ಬಿಜೆಪಿಯ ಚಾರ್‌ ಸೋ ಪಾರ್ ಕನಸು ಭಗ್ನ: ಯೂಟ್ಯೂಬರ್‌ಗಳಿಗೆ ‘ಕ್ರೆಡಿಟ್’ ನೀಡಿದ ಪ್ರಶಾಂತ್ ಭೂಷಣ್

Date:

ಲೋಕಸಭೆ ಚುನಾವಣೆಯಲ್ಲಿ ಚಾರ್‌ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲುವು) ಸಾಧಿಸುವುದಾಗಿ ಹೇಳಿಕೊಂಡು ಬಂದ ಬಿಜೆಪಿಗೆ 300ರ ಗಡಿ ದಾಟಲು ಕೂಡ ಸಾಧ್ಯವಾಗದಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಲೇವಡಿ ಮಾಡಿದ್ದು ಇಂಡಿಯಾ ಒಕ್ಕೂಟದ ಸಾಧನೆಗೆ ಯೂಟ್ಯೂಬರ್‌ಗಳಿಗೆ ಕ್ರೆಡಿಟ್ ನೀಡಿದ್ದಾರೆ.

ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ಭೂಷಣ್, “ಇಂಡಿಯಾ ಮೈತ್ರಿಕೂಟಕ್ಕಿಂತ ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಪಡೆದಿದ್ದರೂ, ಈ ಫಲಿತಾಂಶವು ಎನ್‌ಡಿಎಗೆ ಸೋಲಾಗಿದೆ. ಚಾರ್‌ ಸೋ ಪಾರ್ ಎಂದು ಹೇಳಿಕೊಂಡವರು 300ಕ್ಕೂ ಕಡಿಮೆ ಸ್ಥಾನವನ್ನು ಪಡೆದುಕೊಂಡಿದ್ದಾರೆ” ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಎಲೆಕ್ಟೋರಲ್‌ ಬಾಂಡ್ ಸಮಗ್ರ ತನಿಖೆಗೆ ಎಸ್‌ಐಟಿ ನೇಮಕ ಅಗತ್ಯ: ಪ್ರಶಾಂತ್ ಭೂಷಣ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ ಇಂಡಿಯಾ ಒಕ್ಕೂಟ ಯಾವ ಸ್ಥಿತಿಯಲ್ಲಿ ಸ್ಪರ್ಧಿಸಿದೆ ನೋಡಿ. ಬಿಜೆಪಿ ಬಳಿ ಇರುವ ಶೇ 10ರಷ್ಟು ಹಣವೂ ಅವರ ಬಳಿ ಇರಲಿಲ್ಲ. ಅವರ ಬ್ಯಾಂಕ್ ಖಾತೆಗಳನ್ನು ಸೀಝ್ ಮಾಡಲಾಗಿತ್ತು. ಅವರ ನಾಯಕರನ್ನು ಬಂಧಿಸಲಾಗಿತ್ತು. ವಾಸ್ತವವಾಗಿ ಇಡೀ ಮುಖ್ಯವಾಹಿನಿ ಮಾಧ್ಯಮಗಳು ಬಿಜೆಪಿಯ ಪ್ರಚಾರದ ಭಾಗವಾಗಿತ್ತು” ಎಂದು ದೂರಿದ್ದಾರೆ.

“ಭಾರತದ ಚುನಾವಣಾ ಆಯೋಗ ಕೂಡ ಪಕ್ಷಪಾತಿಯಾಗಿ, ಬಿಜೆಪಿ ಪರವಾಗಿ ಬ್ಯಾಟಿಂಗ್ ಮಾಡಿತ್ತು. ಬಹುತೇಕ ನ್ಯಾಯಾಂಗ ಸೇರಿದಂತೆ ಬಹುತೇಕ ಎಲ್ಲ ಸಂಸ್ಥೆಗಳೂ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿವೆ. ಬಿಜೆಪಿಯ ದವಡೆಯಿಂದ ವಿಜಯವನ್ನು ಕಿತ್ತುಕೊಳ್ಳುವುದೇ ಪ್ರತಿಪಕ್ಷಗಳ ಪಾಲಿಗೆ ದೊಡ್ಡ ಸಾಧನೆ” ಎಂದು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ?  5 ರಾಜ್ಯಗಳ ಚುನಾವಣೆಯನ್ನು ಮುಂದೂಡುವುದೇ ‘ಒಂದು ರಾಷ್ಟ್ರ ಒಂದು ಚುನಾವಣೆ’ ಗುರಿ: ಪ್ರಶಾಂತ್ ಭೂಷಣ್

ಧ್ರುವ್ ರಾಠೆ ಸೇರಿ, ಹಲವಾರಿಗೆ ಶ್ರೇಯಸ್ಸು

ಪ್ರಶಾಂತ್ ಭೂಷಣ್

“ಇವೆಲ್ಲವು ಭಾರತದ ಪ್ರಮುಖ ನಾಯಕರುಗಳಾದ ರಾಹುಲ್, ಪ್ರಿಯಾಂಕಾ, ಅಖಿಲೇಶ್, ಮಮತಾ, ತೇಜಸ್ವಿಯಿಂದ ಸಾಧ್ಯವಾಯಿತು. ಹಾಗೆಯೇ ಯೂಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವಿಶೇಷವಾಗಿ ರವೀಶ್, ಧ್ರುವ್, ಅಜಿತ್ ಅಂಜುಮ್, ಆಕಾಶ್ ಬ್ಯಾನರ್ಜಿ, ಪುಣ್ಯ ಪ್ರಸೂನ್, ಮಿಸ್ ಮೆಡುಸಾ, ನೇಹಾ ಸಿಂಗ್ ರಾಥೋಡ್, ರಾಂಟಿಂಗ್ ಗೋಲಾ, ಸಾಕ್ಷಿ ಜೋಶಿ ಅವರ ವೀರೋಚಿತ ಪ್ರಯತ್ನಗಳಿಂದ ಇದು ಸಾಧ್ಯವಾಯಿತು. ಹಾಗೆಯೇ ಯೂಟ್ಯೂಬ್‌ ಚಾನೆಲ್‌ಗಳಾದ ಡಿಬಿ ನ್ಯೂಸ್, 4 ಪಿಎಂ ನ್ಯೂಸ್‌ನಿಂದಾಗಿ ಇದು ಸಾಧ್ಯವಾಗಿದೆ. ಸಾಮಾಜಿಕ ಮಾಧ್ಯಮ ಪ್ರಭಾವಿ ಜುಬೈರ್ ಮತ್ತು ಇತರರ ಕೊಡುಗೆಯೂ ಇದೆ” ಎಂದು ಹೇಳಿದ್ದಾರೆ.

“ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಒಗ್ಗೂಡಿದ ಅನೇಕ ತಿಳಿದ, ತೆರೆಮರೆಯ ಹಿರೋಗಳು ಜೊತೆಯಾಗಿದ್ದಾರೆ. ನಾವೆಲ್ಲರೂ ಈ ಕ್ಷಣವನ್ನು ಸವಿಯೋಣ ಮತ್ತು ಆಚರಿಸೋಣ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...