ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್ ಹರಿಬಿಡುವಲ್ಲಿ ಡಿಕೆಶಿ ಕೈವಾಡ ಅರೋಪ; ಸಂಪುಟದಿಂದ ವಜಾಕ್ಕೆ ಜೆಡಿಎಸ್‌ ಆಗ್ರಹ

Date:

ಪ್ರಜ್ವಲ್ ಲೈಂಗಿಕ ಹಗರಣದಲ್ಲಿ ಆಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಜೆಡಿಎಸ್‌ ಆರೋಪಿಸಿದೆ. ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟು, ಹೆಣ್ಣುಮಕ್ಕಳ ಮಾನ ಹರಾಜು ಹಾಕುತ್ತಿರುವ ಕೃತ್ಯದಲ್ಲಿ ಕೈವಾಡವಿರುವ ಡಿ.ಕೆ ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿಬೇಕೆಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲೆಯ ಜೆಡಿಎಸ್‌ ಅಧ್ಯಕ್ಷ ಎಂ ಜಯ್ಯಣ್ಣ, “ಇತ್ತೀಚೆಗೆ ದಿನಗಳಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಹಗರಣದಲ್ಲಿ ಪೆನ್‌ಡ್ರೈವ್ ಹಾಗೂ ಆಶ್ಲೀಲ ವಿಡಿಯೋ ಮೂಲಕ ರಾಜ್ಯದೆಲ್ಲೆಡೆ ಹಂಚುತ್ತಿರುವುದು ಸಂಚಲನವನ್ನು ಸೃಷ್ಟಿಸಿದೆ. ಈ ಲೈಂಗಿಕ ಹಗರಣವನ್ನು ಯಾರೂ ಕೂಡ ಸಮರ್ಥಿಸಿಕೊಳ್ಳಲಾಗದು. ಸಂಪೂರ್ಣ ವಿಚಾರಣೆಯ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಆದರೆ, ಈ ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯರ ಮುಖಗಳು ಕಾಣಿಸುವ ಆಶ್ಲೀಲ ವಿಡಿಯೋಗಳನ್ನು ಹರಿಬಿಟ್ಟಿರುವುದು ಶಿಕ್ಷಾರ್ಹ ಅಪರಾಧ. ಇದರ ರೂವಾರಿ ಡಿ.ಕೆ.ಶಿವಕುಮಾರ್ ಎಂಬುದು ಜಗ್ಗಜನಿತವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಕೀಲ ದೇವರಾಜೇಗೌಡ ಅವರು ಎಲ್ಲ ವಿಷಯಗಳನ್ನು ಕೂಲಂಕುಷವಾಗಿ ವಿವರಿಸಿದ್ದಾರೆ. ಸರ್ಕಾರದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಉಪ ಮುಖ್ಯಮಂತ್ರಿಗಳು ಇಂತಹ ನೀಚ ಕೆಲಸಕ್ಕೆ ಇಳಿದಿರುವುದು, ಇಡೀ ರಾಜ್ಯದ ಜನತೆಯ ದುರ್ದೈವವಾಗಿದೆ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್‌ನ ಮಾಜಿ ಅಧ್ಯಕ್ಷ ಯಶೋಧರ ಮಾತನಾಡಿ, “ತೀವ್ರ ಬರಗಾಲದಿಂದ ತತ್ತರಿಸುತ್ತಿರುವ ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚಿಂತಿಸದೆ, ಇಂತಹ ಸ್ವಾರ್ಥ ರಾಜಕೀಯಕ್ಕೆ ಇಳಿದಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಈ ಚುನಾವಣಾ ಸಂದರ್ಭದಲ್ಲಿ ಜೆಡಿಎಸ್‌ ನಾಯಕ ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವರ್ಚಸ್ಸನ್ನು ಕುಂದಿಸಿ, ಜೆಡಿಎಸ್‌ ಕಳಂಕ ತರುವುದು ಇದರ ಪ್ರಮುಖ ಉದ್ದೇಶವಾಗಿದೆ. ಅದೂ ಅಲ್ಲದೇ ಮೈತ್ರಿ ಪಕ್ಷವಾಗಿರುವ ಬಿಜೆಪಿಗೆ ಮುಜುಗರ ಉಂಟು ಮಾಡಿ ಚುನಾವಣೆಯಲ್ಲಿ ಹಿನ್ನಡೆಯನ್ನುಂಟು ಮಾಡುವ ಕೆಟ್ಟ ಆಲೋಚನೆಯೂ ಸಹ ಇದರಲ್ಲಿ ಅಡಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿರುವ ಮಹಿಳೆಯರ ಫೋಟೋಗಳನ್ನು ಯಥಾವತ್ತಾಗಿ ತೋರಿಸಿ, ಮಹಿಳೆಯರ ಗೌರವವನ್ನು ತೆಗೆದಿದ್ದಾರೆ. ಇದರಿಂದಾಗಿ, ಆ ಕುಟುಂಬಗಳ ಪರಿಸ್ಥಿತಿ ಬಹಳ ಶೋಚನೀಯವಾಗಿದೆ. ಇದು ಇಡೀ ಸ್ರ್ತೀಕುಲಕ್ಕೆ ಮಾಡಿದ ಅವಮಾನ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಹಲವಾರು ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...