ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆ ಅಪಹರಣ; ಸಂತ್ರಸ್ತೆಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣದ ಪ್ರಕರಣದಲ್ಲಿ ಸಂತ್ರಸ್ತೆ ಅಪಹರಣವಾಗಿದೆ. ಆಕೆಯನ್ನು ರೇವಣ್ಣ ಕುಟುಂಬವೇ ಅಪಹರಿಸಿದೆ ಎಂದು ಸಂತ್ರಸ್ತೆಯ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೆ.ಆರ್‌ ನಗರದ ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ಆಕೆಯ ಮಗ ರಾಜು ಎಂಬವರು ಕೆ.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಏಪ್ರಿಲ್ 29ರಂದು ತಮ್ಮ ಮನೆಗೆ ಬಂದಿದ್ದ ರೇವಣ್ಣ ಅವರ ಸಹಚರ ಸತೀಶ್ ಬಾಬಣ್ಣ ಎಂಬಾತ ‘ರೇವಣ್ಣ ಅವರು ನಿಮ್ಮನ್ನ ಬರಲು ಹೇಳಿದ್ದಾರೆಂದು’ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾನೆ. ಎಲ್ಲಿಗೆ ಕರೆದುಕೊಂಡು ಹೋದರು. ಆಕೆಯನ್ನು ಕರೆದೊಯ್ದ ನಂತರವಷ್ಟೇ, ಆಕೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿರುವುದು ನಮಗೆ ತಿಳಿಯಿತು” ಎಂದು ಸಂತ್ರಸ್ತೆಯ ಮಗ ದೂರಿನಲ್ಲಿ ವಿವರಿಸಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಕುಟುಂಬವೇ ಸಂತ್ರಸ್ತೆಯನ್ನು ಅಪಹರಣ ಮಾಡಿರುವುದು ಬಿಹಾರದಂತಹ ಪರಿಸ್ಥಿತಿ ಕರ್ನಾಟಕದಲ್ಲಿಯೂ ಎದುರಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯನಾಶಕ್ಕಾಗಿ ಆರೋಪಿಗಳು ಸಂತ್ರಸ್ತೆಯರು ಮತ್ತು ಸಾಕ್ಷಿಗಳನ್ನು ಅಪಹರಿಸುವ ಘಟನೆಗಳು ಬಿಹಾರದಲ್ಲಿ ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಅಂತದ್ದೇ ಘಟನೆಗಳು ರಾಜ್ಯದಲ್ಲಿಯೂ ನಡೆಯುತ್ತಿವೆ. ಈ ಬೆಳವಣಿಗೆಗಳು ಆತಂಕವನ್ನು ಹೆಚ್ಚಿಸುತ್ತಿವೆ.

ಪ್ರಜ್ವಲ್ ಲೈಂಗಿಕ ಹಗರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವ ಸರ್ಕಾರ, ಕೈತೊಳೆದುಕೊಂಡು ಕುಳಿತಿದೆ. ಸಂತ್ರಸ್ತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪ್ರಭಾವಿ ಕುಟುಂಬದ ವಿರುದ್ಧ ದೂರು ಆರೋಪಗಳು ಬಂದಾಗ, ಪ್ರಭಾವಿಗಳು ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶಕ್ಕೆ ಯತ್ನಿಸುತ್ತಾರೆ ಎಂಬುದು ಗೊತ್ತೇ ಇರುವ ಸಂಗತಿ. ಆ ಕಾರಣಕ್ಕಾಗಿ ಹಲವಾರು ಪ್ರಕರಣಗಳಲ್ಲಿ ಪ್ರಭಾವಿಗಳನ್ನು ಬಂಧಿಸಿದರೆ, ಅವರಿಗೆ ಜಾಮೀನನ್ನೂ ಸಹ ನೀಡುವುದಿಲ್ಲ. ಜಾಮೀನು ನೀಡಿದರೂ, ಸಂತ್ರಸ್ತ ಕುಟುಂಬ ಅಥವಾ ಕೃತ್ಯ ನಡೆದಿದ್ದ ಜಿಲ್ಲೆಗೆ ಆರೋಪಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ. ಜೊತೆಗೆ, ದೂರುದಾರರು ಅಥವಾ ಸಂತ್ರಸ್ತರಿಗೆ ರಕ್ಷಣೆಯನ್ನೂ ನೀಡಬೇಕಾಗುತ್ತದೆ.

ಹೀಗಿದ್ದರೂ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯು ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದ್ದು, ಇನ್ನೂ ಆತನ ಬಂಧನವಾಗಿಲ್ಲ. ಇಂತಹ ಸಂದರ್ಭದಲ್ಲಿಯೂ ಸಂತ್ರಸ್ತರಿಗೆ ಸರ್ಕಾರ ರಕ್ಷಣೆ ನೀಡಿಲ್ಲ. ಇದು ಆಡಳಿತ ನಿರ್ಲಕ್ಷ್ಯವೆಂದು ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ, “ಸಿದ್ದರಾಮಯ್ಯನವರೇ ಇನ್ನೂ ಏನು ಮಾಡ್ತಾ ಇದ್ದೀರಿ? ಸಾಕ್ಷಿ ನಾಶ ಮಾಡುವ ಈ ದುಷ್ಟರನ್ನು ಬೇಗ ಬಂಧಿಸಿ, ಇಲ್ಲದಿದ್ದರೆ ಆ ಪಾಪಕ್ಕೆ ನಿಮ್ಮ ಕೊಡುಗೆಯೂ ಇರುತ್ತೆ ಮರೆಯಬೇಡಿ” ಎಂದು ಹಲವಾರು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...