಿಲ್ಲ? ನಿಜವಾಗಲೂ ತೋಟದ ಮನೆಯಿಂದಲೇ ಕರ್ಕೊಂಡು ಬಂದ್ರಾ? ಎಂಬುದು ಬಯಲಾಗಬೇಕು” ಎಂದು ಆಗ್ರಹಿಸಿದರು.

“ರೇವಣ್ಣ ಅವರೇ ಆ ಮಹಿಳೆಯನ್ನು ಕಿಡ್ನಾಪ್‌ ಮಾಡಿಸಿದ್ದಾರೋ ಇಲ್ಲವೋ ಎಂಬುದನ್ನು ಎಸ್‌ಐಟಿ ಹೇಳಬೇಕಲ್ವಾ? ಯಾಕೆ ಇಷ್ಟು ತಡವಾಗುತ್ತಿದೆ? ಕಾರಣ ರೇವಣ್ಣ ಅವರನ್ನು ಇನ್ನೂ ನಾಲ್ಕು ದಿನ ಜೈಲಿನಲ್ಲಿ ಇಡಬೇಕು ಎಂಬುದು ಕೆಲವರ ಆಸೆ. ಸತ್ಯಾಂಶ ಹೊರಗೆ ಬರುವುದು ಸರ್ಕಾರಕ್ಕೆ ಬೇಕಿಲ್ಲ. ಜೂನ್‌ 4ರಂದು ಎಲ್ಲ ವಿಷಯಗಳು ತೆರೆ ಬೀಳಲಿವೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...