ಪ್ರಜ್ವಲ್ ಪ್ರಕರಣ | ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಸೂಜಿಯಷ್ಟೂ ಮಧ್ಯಪ್ರವೇಶಿಸಲ್ಲ: ಸಿಎಂ ಸಿದ್ದರಾಮಯ್ಯ

Date:

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್” ಎಂದು ವಕೀಲ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ ಆರೋಪಿಸಿದ್ದರು.

ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, “ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಸೂಜಿಯಷ್ಟೂ ಮಧ್ಯಪ್ರವೇಶಿಸುವುದಿಲ್ಲ” ಎಂದು ಸ್ಪಷನೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, “ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್” ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡರಿಂದ ನನ್ನ ವಿರುದ್ಧ ಸುಳ್ಳು ಆರೋಪ: ಡಿ ಕೆ ಶಿವಕುಮಾರ್

“ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ರೂವಾರಿ ಡಿಕೆಶಿ: ಯೂಟರ್ನ್‌ ಹೊಡೆದು ವಕೀಲ ದೇವರಾಜೇಗೌಡ ಆರೋಪ

ದೇವರಾಜೇಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸಂಜೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ, “ತನಿಖೆ ನಡೆಸುತ್ತಿರುವ ಎಸ್‍ಐಟಿಯ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡುತ್ತಿಲ್ಲ. ಬದಲಾಗಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಮೊಬೈಲ್‍ಗೆ ನಿತ್ಯ ಹತ್ತಾರು ಕರೆಗಳು ಬರ್ತಿವೆ. ಸಿಎಂ-ಡಿಸಿಎಂ ಹಾಗೂ ಸಚಿವರುಗಳಿಂದಲೂ ನಿರಂತರ ಕರೆ ಬರುತ್ತಿದೆ. ಆದ್ದರಿಂದ ಇವರಿಂದ ನ್ಯಾಯ ಸಿಗುವ ವಿಶ್ವಾಸವಿಲ್ಲ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲವಾದಲ್ಲಿ ನಾವೇ ವಕೀಲರು ಹೋರಾಟ ಮಾಡಿ ಸಿಬಿಐಗೆ ಕೊಡುವಂತೆ ಮಾಡುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿ ನನಗೆ ಎಸ್‌ಐಟಿಯ ಮೇಲೆ ನಂಬಿಕೆ ಇಲ್ಲ. ಹಾಗಾಗಿ, ಸಿಬಿಐಗೆ ಕೊಟ್ಟರೆ ನನ್ನಲ್ಲಿರುವ ಎಲ್ಲ ದಾಖಲೆಗಳನ್ನು ಸಿಬಿಐಗೆ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...