ಪ್ರಜ್ವಲ್ ಲೈಂಗಿಕ ಹಗರಣ | ದೇವರಾಜೇಗೌಡ ಆರೋಪ ಸುಳ್ಳು – ಬಹಿರಂಗ ಚರ್ಚೆಗೆ ಬರಲಿ; ಶ್ರೇಯಸ್ ಪಟೇಲ್ ಸವಾಲು

Date:

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ದೇವರಾಜೇಗೌಡ ನಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಹಾಸನ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಸವಾಲು ಹಾಕಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಖಾಸಗಿ ಹೋಟೆಲ್​ನಲ್ಲಿ ಸಂತ್ರಸ್ತೆಯೊಂದಿಗೆ ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾಗಿ ಹೇಳಿದ್ದಾರೆ. ನಾನು ಯಾರನ್ನು, ಎಲ್ಲಿಯೂ ಭೇಟಿ ಮಾಡಿಲ್ಲ. ಅವರು ಹೇಳುವ ಖಾಸಗಿ ಹೋಟೆಲ್‌ನಲ್ಲಿ ಸಿಸಿ ಟಿವಿ ಇದೆ. ಪರಿಶೀಲಿಸಲಿ” ಎಂದು ಹೇಳಿದ್ದಾರೆ.

“ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ತನಿಖೆ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು. ಹಾಸನದಲ್ಲಿ ಎಲ್‌ಇಡಿ ಪರದೆ ಹಾಕಿಸಿ, ತೋರಿಸ್ತೀನಿ ಎಂದಿದ್ದವರು ಯಾರು? ಈ ಕೊಳಕು ರಾಜಕೀಯಕ್ಕೆ ಕಾರಣಕರ್ತರೇ ದೇವರಾಜೇಗೌಡ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ವಿರುದ್ಧದ ಆರೋಪಗಳನ್ನು ಅವರು ಸಾಬೀತು ಮಾಡಲಿ. ಬಹಿರಂಗ ಚರ್ಚೆಗೆ ಬರಲಿ. ಆರೋಪ ಸಾಬೀತು ಮಾಡಿದರೆ, ಜೂನ್‌ 4ರಂದು ಜನರ ಆಶೀರ್ವಾದದಿಂದ ನಾನೇನಾದರೂ ಗೆದ್ದರೆ ಅಂದೇ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

“ನಾನೂ ಕೂಡ ಅಕ್ಕ-ತಂಗಿಯ ಜೊತೆ ಬೆಳೆದಿದ್ದೇನೆ. ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಅವರು ಜಮೀನು ವಿಚಾರವಾಗಿ ಮಾತ್ರ ನನ್ನನ್ನು ಭೇಟಿ ಮಾಡಿದ್ದರು. ಪೆನ್‌ಡ್ರೈವ್ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ. ದೇವರಾಜೇಗೌಡರೇ ಇದಕ್ಕೆಲ್ಲ ಕಾರಣ. ದೇವರಾಜೇಗೌಡ ತತ್ವ ಸಿದ್ಧಾಂತ‌‌ ಇಲ್ಲದ ರಾಜಕಾರಣಿ. ನಮ್ಮ ವಿರುದ್ಧ ಅನಗತ್ಯ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...