ಪ್ರಜ್ವಲ್ ರೇವಣ್ಣ ಪ್ರಕರಣ: ಮಾಜಿ ಡ್ರೈವರ್ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು: ಕುಮಾರಸ್ವಾಮಿ ಪ್ರಶ್ನೆ

Date:

ದೇಶದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಹಾಸನ ಸಂಸದ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಹಿರಂಗ ಹೇಳಿಕೆ ನೀಡಿದ್ದ ಪ್ರಜ್ವಲ್ ರೇವಣ್ಣ ಅವರ ಮಾಜಿ ಡ್ರೈವರ್ ಕಾರ್ತಿಕ್ ಮಲೇಷ್ಯಾದಲ್ಲಿರುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇಂದು ಸಂಜೆ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಕುಮಾರಸ್ವಾಮಿ ಆಗಮಿಸಿದರು. ಈ ವೇಳೆ ಡ್ರೈವರ್ ಕಾರ್ತಿಕ್ ಹೇಳಿಕೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, “ತರಾತುರಿಯಲ್ಲಿ ವಿಡಿಯೋ ಬಿಟ್ಟು ನನ್ನನ್ನು ಕೆಣಕಿದ್ದಾರೆ. ನನಗೆ ಏನು ಮಾಡಬೇಕು ಅಂತ ಗೊತ್ತಿದೆ. ಮೊದಲು ಕಾರ್ತಿಕ್ ಎಲ್ಲಿದ್ದಾನೆ ಎಂದು ಹುಡುಕಿಕೊಳ್ಳಿ” ಎಂದರು.

“ಮಂಗಳವಾರ ಡ್ರೈವರ್ ಕಾರ್ತಿಕ್ ವಿಡಿಯೋ ಬಿಡುಗಡೆಯಾಗಿದೆ. ಕಾರ್ತಿಕ್‌ ಎಲ್ಲಿಯಾದ್ರೂ ಪ್ರೆಸ್‌ ಮೀಟ್‌ ಮಾಡಿದ್ದಾನಾ? ವಿಡಿಯೋವನ್ನು ಬಿಡುಗಡೆ ಮಾಡಿದವರು ಯಾರು? ಅವನು ದೇವರಾಜೇಗೌಡನ ಕೈಯಲ್ಲಿ ನಾನು ವಿಡಿಯೋ ಕೊಟ್ಟಿದ್ದೇನೆ ಎಂದಿದ್ದಾನೆ. ಕಾರ್ತಿಕ್ ಈಗ ಮಲೆಷ್ಯಾದಲ್ಲಿ ಇದ್ದಾನೆ. ನಿಮಗೆ ವಿಡಿಯೋ ರಿಲೀಸ್‌ ಮಾಡಿದ್ದು ಎಲ್ಲಿಂದ? ಮೊದಲು ಆತನನ್ನು ಕರೆದುಕೊಂಡು ಬನ್ನಿ ಎಂದು 420 ಬ್ರದರ್ಸ್” ಎಂದು ಪರೋಕ್ಷವಾಗಿ ಡಿ ಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರಾಜ್ ಮೊದಲು ನನ್ನನ್ನು ಭೇಟಿಯಾಗಿದ್ದಾನೆಂದು ಈ 420ಗಳು ಹೇಳಿದ್ದಾರೆ. ಎಲ್ಲಿಂದ ವಿಡಿಯೋ ಮಾಡಿ ಬಿಟ್ಟಿದ್ದಾನೆ ಅದನ್ನು ಮೊದಲು ತಿಳಿದುಕೊಳ್ಳಿ. ಸುಲಭವಾಗಿ ನಮ್ಮನು ಕೆಣಕಿದರೆ ನಾವು ಸುಮ್ಮನೇ ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಮಾಧ್ಯಮದವರ ಮೇಲೆಯೇ ಕೋಪಗೊಂಡ ಕುಮಾರಸ್ವಾಮಿ

ಇದೇ ವೇಳೆ ಮಾಧ್ಯಮಗಳ ವಿರುದ್ಧವೇ ಗರಂ ಆದ ಹೆಚ್‌ಡಿಕೆ, “ನಮ್ಮ ಮನೆ ಬಳಿ ಯಾಕೆ ಬಂದಿದ್ದೀರಿ. ಅಲ್ಲೂ ಬರ್ತೀರಾ ಇಲ್ಲೂ ಪದೇ ಪದೇ ಬರುತ್ತೀರಿ. ಬೆಳಗ್ಗೆ ಮನೆ ಹತ್ತಿರ ಬಂದಿದ್ದೀರಿ. ಈಗ ಮತ್ತೆ ಇಲ್ಲಿ ಬಂದಿದ್ದೀರಿ. ಸಂಪೂರ್ಣವಾಗಿ ನಿನ್ನೆ ಒಂದು ಗಂಟೆ ಹೇಳಿದ್ದೇನೆ. ಮತ್ತೆ ಯಾಕೆ ಬರುತ್ತೀರಿ. ಸುದ್ದಿ ಬೇರೆಯವರು ಕೊಡುತ್ತಿದ್ದಾರೆ. ಅವರ ಬಳಿ ಹೋಗಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇವೇಗೌಡರ ನಿವಾಸಕ್ಕೆ ರೇವಣ್ಣ, ಕುಮಾರಸ್ವಾಮಿ ಭೇಟಿ

ಹಾಸನ ಜೆಡಿಎಸ್​​ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಪಕ್ಷಕ್ಕಾಗಿರುವ ಮುಜುಗರದ ಬಗ್ಗೆ ಮಾತುಕತೆ ನಡೆಸಲು ಹೆಚ್.ಡಿ.ದೇವೇಗೌಡ ನಿವಾಸಕ್ಕೆ ಹೆಚ್.ಡಿ.ರೇವಣ್ಣ ಮತ್ತು ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...