ಬಡವರಿಗೆ ಆರ್ಥಿಕ ಶಕ್ತಿ ತುಂಬಿದ ಗ್ಯಾರಂಟಿಗಳನ್ನು ‘ಬಿಟ್ಟಿ ಭಾಗ್ಯ’ ಎಂದು ಮತ್ತೆ ಹಂಗಿಸಿದ ಪ್ರಲ್ಹಾದ್‌ ಜೋಶಿ

Date:

ಬಡವರಿಗೆ ಆರ್ಥಿಕಾವಗಿ ನೆರವಾಗಲೆಂದು ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಂಗಿಸಿ ಮಾತನಾಡುವ ಮೂಲ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಟೀಕಿಸುವ ಭರದಲ್ಲಿ ಗ್ಯಾರಂಟಿಗಳನ್ನು ಬಿಟ್ಟಿ ಭಾಗ್ಯ ಎಂದು ಕರೆದಿದ್ದಾರೆ.

“ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆಯನ್ನು ಕಾಂಗ್ರೆಸ್ ಬರಿದು ಮಾಡುತ್ತಿದೆ. ಸ್ವಾತಂತ್ರ್ಯ ಬಂದ ಬಳಿಕ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದೋಚುತ್ತಲೇ ಬಂದಿದೆ. ಈಗ ಭ್ಯಾಗದ ಹೆಸರಿನಲ್ಲಿ ಲೂಟಿ ಮಾಡುತ್ತಿದೆ” ಎಂದು ಹೇಳಿ ಮತಯಾಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ನಾಗರಿಕರಿಗೆ ನಿಜವಾಗಿಯೂ ಬೇಕಾಗಿರುವುದು ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ. ಆದರೆ, ಇದಕ್ಕೆ ಪೂರಕ ಮೂಲ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಯಾವ ಯೋಜನೆಯೂ ಕಾಂಗ್ರೆಸ್ಸಿಗರಲ್ಲಿ ಇಲ್ಲ. ದೇಶದ ಅಭಿವೃದ್ಧಿಗಾಗಿ ಯಾವ ಯೋಚನೆ, ಯೋಜನೆಯೂ ಕಾಂಗ್ರೆಸ್ ಬಳಿ ಇಲ್ಲ. ಇಂಥವರ ಕೈಗೆ ಅಧಿಕಾರ ಹೋದರೆ ಜನರು ಅಧೋಗತಿ ತಲುಪುತ್ತಾರೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಆಡಳಿತದಲ್ಲಿ ಇರುವ ಕರ್ನಾಟಕವೂ ಶ್ರೀಲಂಕಾ ಮತ್ತು ಕೇರಳ ಕಂಡಂತಹ ದುಸ್ಥಿತಿಯನ್ನೇ ಮುಂದೆ ಕಾಣಬೇಕಾದೀತು. ಜನತೆ ಈ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದರು.

“ಕಳೆದ ಹತ್ತು ವರ್ಷದಿಂದ ಬಿಜೆಪಿ ಆಡಳಿತದಲ್ಲಿ ಸಮೃದ್ಧ ಭಾರತವನ್ನು ಸೃಷ್ಟಿಸಲಾಗುತ್ತಿದೆ. ಸಮರ್ಥ, ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ್ತೆ ಮತ್ತೆ ಬಿಜೆಪಿಯನ್ನೇ ಅಧಿಕಾರಕ್ಕೆ ತರಬೇಕು” ಎಂದು ಪದವೀಧರ ಮತದಾರರಲ್ಲಿ ಜೋಶಿ ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಕೃಷ್ಣ ನಾಯ್ಕ, ಮಾಜಿ ಸಚಿವ ಆನಂದ ಸಿಂಗ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ, ಎಸ್ಟಿ ಮೋರ್ಚಾ ಪ್ರಮುಖರಾದ ಬಂಗಾರು ಹನಮಂತ, ಹಾಗೂ ಪಕ್ಷದ ಪ್ರಮುಖರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...