ಪ್ರಜ್ವಲ್ ಲೈಂಗಿಕ ಹಗರಣ | ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ: ಸಚಿವ ಕೃಷ್ಣಬೈರೇಗೌಡ

Date:

ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣವಿದು. ಮಾನಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಪ್ರಜ್ವಲ್ ಲೈಂಗಿಕ ಹಗರಣದ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು” ಎಂದರು.

“ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ, ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ – ಇದರ ವಿರುದ್ದ ಮಾತನಾಡಿದ್ದು ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಸಂತ್ರಸ್ತರ ಮಾನ ಹರಣವಾಗಿದೆ – ಈಗ ನ್ಯಾಯ ಹರಣ ಮಾಡಲಾಗುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಾಗಿತ್ತು. ಆದರೆ ಬೇರೆಯದೆ ವಿಚಾರ ಚರ್ಚೆ ಆಗುತ್ತಿದೆ. ಪ್ರಕರಣದ ಆರೋಪಿಯ ಬಳಿ ಕೆಲಸ ಮಾಡುತ್ತಿದ್ದವನು ಬಿಜೆಪಿ ನಾಯಕನಿಗೆ ಕೊಟ್ಟರು, ಆತನಿಗೆ ಸಾಕ್ಷಿ ಕೊಟ್ಟು ಒಂದು ವರ್ಷದ ಮೇಲಾಗಿದೆ. ಇದನ್ನು ತೆಗೆದುಕೊಂಡವನು ವಕೀಲ ನ್ಯಾಯದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವವನು ಏಕೆ ಇದನ್ನು ಮೊದಲೇ ಪೊಲೀಸರ ಗಮನಕ್ಕೆ ತರಲಿಲ್ಲ. ಆತ ಕೊಟ್ಟಿದಿದ್ದರೇ ಬೀದಿಯಲ್ಲಿ ಯಾರ ಮಾನವೂ ಹರಾಜಾಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಮುಖ್ಯನ್ಯಾಯಮೂರ್ತಿಗಳಿಗೆ ನೀಡಬಹುದಿತ್ತು. ಅಪರಾಧವನ್ನು ಮುಚ್ಚಿಟ್ಟಿರುವುದು ಕೂಡ ಅಷ್ಟೇ ಅಪರಾಧ” ಎಂದರು.

“ಪ್ರಹ್ಲಾದ್ ಜೋಶಿ, ಮೋದಿ ಅವರು ಜೆಡಿಎಸ್ ವಿರುದ್ದ ಮಾತನಾಡಲು ಆಗುತ್ತಿಲ್ಲ. ಅದಕ್ಕಾಗಿ, ಕಾಂಗ್ರೆಸ್ ವಿರುದ್ದ ಮಾತನಾಡುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸು ಎಂದು ಕಾಂಗ್ರೆಸ್ ಹೇಳಿತ್ತೇ? ಅರವತ್ತು ವರ್ಷದ ಮಹಿಳೆಯನ್ನು ಅಪಹರಣ ಮಾಡಲು ಕಾಂಗ್ರೆಸ್ ಹೇಳಿತ್ತೇ? ಬಿಜೆಪಿಗರು ಅಪಹರಣ ಮಾಡಿದ್ದೂ ಸುಳ್ಳು ಎಂದು ಹೇಳುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ರಾಜೀವ್ ಗೌಡ, ಶಾಸಕರಾದ ರಮೇಶ್ ಬಾಬು, ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕೆಪಿಸಿಸಿ ವಕ್ತಾರರೆ ಶ್ರೀಮತಿ ತೇಜಶ್ವಿನಿ ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...