ಪ್ರಜ್ವಲ್‌-ರೇವಣ್ಣ ಪ್ರಕರಣ | ರಾಜ್ಯವೇ ತಲೆ ತಗ್ಗಿಸುವ ಘಟನೆ, ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂತಸವಿಲ್ಲ: ಕುಮಾರಸ್ವಾಮಿ

Date:

ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮಿಸುವುದೆ ಬೇಡ. ಪಕ್ಷದ ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಪ್ರಕರಣ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ” ಎಂದರು.

ರಾಜ್ಯದಲ್ಲಿದೆ ದೊಡ್ಡ ತಿಮಿಂಗಿಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಿಲ ಇದೆ. ಆ ತಿಮಿಂಗಲ ಯಾರೆಂದು ರಾಜ್ಯದ ಜನರಿಗೂ ಗೊತ್ತಿದೆ. ಎಸ್​ಐಟಿ ತನಿಖೆ ವರದಿ ಶಾಸಕರಿಗೆ ಸರಬರಾಜಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಏಪ್ರಿಲ್ 22ರಂದು ದಾಖಲಾದ ಎಫ್​ಐಆರ್​ಗೆ ಸಂಬಂಧಿಸಿ ಒಬ್ಬರನ್ನೂ ಬಂಧಿಸಿಲ್ಲ. ನವೀನ್​ ಗೌಡ ನಮ್ಮ ಪಕ್ಷದವರಿಗೆ ಕೊಟ್ಟೆ ಅಂದಿದ್ದಾನೆ. ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತಿದೆ? ಪೆನ್​​ಡ್ರೈವ್​ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್​ಐಟಿ ಅಧಿಕಾರಿಗಳಿಗೆ ಕೇಳಬಯಸುತ್ತೇನೆ” ಎಂದು ಹೇಳಿದರು.

“ರೇವಣ್ಣ ಕುಟುಂಬ ಮುಗಿಸಲು ಪ್ಲ್ಯಾನ್​ ಮಾಡಿದ್ದೇನಂತೆ. ನಾನು ಯಾವಾಗಲೂ ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ ಪರ ಹೋರಾಟ ಮಾಡುತ್ತೇನೆ. ಸದ್ಯ ನಾನು ಈ ಬಗ್ಗೆ ಏನೂ ಹೇಳಲು ಹೋಗುವುದಿಲ್ಲ. ನನ್ನ ಬಳಿ ಎಲ್ಲ ದಾಖಲೆಗಳಿವೆ ಮುಂದೆ ಮಾತನಾಡುವೆ ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...