ಪ್ರಜ್ವಲ್ ಲೈಂಗಿಕ ಹಗರಣ | ಮೊದಲ ಬಾರಿಗೆ ಬಾಯ್ಬಿಟ್ಟ ಮೋದಿ; ಪ್ರಜ್ವಲ್ ಅಂತವರ ಬಗ್ಗೆ ಸಹನೆ ಇರಬಾರದು ಎಂದ ಪ್ರಧಾನಿ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಬೆಳಕಿಗೆ ಬಂದು ಬರೋಬ್ಬರಿ 12 ದಿನಗಳ ಬಳಿ ಪ್ರಧಾನಿ ಮೋದಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರಜ್ವಲ್ ರೇವಣ್ಣ ಅವರಂತಹವರ ವಿಚಾರದಲ್ಲಿ ಸಹನೆ ಇರಬಾರದು. ಅವರ ವಿರುದ್ಧ ನಾವು ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ. ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಅವರು ದೇಶದಿಂದ ಓಡಿಹೋಗಲು ಕಾಂಗ್ರೆಸ್‌ ಸರ್ಕಾರ ಅವಕಾಶ ಮಾಡಿಕೊಟ್ಟಿದೆ” ಎಂದು ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಮೋದಿ, “ಪ್ರಕರಣವು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ್ದು, ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ವಿಡಿಯೋಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ, ಅವರು ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ ವಹಿಸಬೇಕು. ಆತ ದೇಶ ತೊರೆಯದಂತೆ ತಡೆಯಬೇಕಿತ್ತು. ಆದರೆ, ಅವರು ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾಋಕ್ಕೂ ಮಾಹಿತಿ ನೀಡಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

“ಕೃತ್ಯದ ಸಾವಿರಾರು ವಿಡಿಯೋಗಳಿವೆ. ಆ ವಿಡಿಯೋಗಳು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮಾಡಿದ್ದ ಕಾಲದ್ದು ಎಂಬುದನ್ನು ಸೂಚಿಸುತ್ತದೆ. ಒಕ್ಕಲಿಗರು ತಮ್ಮ ಮತದಾನದ ಹಕ್ಕು ಚಲಾಯಿಸಿದ ನಂತರ, ಚುನಾವಣೆ ಸಮಯದಲ್ಲಿ ಆ ವಿಡಿಯೋಗಳನ್ನು ಹರಿಬಿಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನುಗಳ ಅಡಿಯಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಆತನನ್ನು ದೇಶಕ್ಕೆ ಕರೆತರಬೇಕು” ಎಂದಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಬಳಿಕ, ಮೈತ್ರಿ ಮುರಿದುಕೊಂಡಿತ್ತು. ಈ ಬಾರಿಯ ಚುನಾವಣೆಗಾಗಿ 2023ರ ಸೆಪ್ಟೆಂಬರ್‌ನಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣನನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಮೈಸೂರಿನಲ್ಲಿ ನಡೆದ ಪ್ರಚಾರ ಸಮಾವೇಶದಲ್ಲಿ ಪ್ರಜ್ವಲ್ ಪರವಾಗಿ ಮೋದಿ ಮತ ಯಾಚಿಸಿದ್ದರು.

ಈ ವರದಿ ಓದಿದ್ದೀರಾ?: ಮೋದಿ, ರಾಹುಲ್ ಗಾಂಧಿ ಮತ್ತು ಅಮೇಥಿ; ಓಡಿ ಹೋಗುತ್ತಿರುವವರು ಯಾರು?

ವಿಕೃತ ಕಾಮುಕನ ಪರವಾಗಿ ಮತ ಯಾಚಿಸಿದ ಮೋದಿ ದೇಶದ ಜನರಲ್ಲಿ ಕ್ಷಮೆ ಕೇಳಬೇಕೆಂದು ರಾಷ್ಟ್ರಾದ್ಯಂತ ಒತ್ತಾಯ ಕೇಳಿಬಂದಿದೆ. ಆದರೂ, ಮೋದಿ ಕ್ಷಮೆ ಕೇಳಿಲ್ಲ. ಮಾತ್ರವಲ್ಲ, ಪ್ರಕರಣ ಬೆಳಕಿಗೆ ಬಂದ ಮೇಲೂ ರಾಜ್ಯಕ್ಕೆ ಭೇಟಿ ನೀಡಿದ್ದ ಮೋದಿ, ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಏಪ್ರಿಲ್ 26ರಂದು ನಡೆದ ಮತದಾನಕ್ಕೂ ಮೂರು ದಿನಗಳ ಮುನ್ನ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಾಸನದಲ್ಲಿ ಸಿಕ್ಕಿದ್ದವು. ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಪ್ರಕರಣದ ಓರ್ವ ಸಂತ್ರಸ್ತೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ಪ್ರಜ್ವಲ್ ಬಂಧನಕ್ಕೆ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...