ಪ್ರಜ್ವಲ್‌-ರೇವಣ್ಣ ಪ್ರಕರಣ | ಸಾಹಿತಿಗಳ ಅಭಿಪ್ರಾಯ ಸರ್ಕಾರ ಪರಿಗಣಿಸಲಿದೆ: ಗೃಹ ಸಚಿವ ಪರಮೇಶ್ವರ್

Date:

ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಈಗಾಗಲೇ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಾಹಿತಿಗಳು ಪತ್ರ ಬರೆದಿರುವುದರಿಂದ ಎಚ್ಚರಿಸಿದಂತಾಗುತ್ತದೆ. ಸಾಹಿತಿಗಳು ಪತ್ರದ ಮೂಲಕ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಾಹಿತಿಗಳು ಸಮಾಜದ ಕಳಕಳಿ ಇರುವಂತವರು. ನಿತ್ಯ ಅನೇಕ ವಿಷಯಗಳನ್ನು ಅವರು ಗಮನಿಸುತ್ತಿರುತ್ತಾರೆ. ಆ ನಿಟ್ಟಿನಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ” ಎಂದರು.

ಶಾಸಕ ಹೆಚ್.ಡಿ.ರೇವಣ್ಣ ಅವರೇ ಹಳೇ ವಿಡಿಯೋ ಎಂದು ಹೇಳಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ಇದೆಲ್ಲವೂ ಗೊತ್ತಿದ್ದು ಮುಂದುವರಿಯಲು ಬಿಟ್ಟಿರುವ, ಕುಟುಂಬದ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಸಾಹಿತಿಗಳು ಒತ್ತಾಯಿಸಿದ್ದಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಅದೆಲ್ಲವನ್ನು ಎಸ್ಐಟಿ ಕ್ರಮ ತೆಗೆದುಕೊಳ್ಳುತ್ತದೆ. ತನಿಖೆ ಹಂತದಲ್ಲಿ ಯಾವ ವಿಚಾರಗಳನ್ನು ನಾವು ಹೇಳಲು ಬರುವುದಿಲ್ಲ. ಇದೆಲ್ಲವನ್ನು ಎಸ್ಐಟಿ ಅವರು ಗಮನಕ್ಕೆ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೊಡ್ಡ ತಿಮಿಂಗಲು ಯಾರು ಎಂಬುದನ್ನು ಹೆಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದರೆ ಮುಗಿಯುತ್ತದೆ. ತಿಮಿಂಗಲು ಇದೆ ಎಂಬುದು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. ಅದನ್ನು ಹೇಳದಿರುವುದೇ ದೊಡ್ಡ ತಪ್ಪು. ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆ ಕೊಡುತ್ತಿರುತ್ತಾರೆ. ಪೆನ್‌ಡ್ರೈವ್ ಕೊಟ್ಟ ಬಳಿಕ ಆ ಮಾತನ್ನು ಹೇಳಬೇಕು. ನಾವು ತನಿಖೆ ಮಾಡಲಿಲ್ಲವಾದರೆ ಆರೋಪಿಸಲಿ” ಎಂದರು.

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ ಆಗುತ್ತಿರುವ ಮಾಹಿತಿ ನನಗಿಲ್ಲ. ಆಧಿಕಾರಿಗಳಿಗೆ ಮಾಹಿತಿ ಇರುತ್ತದೆ. ತನಿಖೆ ನಡೆಯುವಾಗ ಯಾವ ವಿಷಯವನ್ನು ಹೇಳಬೇಕು, ಹೇಳಬಾರದು ಎಂಬುದು ಅವರಿಗಿರುತ್ತದೆ. ಕೆಲವು ಸಂದರ್ಭದಲ್ಲಿ ಇಂಟಲಿಜೆನ್ಸ್ ಅವರಿಗೆ ಗೊತ್ತಿರುವುದಿಲ್ಲ. ಆದರೆ, ಬೇರೆಯವರಿಗೆ ಗೊತ್ತಿರುತ್ತದೆ. ಅಂತಹ ಸಂದರ್ಭದಲ್ಲಿ ಹೇಳಿದರೆ ಸಹಾಯವಾಗುತ್ತದೆ” ಎಂದು ತಿಳಿಸಿದರು.

“ಮುಖ್ಯಮಂತ್ರಿ ಅವರ ಜೊತೆಗಿನ ಚರ್ಚೆ ಹೇಳಿಕೊಳ್ಳುವಂತದ್ದು ಏನಿಲ್ಲ. ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಎಲ್ಲವೂ ಸಾಮಾನ್ಯವಾಗಿ ಮಾಡೇ ಮಾಡುತ್ತೇವೆ. ಅದೆಲ್ಲವನ್ನು ಹೇಳಲು ಆಗುವುದಿಲ್ಲ” ಎಂದರು.

“ಸಚಿವ ಸತೀಶ್ ಜಾರಕಿಹೊಳಿ ಅವರ ಮಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆ ವಿಚಾರದಲ್ಲಿ ಏನೇನು ಆಗಿದೆ ಎಂಬುದರ ಕುರಿತು ಚರ್ಚಿಸಲು ಭೇಟಿಯಾಗಿದ್ದೆ. ಆ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ. ಸಮುದಾಯವಾರು ಡಿಸಿಎಂ ನೇಮಕ ವಿಚಾರದ ಚರ್ಚೆ ನನಗೆ ಗೊತ್ತೇ ಆಗುವುದಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...