ಅರ್ಧದಷ್ಟು ನಟರು ಮಾರಾಟವಾಗಿದ್ದಾರೆ, ಮಾತನಾಡಲು ಭಯಪಡುತ್ತಾರೆ: ಪ್ರಕಾಶ್ ರಾಜ್

Date:

ರಾಜಕೀಯ ವಿಷಯಗಳ ಬಗ್ಗೆ ಬಾಲಿವುಡ್‌ನ ಮೌನವನ್ನು ನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. “ಅರ್ಧದಷ್ಟು ನಟರು ಮಾರಾಟವಾಗಿದ್ದಾರೆ. ಮಾತನಾಡಲು ತುಂಬಾ ಹೆದರುತ್ತಾರೆ ಅಥವಾ ಸುಮ್ಮನಿದ್ದು ಬಿಡುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಇತ್ತೀಚೆಗೆ ‘ದಿ ಲಲ್ಲನ್ ಟಾಪ್’ ಜೊತೆಗೆ ನಡೆದ ಸಂವಾದದಲ್ಲಿ, ಚಲನಚಿತ್ರೋದ್ಯಮ ಏಕೆ ಮೌನವಾಗಿರಬಾರದು? ಕಲಾವಿದರು ಏಕೆ ಧೈರ್ಯಶಾಲಿಯಾಗಿರಬೇಕು? ವಿಶೇಷವಾಗಿ ಕಥೆಗಳನ್ನು ಹೇಳುವ ಸ್ವಾತಂತ್ರ್ಯ ಅಪಾಯದಲ್ಲಿರುವ ಬಗ್ಗೆ ನಟ ಮಾತನಾಡಿದರು.

ಇದನ್ನು ಓದಿದ್ದೀರಾ? ನಮ್ಮ ರಾಮ ಸಕುಟುಂಬ ಪರಿವಾರದವನು, ಅವರ ರಾಮ ಕೊಲ್ಲುವವನು: ಪ್ರಕಾಶ್‌ ರಾಜ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ ತನ್ನ ಸಹ ನಟರುಗಳನ್ನೂ ಟೀಕಿಸಿದರು. “ಅರ್ಧದಷ್ಟು ನಟರು ಮಾರಾಟವಾಗಿದ್ದಾರೆ. ನನ್ನ ಸ್ವಂತ ಸಹೋದ್ಯೋಗಿಗಳು ಮತ್ತು ಅವರಲ್ಲಿ ಅರ್ಧದಷ್ಟು ಜನರು ಮಾತನಾಡಲು ಭಯಪಡುತ್ತಾರೆ. ಏಕೆಂದರೆ ಅವರಿಗೆ ಮಾತನಾಡುವಷ್ಟು ಶಕ್ತಿಯಿಲ್ಲ” ಎಂದಿದ್ದಾರೆ.

ಇನ್ನು ತಾನು ರಾಜಕೀಯ ವಿಷಯಗಳ ಬಗ್ಗೆ ಮಾತನಾಡಲು ಹೆದರುತ್ತೇನೆ ಎಂದು ಒಪ್ಪಿಕೊಂಡ ತನ್ನ ಆಪ್ತ ಸ್ನೇಹಿತನೊಂದಿಗಿನ ಸಂಭಾಷಣೆಯನ್ನೂ ಪ್ರಕಾಶ್ ರಾಜ್ ನೆನಪಿಸಿಕೊಂಡರು.

“ನನಗೆ ಒಬ್ಬ ಆಪ್ತ ಸ್ನೇಹಿತನಿದ್ದಾನೆ. ಅವನು ನನಗೆ ‘ಪ್ರಕಾಶ್ ನಿಮಗೆ ಶಕ್ತಿ ಇದೆ, ನೀವು ಮಾತನಾಡಬಹುದು, ನನಗೆ ಸಾಧ್ಯವಿಲ್ಲ’ ಎಂದು ಹೇಳಿದ್ದನು. ನಾನು ಅವನನ್ನು ಅರ್ಥಮಾಡಿಕೊಂಡಿರುವುದಾಗಿ ಹೇಳಿದೆ. ಆದರೆ ನಾನು ಆತನನ್ನು ಕ್ಷಮಿಸಲಾಗದು. ಏಕೆಂದರೆ ಭವಿಷ್ಯದಲ್ಲಿ, ಇತಿಹಾಸವು ಅಪರಾಧಗಳನ್ನು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಮೌನವಾಗಿರುವವರನ್ನು ಕ್ಷಮಿಸುವುದಿಲ್ಲ. ಎಲ್ಲರೂ ಜವಾಬ್ದಾರರಾಗುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದರು.

ಇದನ್ನು ಓದಿದ್ದೀರಾ? ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ ವದಂತಿ: ಬಹುಭಾಷಾ ನಟ ಹೇಳಿದ್ದೇನು?

“ಸರ್ಕಾರಗಳು ಕೆಲವು ಇತಿಹಾಸವನ್ನು ಮರೆಮಾಚಲು ಯತ್ನಿಸಿದರೂ ಕೂಡಾ ಚಲನಚಿತ್ರ ನಿರ್ಮಾಪಕರು ತಮ್ಮ ಸಿನಿಮಾದ ಕಥೆ ಏನಿದೆ ಅದಕ್ಕೆ ಬದ್ಧರಾಗಿರಬೇಕು. ಯಾವುದೇ ಪ್ರಬಲ ಸರ್ಕಾರವು ಚರ್ಚೆಗಳನ್ನು ನಿಲ್ಲಿಸುತ್ತದೆ. ಕಲಾವಿದರೂ ಕೂಡಾ ಇದಕ್ಕೆ ಬದ್ಧರಾಗಿರಬೇಕು. ಅವರು ಯಾವ ರೀತಿಯ ಚಲನಚಿತ್ರಗಳನ್ನು ಮಾಡುತ್ತಾರೆ ಎಂಬುದರ ಪ್ರಜ್ಞೆಯನ್ನು ಹೊಂದಿರಬೇಕು. ತಾವು ನಟಿಸಿ ಚಿತ್ರವನ್ನು ಬಿಡುಗಡೆ ಮಾಡಲು ಹೋರಾಡಲು ಸಿದ್ಧರಾಗಿರಬೇಕು. ಆ ದೃಢತೆಯ ಅಗತ್ಯವಿದೆ” ಎಂದರು.

ಫವಾದ್ ಖಾನ್ ಮತ್ತು ವಾಣಿ ಕಪೂರ್ ನಟಿಸಿದ ‘ಅಬೀರ್ ಗುಲಾಲ್’ ಚಿತ್ರಕ್ಕೆ ನಿಷೇಧ ಹೇರಿರುವ ಬಗ್ಗೆಯೂ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ವರದಿಯಾಗಿದೆ.

ಆದರೆ ಒಂದು ಸಿನಿಮಾವು ವಿವಾದವನ್ನು ಹುಟ್ಟುಹಾಕಬಹುದು ಎಂಬ ಕಾರಣಕ್ಕಾಗಿ ಚಲನಚಿತ್ರಗಳನ್ನು ನಿಷೇಧಿಸುವ ಕಲ್ಪನೆಯನ್ನು ರಾಜ್ ವಿರೋಧಿಸಿದರು. “ನಾನು ಯಾವುದೇ ಚಲನಚಿತ್ರವನ್ನು ನಿಷೇಧಿಸುವ ಪರವಾಗಿಲ್ಲ, ಅದು ಪ್ರಚಾರವಾಗಲಿ ಅಥವಾ ಇಲ್ಲದಿರಲಿ. ಸಿನಿಮಾವು ಮಕ್ಕಳ ಮೇಲಿನ ದೌರ್ಜನ್ಯ ಅಥವಾ ಅಶ್ಲೀಲತೆಯನ್ನು ಉತ್ತೇಜಿಸದೆ ಇರುವಾಗ ಆ ಚಿತ್ರವನ್ನು ಯಾಕೆ ನಿಷೇಧಿಸಬೇಕು? ಜನರು ನಿರ್ಧರಿಸಲಿ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...